AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕೈಕ ವೇಗಿ, ಮೂವರು ಸ್ಪಿನ್ನರ್​: ಹೀಗಿರಲಿದೆ ಟೀಮ್ ಇಂಡಿಯಾದ ರಣತಂತ್ರ

India vs Pakistan: ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಕೊಲಂಬೊದಲ್ಲಿ ಇಂದು (ಫೆ.15) ರಾತ್ರಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮಹತ್ವದ ಬದಲಾವಣೆ ಮಾಡುವ ಸಾಧ್ಯತೆ ಹೆಚ್ಚಿದೆ. ಅದರಲ್ಲೂ ಭಾರತ ತಂಡ 5+3+3 ಸಂಯೋಜನೆಯಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಏಕೈಕ ವೇಗಿ, ಮೂವರು ಸ್ಪಿನ್ನರ್​: ಹೀಗಿರಲಿದೆ ಟೀಮ್ ಇಂಡಿಯಾದ ರಣತಂತ್ರ
Team India
ಝಾಹಿರ್ ಯೂಸುಫ್
|

Updated on: Feb 15, 2026 | 7:54 AM

Share

T20 World Cup 2026: ಟಿ20 ವಿಶ್ವಕಪ್​​ನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು ನಡೆಯಲಿರುವ ಟಿ20 ವಿಶ್ವಕಪ್​​ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಕೊಲಂಬೊದ ಆರ್​​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡುವ ಮುನ್ಸೂಚನೆ ಸಿಕ್ಕಿದೆ. ಅದರಂತೆ ಭಾರತ ತಂಡದ ಆಡುವ ಬಳಗದಲ್ಲಿ 2 ಬದಲಾವಣೆಯಾಗುವುದು ಬಹುತೇಕ ಖಚಿತ.

ಈ ಬದಲಾವಣೆಯೊಂದಿಗೆ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅನಾರೋಗ್ಯದ ಕಾರಣ ನಮೀಬಿಯ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಅಭಿಷೇಕ್ ಸಂಪೂರ್ಣ ಚೇತರಿಸಿಕೊಂಡಿದ್ದು, ಪಾಕ್ ವಿರುದ್ಧ ಕಣಕ್ಕಿಳಿಯಲಿದ್ದಾರೆ ಎಂದು ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ದೃಢಪಡಿಸಿದ್ದಾರೆ.

ಹಾಗೆಯೇ ಕುಲ್ದೀಪ್ ಯಾದವ್ ಅವರನ್ನು ಸಹ ಪ್ಲೇಯಿಂಗ್ ಇಲೆವೆನ್​​ನಲ್ಲಿ ಸೇರಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಕಾರಿಯಾಗಿದೆ. ಚೈನಾಮನ್ ಬೌಲರ್ ಆಗಿರುವ ಕುಲ್ದೀಪ್ ಇಂತಹ ಪಿಚ್‌ಗಳಲ್ಲಿ ಹೆಚ್ಚು ಪರಿಣಾಮಕಾರಿ. ಹೀಗಾಗಿ ಅವರು ಸಹ ಪ್ಲೇಯಿಂಗ್ ಇಲೆವೆನ್​​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಪಾಕ್ ವಿರುದ್ಧ ಕುಲ್ದೀಪ್ ದಾಖಲೆ ಹೇಗಿದೆ?

2025ರ ಏಷ್ಯಾ ಕಪ್ ಫೈನಲ್‌ನಲ್ಲಿ ಕುಲ್ದೀಪ್ ಯಾದವ್ ಪಾಕಿಸ್ತಾನ್ ವಿರುದ್ಧ 30 ರನ್ ನೀಡಿ 4 ವಿಕೆಟ್ ಪಡೆಯುವ ಮೂಲಕ ಭಾರತ ತಂಡಕ್ಕೆ ಜಯ ತಂದುಕೊಟ್ಟಿದ್ದರು. ಅಲ್ಲದೆ ಆ ಟೂರ್ನಿಯಲ್ಲಿ ಒಟ್ಟು 17 ವಿಕೆಟ್ ಪಡೆಯುವ ಮೂಲಕ ಹೊಸ ದಾಖಲೆ ಬರೆದಿದ್ದರು.

ಹಾಗೆಯೇ ಪಾಕಿಸ್ತಾನ್ ವಿರುದ್ಧ ಈವರೆಗೆ 10 ಪಂದ್ಯಗಳನ್ನಾಡಿರುವ ಕುಲ್ದೀಪ್ ಯಾದವ್ 12.56 ಸರಾಸರಿಯಲ್ಲಿ ಒಟ್ಟು 23 ವಿಕೆಟ್ ಕಬಳಿಸಿದ್ದಾರೆ. ಹೀಗಾಗಿ ಕೊಲಂಬೊ ಪಿಚ್​​ನಲ್ಲಿ ಟೀಮ್ ಇಂಡಿಯಾ ಪಾಲಿಗೆ ಕುಲ್ದೀಪ್ ಯಾದವ್ ಟ್ರಂಪ್ ಕಾರ್ಡ್ ಆಗಿ ಪರಿಣಮಿಸಬಹುದು.

ಏಕೈಕ ವೇಗಿ?

ಕುಲ್ದೀಪ್ ಯಾದವ್ ಅವರನ್ನು ಕಣಕ್ಕಿಳಿಸುವುದರಿಂದ ಟೀಮ್ ಇಂಡಿಯಾ ಏಕೈಕ ವೇಗಿಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಅದರಂತೆ ಟೀಮ್ ಇಂಡಿಯಾ ಪರ ಪ್ರಮುಖ ವೇಗಿಯಾಗಿ ಜಸ್​​ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಹೆಚ್ಚುವರಿ ವೇಗದ ಬೌಲರ್​​​ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ಶಿವಂ ದುಬೆ ಸಾಥ್ ನೀಡಲಿದ್ದಾರೆ. ಅಂದರೆ ಕುಲ್ದೀಪ್ ಯಾದವ್​ಗೆ ಚಾನ್ಸ್ ನೀಡಲು ಅರ್ಷದೀಪ್ ಸಿಂಗ್ ಅವರನ್ನು ಕೈ ಬಿಡಬಹುದು.

ಸ್ಪಿನ್ನಿಂಗ್ ತಂತ್ರ:

ಶ್ರೀಲಂಕಾದ ಈ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಕಾರಿಯಾಗಿರುವುದರಿಂದ, ಭಾರತ ತಂಡವು ಮೂವರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಇಲ್ಲಿನ ಪಿಚ್ ಸಾಂಪ್ರದಾಯಿಕವಾಗಿ ಕಪ್ಪು ಮಣ್ಣಿನಿಂದ ಕೂಡಿದ್ದು, ಪಂದ್ಯ ಮುಂದುವರೆದಂತೆ ಸ್ಪಿನ್ನರ್‌ಗಳಿಗೆ ಹೆಚ್ಚಿನ ನೆರವು ನೀಡುತ್ತದೆ. ಚೆಂಡು ಪಿಚ್‌ನಲ್ಲಿ ಸ್ವಲ್ಪ ಹಿಡಿತ ಪಡೆಯುವುದರಿಂದ ಬ್ಯಾಟರ್‌ಗಳಿಗೆ ದೊಡ್ಡ ಹೊಡೆತಗಳನ್ನು ಬಾರಿಸುವುದು ಸವಾಲಾಗಬಹುದು.

ಇದನ್ನೂ ಓದಿ: ಮೂರೇ 3 ಎಸೆತಗಳಿಂದ ವಿಶ್ವ ದಾಖಲೆ ತಪ್ಪಿಸಿಕೊಂಡ ಸೌತ್ ಆಫ್ರಿಕಾ

ಇದಾಗ್ಯೂ ಆರಂಭದಲ್ಲಿ ವೇಗಿಗಳು ಹೊಸ ಚೆಂಡಿನಲ್ಲಿ ಸ್ವಲ್ಪ ಸ್ವಿಂಗ್ ಮಾಡಬಲ್ಲರು. ಹೀಗಾಗಿ ಟೀಮ್ ಇಂಡಿಯಾ ಆರಂಭದಲ್ಲಿ ಬುಮ್ರಾ ಹಾಗೂ ಹಾರ್ದಿಕ್​ನಿಂದ ಬೌಲಿಂಗ್ ಮಾಡಿಸಿ ಆ ಬಳಿಕ ಸ್ಪಿನ್ನರ್​​​ಗಳ ಮೂಲಕ ರಣತಂತ್ರ ರೂಪಿಸುವ ಸಾಧ್ಯತೆಯಿದೆ.

5+3+3 ಸಂಯೋಜನೆ:

ಪಾಕಿಸ್ತಾನ್ ವಿರುದ್ಧದ ಈ ಹೈವೋಲ್ಟೇಜ್ ಪಂದ್ಯಕ್ಕೆ ಟೀಮ್ ಇಂಡಿಯಾ 5+3+3 ಸಂಯೋಜನೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಅಂದರೆ ಇಲ್ಲಿ ಐವರು ಬ್ಯಾಟರ್​ಗಳು + ಮೂವರು ಆಲ್​ರೌಂಡರ್​ಗಳು + ಮೂವರು ಬೌಲರ್​ಗಳು ಇರಲಿದ್ದಾರೆ.

ಬ್ಯಾಟರ್​ಗಳಾಗಿ ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ ಹಾಗೂ ರಿಂಕು ಸಿಂಗ್ ಕಣಕ್ಕಿಳಿದರೆ, ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಹಾಗೂ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಬೌಲರ್​​ಗಳಾಗಿ ಜಸ್​ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ ಹಾಗೂ ಕುಲ್ದೀಪ್ ಯಾದವ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಬಹುದು.  ಅದರಂತೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ 11 ಈ ಕೆಳಗಿನಂತಿರಲಿದೆ…

  • ಅಭಿಷೇಕ್ ಶರ್ಮಾ
  • ಇಶಾನ್ ಕಿಶನ್ (ವಿಕೇಟ್ ಕೀಪರ್)
  • ತಿಲಕ್ ವರ್ಮಾ
  • ಸೂರ್ಯಕುಮಾರ್ ಯಾದವ್ (ನಾಯಕ)
  • ಹಾರ್ದಿಕ್ ಪಾಂಡ್ಯ
  • ಶಿವಂ ದುಬೆ
  • ರಿಂಕು ಸಿಂಗ್
  • ಅಕ್ಷರ್ ಪಟೇಲ್
  • ವರುಣ್ ಚಕ್ರವರ್ತಿ
  • ಕುಲ್ದೀಪ್ ಯಾದವ್
  • ಜಸ್ಪ್ರೀತ್ ಬುಮ್ರಾ
Follow Us
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು