AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಶಾನ್ ಕಿಶನ್ ಅಬ್ಬರದಿಂದ ರಿಂಕು ಸಿಂಗ್​ಗೆ ಖುಲಾಯಿಸಿದ ಅದೃಷ್ಟ

T20 World Cup 2026 India Squad : ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಿಂದ ಶುಭ್​​ಮನ್ ಗಿಲ್ ಹಾಗೂ ಜಿತೇಶ್ ಶರ್ಮಾ ಹೊರಬಿದ್ದರೆ, ಇಶಾನ್ ಕಿಶನ್ ಹಾಗೂ ರಿಂಕು ಸಿಂಗ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇಶಾನ್ ಕಿಶನ್ ಅಬ್ಬರದಿಂದ ರಿಂಕು ಸಿಂಗ್​ಗೆ ಖುಲಾಯಿಸಿದ ಅದೃಷ್ಟ
Ishan Kishan - Rinku Singh
ಝಾಹಿರ್ ಯೂಸುಫ್
|

Updated on: Dec 21, 2025 | 10:10 AM

Share

ಟಿ೨೦ ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಸ್ಥಾನಗಿಟ್ಟಿಸಿಕೊಳ್ಳುವಲ್ಲಿ ರಿಂಕು ಸಿಂಗ್ ಯಶಸ್ವಿಯಾಗಿದ್ದಾರೆ. ಆದರೆ ರಿಂಕು ಸಿಂಗ್​ಗೆ ದಿಢೀರ್ ಅದೃಷ್ಟ ಖುಲಾಯಿಸಿದ್ದು ಇಶಾನ್ ಕಿಶನ್ ಅಬ್ಬರದಿಂದ ಎಂಬುದು ವಿಶೇಷ.

ಇತ್ತೀಚೆಗೆ ಮುಗಿದ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಇಶಾನ್ ಕಿಶನ್ ಭರ್ಜರಿ ಪ್ರದರ್ಶನ ನೀಡಿದ್ದರು. ಜಾರ್ಖಂಡ್ ಪರ ಕಣಕ್ಕಿಳಿದಿದ್ದ ಕಿಶನ್ 2 ಶತಕ ಹಾಗೂ 2 ಅರ್ಧಶತಕಗಳೊಂದಿಗೆ ಬರೋಬ್ಬರಿ 51 ರನ್ ಕಲೆಹಾಕಿದ್ದರು. ಈ ಭರ್ಜರಿ ಪ್ರದರ್ಶನದೊಂದಿಗೆ ಇಶಾನ್ ಕಿಶನ್ ಟೀಮ್ ಇಂಡಿಯಾದ ಬಾಗಿಲು ಬಡಿದಿದ್ದರು.

ಅತ್ತ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಶುಭ್​ಮನ್ ಗಿಲ್ ಸಂಪೂರ್ಣ ವಿಫಲರಾಗಿದ್ದ ಕಾರಣ ಅವರನ್ನು ಟಿ೨೦ ತಂಡದಿಂದ ಕೈ ಬಿಡುವುದು ಬಿಸಿಸಿಐ ಪಾಲಿಗೆ ಅನಿವಾರ್ಯವಾಗಿತ್ತು. ಅವರ ಬದಲಿಗೆ ಯಾರನ್ನು ಆಯ್ಕೆ ಮಾಡಬೇಕೆಂಬ ಪ್ರಶ್ನೆಗೆ ಇದ್ದದ್ದು ಒಂದೇ ಉತ್ತರ ಇಶಾನ್ ಕಿಶನ್.

ಇಶಾನ್ ಕಿಶನ್ ಭರ್ಜರಿ ಫಾರ್ಮ್ ನಲ್ಲಿರುವ ಕಾರಣ ಅವರನ್ನೇ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲಾಯಿತು. ಇತ್ತ ವಿಕೆಟ್ ಕೀಪರ್ ಆಗಿರುವ ಇಶಾನ್ ಕಿಶನ್ ಶುಭ್​ಮನ್ ಗಿಲ್ ಅವರ ಸ್ಥಾನಕ್ಕೆ ಆಯ್ಕೆಯಾಗಿದ್ದರಿಂದ ಮತ್ತೋರ್ವ ವಿಕೆಟ್ ಕೀಪರ್​ನನ್ನು ತಂಡದಿಂದ ಕೈ ಬಿಡುವುದು ಅನಿವಾರ್ಯವಾಯಿತು. ಇದರಿಂದ ಜಿತೇಶ್ ಶರ್ಮಾ ಟೀಮ್ ಇಂಡಿಯಾದಿಂದ ಹೊರಬಿದ್ದರು.

ಏಕೆಂದರೆ ವಿಕೆಟ್ ಕೀಪರ್ ಬ್ಯಾಟರ್​ ಆಗಿ ಸಂಜು ಸ್ಯಾಮ್ಸನ್ ಇದ್ದು, ಅವರೊಂದಿಗೆ ಹೆಚ್ಚುವರಿ ವಿಕೆಟ್ ಕೀಪರ್​ ಆಗಿ ಇದೀಗ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಲಾಗಿದೆ. ಕಿಶನ್ ಆಯ್ಕೆಯಿಂದ ಹೆಚ್ಚುವರಿ ವಿಕೆಟ್ ಕೀಪರ್ ಹಾಗೂ ಆರಂಭಿಕನ ಸ್ಥಾನ ಕೂಡ ಭರ್ತಿಯಾಗಿದೆ. ಇದರಿಂದ ವಿಕೆಟ್ ಕೀಪರ್​ ಆಗಿ ತಂಡದಲ್ಲಿದ್ದ ಜಿತೇಶ್ ಶರ್ಮಾ ಅವರನ್ನು ಕೈ ಬಿಡಲೇಬೇಕಾಯಿತು.

ಅತ್ತ ವಿಕೆಟ್ ಕೀಪರ್ ಜಿತೇಶ್ ಶರ್ಮಾ ಅವರನ್ನು ಕೈ ಬಿಟ್ಟಿದ್ದರಿಂದ ಟೀಮ್ ಇಂಡಿಯಾಗೆ ಹೆಚ್ಚುವರಿ ಫಿನಿಶರ್​ನ ಅನಿವಾರ್ಯತೆ ಎದುರಾಗಿದೆ. ಈ ವೇಳೆ ಬಿಸಿಸಿಐ ಮುಂದಿದ್ದ ಏಕೈಕ ಆಯ್ಕೆ ರಿಂಕು ಸಿಂಗ್. ಅದರಂತೆ ಭಾರತ ಟಿ20 ವಿಶ್ವಕಪ್​ ತಂಡದಲ್ಲಿ ರಿಂಕು ಸಿಂಗ್​ಗೆ ಅವಕಾಶ ಲಭಿಸಿತು.

ಒಂದು ವೇಳೆ ಇಶಾನ್ ಕಿಶನ್ ಆರಂಭಿಕನಾಗಿ ಆಯ್ಕೆಯಾಗದೇ ಇದ್ದಿದ್ದರೆ ರಿಂಕು ಸಿಂಗ್​ಗೆ ಚಾನ್ಸ್ ಸಿಗುವ ಸಾಧ್ಯತೆ ಇರಲಿಲ್ಲ. ಏಕೆಂದರೆ ಇಶಾನ್ ಕಿಶನ್ ಹೆಚ್ಚುವರಿ ಆರಂಭಿಕ + ಹೆಚ್ಚುವರಿ ವಿಕೆಟ್ ಕೀಪರ್ ಸ್ಥಾನ ತುಂಬಿದ್ದರಿಂದ ಶುಭ್​​ಮನ್ ಗಿಲ್ ಹಾಗೂ ಜಿತೇಶ್ ಶರ್ಮಾ ತಂಡದಿಂದ ಹೊರಗುಳಿಯಬೇಕಾಯಿತು.

ಇದನ್ನೂ ಓದಿ: ಟೀಮ್ ಇಂಡಿಯಾದಿಂದ 7 ಆಟಗಾರರು ಔಟ್..!

ಇತ್ತ ಜಿತೇಶ್ ಶರ್ಮಾ ಹೊರಗುಳಿದ ಪರಿಣಾಮ ರಿಂಕು ಸಿಂಗ್ ಅವರಿಗೆ ಅದೃಷ್ಟ ಖುಲಾಯಿಸಿದೆ. ಈ ಮೂಲಕ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳದ ರಿಂಕು ಸಿಂಗ್ ನೇರವಾಗಿ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ.

ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್
ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್
ಭಾರತದ ವಿರುದ್ಧ ಸೋಲು; ಪಾಕಿಸ್ತಾನದಲ್ಲಿ ಟಿವಿಗಳು ಪುಡಿಪುಡಿ
ಭಾರತದ ವಿರುದ್ಧ ಸೋಲು; ಪಾಕಿಸ್ತಾನದಲ್ಲಿ ಟಿವಿಗಳು ಪುಡಿಪುಡಿ
ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಪ್ರತಿಭಟನೆ
ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಪ್ರತಿಭಟನೆ
ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್
ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್
ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ
ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ