AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಎಚ್ಚರ ತಪ್ಪಿದರೆ 5 ರನ್ ಪೆನಾಲ್ಟಿ! ಟಿ20 ವಿಶ್ವಕಪ್​ನಲ್ಲಿ ಬಳಸುತ್ತಿರುವ ಈ ನಿಯಮದ ಬಗ್ಗೆ ನಿಮಗೆಷ್ಟು ಗೊತ್ತು?

T20 World Cup 2024: ಟಿ20 ವಿಶ್ವಕಪ್‌ನಲ್ಲಿ ನಿಗದಿತ ಸಮಯದಲ್ಲಿ ತಮ್ಮ ಓವರ್‌ಗಳನ್ನು ಪೂರ್ಣಗೊಳಿಸದ ತಂಡಗಳಿಗೆ ಈ ನಿಯಮ ದುಬಾರಿಯಾಗುವುದಂತೂ ಖಚಿತ. ಪ್ರಯೋಗವಾಗಿ ಈ ನಿಯಮವು ಯಶಸ್ವಿಯಾದ ನಂತರ ಐಸಿಸಿ, ಈ ವಿಶ್ವಕಪ್‌ನಿಂದ ವೈಟ್ ಬಾಲ್ ಮಾದರಿಯಲ್ಲಿ ಸ್ಟಾಪ್ ಕ್ಲಾಕ್ ನಿಯಮವನ್ನು ಬಳಸಲು ಮುಂದಾಗಿದೆ.

T20 World Cup 2024: ಎಚ್ಚರ ತಪ್ಪಿದರೆ 5 ರನ್ ಪೆನಾಲ್ಟಿ! ಟಿ20 ವಿಶ್ವಕಪ್​ನಲ್ಲಿ ಬಳಸುತ್ತಿರುವ ಈ ನಿಯಮದ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟಾಪ್ ಕ್ಲಾಕ್ ನಿಯಮ
ಪೃಥ್ವಿಶಂಕರ
|

Updated on: May 30, 2024 | 8:30 PM

Share

2024 ರ ಟಿ20 ವಿಶ್ವಕಪ್ (T20 World Cup 2024) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಐಸಿಸಿಯ (ICC) ಈ ಮೆಗಾ ಈವೆಂಟ್ ಜೂನ್ 2 ರಿಂದ ಪ್ರಾರಂಭವಾಗಲಿದೆ. 2007ರಿಂದ ಆರಂಭವಾದ ಈ ಮಿನಿ ವಿಶ್ವಸಮರ ಈಗಾಗಲೇ 8 ಆವೃತ್ತಿಗಳನ್ನು ಮುಗಿಸಿದ್ದು, 9ನೇ ಸೀಸನ್​ಗೆ ಕಾಲಿಟ್ಟಿದೆ. ಕಳೆದಿರುವ 8 ಆವೃತ್ತಿಗಳಲ್ಲೂ ಐಸಿಸಿ ಹಲವು ನೂತನ ನಿಯಮಗಳನ್ನು ಈ ಮಾದರಿಯಲ್ಲಿ ಅಳವಡಿಸಿಕೊಂಡಿದೆ. ಅದರಂತೆ ಈ ಬಾರಿಯೂ ನೂತನ ನಿಯಮವೊಂದು ಅಳವಡಿಸಿಕೊಂಡಿದೆ. ಆ ನಿಯಮವೇ ಸ್ಟಾಪ್ ಕ್ಲಾಕ್ ನಿಯಮ (Stop Clock Rule).

ಟಿ20 ವಿಶ್ವಕಪ್‌ನಲ್ಲಿ ನಿಗದಿತ ಸಮಯದಲ್ಲಿ ತಮ್ಮ ಓವರ್‌ಗಳನ್ನು ಪೂರ್ಣಗೊಳಿಸದ ತಂಡಗಳಿಗೆ ಈ ನಿಯಮ ದುಬಾರಿಯಾಗುವುದಂತೂ ಖಚಿತ. ಪ್ರಯೋಗವಾಗಿ ಈ ನಿಯಮವು ಯಶಸ್ವಿಯಾದ ನಂತರ ಐಸಿಸಿ, ಈ ವಿಶ್ವಕಪ್‌ನಿಂದ ವೈಟ್ ಬಾಲ್ ಮಾದರಿಯಲ್ಲಿ ಸ್ಟಾಪ್ ಕ್ಲಾಕ್ ನಿಯಮವನ್ನು ಬಳಸಲು ಮುಂದಾಗಿದೆ.

ಟಿ20 ವಿಶ್ವಕಪ್ ಆಡಿದ ಆಟಗಾರನಿಗೆ 5 ವರ್ಷ ಜೈಲು! 20 ವರ್ಷಗಳ ನಿಷೇಧ

ಏನಿದು ಸ್ಟಾಪ್ ಕ್ಲಾಕ್ ನಿಯಮ?

ಈ ನಿಯಮದ ಪ್ರಕಾರ ಎರಡು ಓವರ್‌ಗಳ ನಡುವೆ ತಂಡಕ್ಕೆ ಮುಂದಿನ ಓವರ್ ಆರಂಭಿಸಲು 60 ಸೆಕೆಂಡ್‌ ಸಮಯಾವಕಾಶವನ್ನು ನೀಡಲಾಗುತ್ತದೆ. ಈ ಸಮಯದ ಮಧ್ಯಂತರದಲ್ಲಿ ಬೌಲಿಂಗ್ ತಂಡವು ಮುಂದಿನ ಓವರ್ ಅನ್ನು ಪ್ರಾರಂಭಿಸಬೇಕಾಗುತ್ತದೆ. ಒಂದು ಓವರ್ ಮುಗಿದ ತಕ್ಷಣ, ಮೂರನೇ ಅಂಪೈರ್ ಈ ನಿಯಮವನ್ನು ಅನುಷ್ಠಾನಕ್ಕೆ ತರುತ್ತಾರೆ. ಈ ಸಮಯದ ಮಿತಿಯೊಳಗೆ ಓವರ್ ಪ್ರಾರಂಭವಾಗದಿದ್ದರೆ, ಮೈದಾನದಲ್ಲಿರುವ ಅಂಪೈರ್, ಬೌಲಿಂಗ್ ತಂಡಕ್ಕೆ ಎರಡು ಎಚ್ಚರಿಕೆಗಳನ್ನು ನೀಡುತ್ತಾರೆ. ಮೂರನೇ ಎಚ್ಚರಿಕೆಯಲ್ಲಿ ಐದು ರನ್‌ಗಳ ದಂಡ ವಿಧಿಸಲಾಗುತ್ತದೆ. ಈ ರನ್‌ಗಳು ಬ್ಯಾಟಿಂಗ್ ತಂಡದ ಖಾತೆಗೆ ಸೇರ್ಪಡೆಯಾಗಲಿವೆ.

ಡಿ. 23 ರಂದು ಪ್ರಯೋಗವಾಗಿ ಜಾರಿ

ಐಸಿಸಿ ಡಿಸೆಂಬರ್ 2023 ರಿಂದ ವೈಟ್ ಬಾಲ್ ಮಾದರಿಯಲ್ಲಿ ಈ ನಿಯಮವನ್ನು ಜಾರಿಗೆ ತಂದಿದೆ. ಈ ನಿಯಮವು ಪಂದ್ಯದ ಸಮಯದಲ್ಲಿ 20 ನಿಮಿಷಗಳ ಸಮಯವನ್ನು ಉಳಿಸುತ್ತದೆ. ಈ ಯಶಸ್ಸಿನಿಂದ ಉತ್ತೇಜಿತವಾದ ಐಸಿಸಿ, ಈ ನಿಯಮವನ್ನು ಟಿ20 ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಜಾರಿಗೆ ತರುತ್ತಿದೆ.

ಈ ಸಂದರ್ಭದಲ್ಲಿ ಈ ನಿಯಮ ಅನ್ವಯವಾಗುವುದಿಲ್ಲ

ವಾಸ್ತವವಾಗಿ ಪಂದ್ಯದ ವೇಳೆ ಕೆಲವು ಸಂದರ್ಭಗಳಲ್ಲಿ ಈ ನಿಯಮ ಬಳಸಲಾಗುವುದಿಲ್ಲ. ಆದಾಗ್ಯೂ, ಈ ನಿಯಮವನ್ನು ಬಳಸುವುದು ಹಾಗೂ ಬಳಸದಿರುವುದು ಸಂಪೂರ್ಣವಾಗಿ ಮೂರನೇ ಅಂಪೈರ್ ಮೇಲೆ ಅವಲಂಬಿತವಾಗಿರುತ್ತದೆ. ಹೊಸ ಬ್ಯಾಟ್ಸ್‌ಮನ್ ಕ್ರಿಸ್​ಗೆ ಬರುವ ಸಂದರ್ಭದಲ್ಲಿ ಈ ನಿಯಮ ಅನ್ವಯವಾಗುವುದಿಲ್ಲ. ಅಲ್ಲದೆ ಅಧಿಕೃತ ಪಾನೀಯಗಳ ವಿರಾಮದ ಸಮಯದಲ್ಲೂ ಈ ನಿಯಮದಿಂದ ರಿಯಾಯಿತಿ ಇರುತ್ತದೆ. ಬ್ಯಾಟ್ಸ್‌ಮನ್ ಅಥವಾ ಫೀಲ್ಡರ್‌ಗೆ ಗಾಯವಾದಾಗ ಅಥವಾ ಫೀಲ್ಡಿಂಗ್ ತಂಡದಿಂದ ಸಮಯ ವ್ಯರ್ಥವಾಗದ ಸಂದರ್ಭದಲ್ಲೂ ಈ ನಿಯಮವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ