AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೀಮ್ ಇಂಡಿಯಾ ಆಟಗಾರ ಗಾಯಾಳು

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯಗಳು ಇಂದಿನಿಂದ (ಫೆ.21) ಶುರುವಾಗಲಿದೆ. ಈ ಸುತ್ತಿನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾದರೆ, ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಶ್ರೀಲಂಕಾ ಕಣಕ್ಕಿಳಿಯಲಿದೆ. ಹಾಗೆಯೇ ಮೂರನೇ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ.

IND vs SA: ಟೀಮ್ ಇಂಡಿಯಾ ಆಟಗಾರ ಗಾಯಾಳು
Team India
ಝಾಹಿರ್ ಯೂಸುಫ್
|

Updated on:Feb 21, 2026 | 1:59 PM

Share

T20 World Cup 2026: ಭಾರತ ಮತ್ತು ಸೌತ್ ಆಫ್ರಿಕಾ (IND vs SA) ನಡುವಣ ಸೂಪರ್-8 ಸುತ್ತಿನ ಪಂದ್ಯವು ನಾಳೆ (ಫೆ.22) ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಗಾಯಗೊಂಡಿದ್ದಾರೆ. ಅಹಮದಾಬಾದ್​ನಲ್ಲಿ ನಡೆದ ಅಭ್ಯಾಸ ಪಂದ್ಯದ ವೇಳೆ ಸಿರಾಜ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಅವರು ಅರ್ಧದಲ್ಲೇ ಅಭ್ಯಾಸ ನಿಲ್ಲಿಸಿದ್ದರು.

ನೆಟ್ಸ್​ನಲ್ಲಿ ಸಿರಾಜ್ ಟೀಮ್ ಇಂಡಿಯಾ ಬ್ಯಾಟರ್ ಹಾರ್ದಿಕ್ ಪಾಂಡ್ಯಗೆ ಬೌಲಿಂಗ್ ಮಾಡುತ್ತಿದ್ದರು. ವೇಳೆ ಪಾಂಡ್ಯ ಹೊಡೆದ ಚೆಂಡು ನೇರವಾಗಿ ಸಿರಾಜ್​ ಅವರ ಎಡಗಾಲಿನ ಮಂಡಿಗೆ ಬಡಿದಿದೆ.

ಚೆಂಡು ತಗುಲಿದ ತಕ್ಷಣ ಮೊಹಮ್ಮದ್ ಸಿರಾಜ್ ನೋವಿನಿಂದ ಮೈದಾನದಲ್ಲೇ ಕುಸಿದು ಬಿದ್ದರು. ತಕ್ಷಣವೇ ಫಿಸಿಯೋಗಳು ಅವರಿಗೆ ಐಸ್ ಪ್ಯಾಕ್ ಚಿಕಿತ್ಸೆ ನೀಡಿದರು. ಇದಾಗ್ಯೂ ಅವರು ಚೇತರಿಸಿಕೊಂಡಿರಲಿಲ್ಲ. ಅಲ್ಲದೆ ನೋವಿನೊಂದಿಗೆ ಕಾಲು ಎಳೆಯುತ್ತಾ ಮೈದಾನದಿಂದ ಹೊರನಡೆದಿದ್ದಾರೆ.

ಸದ್ಯ ಮೊಹಮ್ಮದ್ ಸಿರಾಜ್ ಅವರ ಗಾಯದ ತೀವ್ರತೆಯ ಬಗ್ಗೆ ವೈದ್ಯಕೀಯ ತಂಡ ನಿಗಾ ಇರಿಸಿದ್ದು, ಫೆಬ್ರವರಿ 22 ರಂದು ಸೌತ್ ಆಫ್ರಿಕಾ ವಿರುದ್ಧ ನಡೆಯಲಿರುವ ಮಹತ್ವದ ಪಂದ್ಯಕ್ಕೆ ಅವರು ಲಭ್ಯರಿರುತ್ತಾರೆಯೇ ಎಂಬುದು ಇನ್ನು 24 ಗಂಟೆಗಳಲ್ಲಿ ನಿರ್ಧಾರವಾಗಲಿದೆ.

ಅಂದಹಾಗೆ ಮೊಹಮ್ಮದ್ ಸಿರಾಜ್ ಈ ಬಾರಿಯ ಟಿ20 ವಿಶ್ವಕಪ್​ಗೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದರು. ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಹರ್ಷಿತ್ ರಾಣಾ ಗಾಯಗೊಂಡ ಪರಿಣಾಮ ಸಿರಾಜ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.

ಅದರಂತೆ ಯುಎಸ್​ಎ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಸಿರಾಜ್ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಅವರು ಗಾಯಗೊಂಡಿರುವ ಕಾರಣ ಬದಲಿ ಆಟಗಾರನನ್ನು ಆಯ್ಕೆ ಮಾಡಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಸೂಪರ್-8 ಪಂದ್ಯಗಳ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ?

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Published On - 1:59 pm, Sat, 21 February 26

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ