AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: 2026 ರ ಟಿ20 ವಿಶ್ವಕಪ್​ಗೆ ದಿನಾಂಕ ನಿಗದಿ; ಫೈನಲ್ ಆತಿಥ್ಯ ಕೈಜಾರುವ ಭಯದಲ್ಲಿ ಭಾರತ

T20 World Cup 2026: 2026ರ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ ಎಂದು ESPNcricinfo ವರದಿ ಮಾಡಿದೆ. ಐಸಿಸಿ ಈ ಮಾಹಿತಿಯನ್ನು 20 ತಂಡಗಳಿಗೂ ತಿಳಿಸಿದೆ ಎನ್ನಲಾಗಿದೆ. ಫೈನಲ್ ಪಂದ್ಯ ಅಹಮದಾಬಾದ್ ಅಥವಾ ಕೊಲಂಬೊದಲ್ಲಿ ನಡೆಯುವ ಸಾಧ್ಯತೆಯಿದೆ. ಈಗಾಗಲೇ 15 ತಂಡಗಳು ಈ ಟೂರ್ನಿಗೆ ಅರ್ಹತೆ ಪಡೆದಿವೆ.

T20 World Cup 2026: 2026 ರ ಟಿ20 ವಿಶ್ವಕಪ್​ಗೆ ದಿನಾಂಕ ನಿಗದಿ; ಫೈನಲ್ ಆತಿಥ್ಯ ಕೈಜಾರುವ ಭಯದಲ್ಲಿ ಭಾರತ
T20 World Cup 2026
ಪೃಥ್ವಿಶಂಕರ
|

Updated on:Sep 09, 2025 | 8:20 PM

Share

ಇಂದಿನಿಂದ ಯುಎಇಯಲ್ಲಿ ಟಿ20 ಏಷ್ಯಾಕಪ್ (Asia Cup 2025) ಆರಂಭವಾಗುತ್ತಿದೆ. ವಾಸ್ತವವಾಗಿ ಮುಂದಿನ ವರ್ಷ ಟಿ20 ವಿಶ್ವಕಪ್ (T20 World Cup 2026) ನಡೆಯುತ್ತಿರುವುದರಿಂದ ಏಷ್ಯಾಕಪ್ ಅನ್ನು ಟಿ20 ಮಾದರಿಯಲ್ಲಿ ನಡೆಸಲಾಗುತ್ತಿದೆ. ಈ ನಡುವೆ ಮುಂದಿನ ವರ್ಷ ಅಂದರೆ 2026 ರಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್​ ಬಗ್ಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿಯ ಪ್ರಕಾರ 2026 ರ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಆರಂಭವಾಗಲಿದ್ದು, ಅದರ ಫೈನಲ್ ಪಂದ್ಯ ಮಾರ್ಚ್​ 8 ರಂದು ನಡೆಯಲಿದೆ. ಈ ಬಗ್ಗೆ ಈ ವಿಶ್ವಕಪ್​ನಲ್ಲಿ ಭಾಗವಹಿಸುವ ಎಲ್ಲಾ 20 ತಂಡಗಳಿಗೂ ಐಸಿಸಿ ಮಾಹಿತಿ ನೀಡಿದೆ ಎಂದು ವರದಿಯಾಗಿದೆ. ಆದಾಗ್ಯೂ ಈ ಬಗ್ಗೆ ಐಸಿಸಿಯಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಂದಿಲ್ಲ.

2026 ರ ಟಿ20 ವಿಶ್ವಕಪ್ ಭಾರತ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿದೆ. ಕಳೆದ ಬಾರಿಯಂತೆ, ಈ ಬಾರಿಯೂ ಒಟ್ಟು 20 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ. ಈ ಪಂದ್ಯಾವಳಿಗಾಗಿ ಐಸಿಸಿ ಈಗಾಗಲೇ ಸಿದ್ಧತೆಗಳನ್ನು ತೀವ್ರಗೊಳಿಸಿದೆ. 2026 ರ ಟಿ20 ವಿಶ್ವಕಪ್ ಫೆಬ್ರವರಿಯಲ್ಲಿ ಆರಂಭವಾಗಿ ಮಾರ್ಚ್​ನಲ್ಲಿ ಅಂತ್ಯವಾಗಲಿದೆ ಎಂದು ಈ ಮೊದಲೇ ವರದಿಯಾಗಿತ್ತು. ಅದರಂತೆ ಈಗ ಯಾವ ದಿನದಿಂದ ಶುರುವಾಗಲಿದೆ ಎಂಬ ಮಾಹಿತಿ ಸಿಕ್ಕಿದೆ.

2026 ರ ಟಿ20 ವಿಶ್ವಕಪ್ ದಿನಾಂಕ ನಿಗದಿ

ಮೇಲೆ ಹೇಳಿದಂತೆ ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿಯ ಪ್ರಕಾರ, 2026 ರ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ನಡೆಯಲಿದೆ. ಅಲ್ಲದೆ ಭಾರತದ ಐದು ಸ್ಥಳಗಳು ಮತ್ತು ಶ್ರೀಲಂಕಾದಲ್ಲಿ ಎರಡು ಸ್ಥಳಗಳು ಈ ವಿಶ್ವಕಪ್​ಗೆ ಆತಿಥ್ಯ ನೀಡಲಿವೆ. ಆದಾಗ್ಯೂ, ಯಾವ ಪಂದ್ಯವನ್ನು ಎಲ್ಲಿ ನಡೆಸಬೇಕೆಂದು ಇನ್ನೂ ನಿರ್ಧರಿಸಲಾಗಿಲ್ಲ. ಐಸಿಸಿ ಇನ್ನೂ ವೇಳಾಪಟ್ಟಿಯನ್ನು ಅಂತಿಮಗೊಳಿಸುತ್ತಿದ್ದು, ಪಂದ್ಯಾವಳಿಯಲ್ಲಿ ಭಾಗವಹಿಸುವ ದೇಶಗಳಿಗೆ ಈ ಬಗ್ಗೆ ತಿಳಿಸಿದೆ ಎಂದು ವರದಿಯಾಗಿದೆ.

2026 ರ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯವನ್ನು ಎಲ್ಲಿ ನಡೆಸಬೇಕೆಂದು ಇನ್ನೂ ನಿರ್ಧರಿಸಲಾಗಿಲ್ಲ. ವರದಿಗಳ ಪ್ರಕಾರ, ಪಾಕಿಸ್ತಾನ ಫೈನಲ್ ತಲುಪುತ್ತದೆಯೋ ಇಲ್ಲವೋ ಎಂಬುದರ ಆಧಾರದ ಮೇಲೆ ಫೈನಲ್ ಅಹಮದಾಬಾದ್ ಅಥವಾ ಕೊಲಂಬೊದಲ್ಲಿ ನಡೆಯಲಿದೆ. ಪಾಕಿಸ್ತಾನ ಫೈನಲ್‌ಗೆ ಅರ್ಹತೆ ಪಡೆದರೆ, ಈ ಪಂದ್ಯವನ್ನು ಭಾರತದಲ್ಲಿ ಆಡಲಾಗುವುದಿಲ್ಲ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ರಾಜಕೀಯ ಸಂಬಂಧಗಳಿಂದಾಗಿ, ಎರಡೂ ತಂಡಗಳು ಪರಸ್ಪರರ ದೇಶಗಳಲ್ಲಿ ಆಡುತ್ತಿಲ್ಲ. ಹೀಗಾಗಿ ಪಾಕಿಸ್ತಾನ ಫೈನಲ್​ಗೆ ಅರ್ಹತೆ ಪಡೆದರೆ, ಆ ಪಂದ್ಯ ಶ್ರೀಲಂಕಾದಲ್ಲಿ ನಡೆಯಲಿದೆ. ಒಂದು ವೇಳೆ ಪಾಕ್ ತಂಡ ಫೈನಲ್​ಗೆ ಬರದಿದ್ದರೆ, ಈ ಪಂದ್ಯ ಭಾರತದಲ್ಲಿ ನಡೆಯಲಿದೆ.

ಇಲ್ಲಿಯವರೆಗೆ 15 ತಂಡಗಳು ಅರ್ಹತೆ ಪಡೆದಿವೆ

ಇಲ್ಲಿಯವರೆಗೆ, 15 ತಂಡಗಳು 2026 ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದಿವೆ. ಭಾರತ, ಶ್ರೀಲಂಕಾ, ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಅಮೆರಿಕ, ವೆಸ್ಟ್ ಇಂಡೀಸ್, ನ್ಯೂಜಿಲೆಂಡ್, ಪಾಕಿಸ್ತಾನ, ಐರ್ಲೆಂಡ್, ಕೆನಡಾ, ನೆದರ್ಲ್ಯಾಂಡ್ಸ್ ಮತ್ತು ಇಟಲಿ ತಮ್ಮ ಸ್ಥಾನವನ್ನು ಖಚಿತಪಡಿಸಿವೆ. ಉಳಿದ 5 ತಂಡಗಳಲ್ಲಿ, ಎರಡು ತಂಡಗಳು ಆಫ್ರಿಕಾ ಅರ್ಹತಾ ಸುತ್ತಿನಿಂದ ಮತ್ತು ಮೂರು ಏಷ್ಯಾ ಮತ್ತು ಪೂರ್ವ ಏಷ್ಯಾ ಪೆಸಿಫಿಕ್ ಅರ್ಹತಾ ಸುತ್ತಿನಿಂದ ಬರುತ್ತವೆ. ಈ ಪಂದ್ಯಾವಳಿಯನ್ನು 2024 ರ ಟಿ20 ವಿಶ್ವಕಪ್‌ನಂತೆಯೇ ಆಡಲಾಗುತ್ತದೆ. 20 ತಂಡಗಳನ್ನು ತಲಾ ಐದು ತಂಡಗಳ ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ನಂತರ ಪ್ರತಿ ಗುಂಪಿನಿಂದ 2 ತಂಡಗಳು ಸೂಪರ್-8 ಗೆ ಅರ್ಹತೆ ಪಡೆಯುತ್ತವೆ. ನಂತರ ನಾಕೌಟ್ ಪಂದ್ಯಗಳನ್ನು ಆಡಲಾಗುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 pm, Tue, 9 September 25

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ