AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಸೆಮಿಫೈನಲ್​ನಲ್ಲಿ 10 ಓವರ್​ಗಳ ನಿಯಮ ಜಾರಿ

T20 World Cup 2026: 20 ತಂಡಗಳೊಂದಿಗೆ ಶುರುವಾದ ಟಿ20 ವಿಶ್ವಕಪ್​ನಿಂದ 16 ತಂಡಗಳು ಹೊರಬಿದ್ದಿವೆ. ಇದೀಗ ಉಳಿದಿರುವುದು ಕೇವಲ 4 ಟೀಮ್​ಗಳು ಮಾತ್ರ. ಈ ನಾಲ್ಕು ತಂಡಗಳ ನಡುವೆ ಸೆಮಿಫೈನಲ್ ಮುಖಾಮುಖಿ ನಡೆಯಲಿದೆ. ಇದರಲ್ಲಿ ಗೆಲ್ಲುವ ತಂಡಗಳು ಮಾರ್ಚ್ 8 ರಂದು ಫೈನಲ್ ಪಂದ್ಯವಾಡಲಿದೆ.

T20 World Cup 2026: ಸೆಮಿಫೈನಲ್​ನಲ್ಲಿ 10 ಓವರ್​ಗಳ ನಿಯಮ ಜಾರಿ
T20 World Cup 2026
ಝಾಹಿರ್ ಯೂಸುಫ್
|

Updated on: Mar 03, 2026 | 8:53 AM

Share

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯವು ಬುಧವಾರದಿಂದ (ಮಾ.4) ಶುರುವಾಗಲಿದೆ. ಮಾರ್ಚ್ 4 ರಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ತಂಡಗಳು ಮುಕಾಮುಖಿಯಾಗಲಿದೆ. ಇನ್ನು ಮಾರ್ಚ್ 5 ರಂದು ನಡೆಯಲಿರುವ  ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಭಾರತ ಸೆಣಸಲಿದೆ. ಈ ಪಂದ್ಯಗಳಿಗಾಗಿ 10 ಓವರ್​ಗಳ ನಿಯಮವನ್ನು ಪರಿಚಯಿಸಲಾಗಿದೆ.

ಅಂದರೆ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದರೆ ಅಥವಾ ಕಾರಣಾಂತರಗಳಿಂದ 20 ಓವರ್​ಗಳನ್ನು ಆಡಲು ಸಾಧ್ಯವಾಗದೇ ಇದ್ದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಲು ಕನಿಷ್ಠ 10 ಓವರ್​ಗಳನ್ನು ಆಡಲೇಬೇಕು.

ಇದಕ್ಕೂ ಮುನ್ನ ಸೂಪರ್-8 ಸುತ್ತಿನಲ್ಲಿ 5 ಓವರ್​ಗಳನ್ನು ನಿಗದಿ ಮಾಡಲಾಗಿತ್ತು. ಅಂದರೆ ಕಾರಣಾಂತರಗಳಿಂದ ಪಂದ್ಯಕ್ಕೆ ಸ್ಥಗಿತಗೊಂಡರೆ ಅಥವಾ ರದ್ದಾದರೆ ಉಭಯ ತಂಡಗಳು ಕನಿಷ್ಠ 5 ಓವರ್​ಗಳನ್ನು ಆಡಿದ್ದರೆ ಮಾತ್ರ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಲಾಗುತ್ತದೆ ಎಂದು ಐಸಿಸಿ ತಿಳಿಸಿತ್ತು.  ಇದೀಗ ಸೆಮಿಫೈನಲ್ ಪಂದ್ಯಗಳಿಗೆ ಈ ನಿಯಮವನ್ನು 10 ಓವರ್​ಗೆ ಏರಿಸಲಾಗಿದೆ.

ಸೆಮಿಫೈನಲ್ ನಿಯಮಗಳ ವಿವರಗಳು:

  • ಕನಿಷ್ಠ ಓವರ್‌ಗಳು: ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾದರೆ ಅಥವಾ ಇನ್ನಿತರೆ ಕಾರಣಗಳಿಂದ ಪಂದ್ಯ ಅರ್ಧದಲ್ಲೇ ಸ್ಥಗಿತಗೊಂಡರೆ ಡಕ್ವರ್ತ್-ಲೂಯಿಸ್ (DLS) ನಿಯಮದಡಿ ಫಲಿತಾಂಶ ನಿರ್ಧರಿಸಲು ಎರಡೂ ತಂಡಗಳು ತಲಾ 10 ಓವರ್‌ಗಳನ್ನು ಆಡಿರಲೇಬೇಕು.
  • ಮೊದಲ ಇನಿಂಗ್ಸ್ 10 ಓವರ್​: ಮೊದಲು ಬ್ಯಾಟ್ ಮಾಡುವ ತಂಡವು 10 ಓವರ್​ ಪೂರ್ಣಗೊಳಿಸದೇ, ಎರಡನೇ ತಂಡಕ್ಕೆ ಬ್ಯಾಟಿಂಗ್​ಗೆ ಅವಕಾಶ ಇರುವುದಿಲ್ಲ. ಅಂದರೆ 10 ಕ್ಕಿಂತ ಕಡಿಮೆ ಓವರ್​ನ ಪಂದ್ಯವನ್ನು ಆಯೋಜಿಸಲಾಗುವುದಿಲ್ಲ. ಎರಡೂ ತಂಡಗಳು ಕನಿಷ್ಠ 10 ಓವರ್​ಗಳನ್ನು ಆಡಿದ್ರೆ ಮಾತ್ರ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಲಾಗುತ್ತದೆ.
  • ಮೀಸಲು ದಿನ: ಎರಡೂ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಿಗೆ ಮೀಸಲು ದಿನದ ವ್ಯವಸ್ಥೆ ಇದೆ. ನಿಗದಿತ ದಿನದಂದು ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ, ಮೀಸಲು ದಿನದಂದು ಪಂದ್ಯವನ್ನು ಮುಂದುವರೆಸಲಾಗುತ್ತದೆ.
  • ಹೆಚ್ಚುವರಿ ಸಮಯ: ಪಂದ್ಯವನ್ನು ಪೂರ್ಣಗೊಳಿಸಲು ನಿಗದಿತ ದಿನದಂದು 90 ನಿಮಿಷಗಳನ್ನು ಹೆಚ್ಚುವರಿಯಾಗಿ ನೀಡಲಾಗುತ್ತದೆ. ಅಂದರೆ ಇಲ್ಲಿ ಮಳೆಯಿಂದಾಗಿ ಪಂದ್ಯ ವಿಳಂಬವಾದರೂ ತಕ್ಷಣವೇ ಓವರ್ ಕಡಿತವಾಗುವುದಿಲ್ಲ. ಬದಲಾಗಿ ಹೆಚ್ಚುವರಿ 90 ನಿಮಿಷಗಳ ಮೂಲಕ 20 ಓವರ್​ಗಳನ್ನು ಆಡಿಸಲಿದ್ದಾರೆ.
  • ಪಂದ್ಯ ರದ್ದು: ಮೀಸಲು ದಿನದಂದು ಕೂಡ 10 ಓವರ್‌ಗಳ ಪಂದ್ಯ ನಡೆಸಲು ಸಾಧ್ಯವಾಗದೇ ಇದ್ದರೆ ಮಾತ್ರ ಪಂದ್ಯವನ್ನು ರದ್ದು ಮಾಡಲಾಗುತ್ತದೆ.
  • ಯಾರು ಫೈನಲ್​ಗೆ: ಸೆಮಿಫೈನಲ್ ಪಂದ್ಯವು ರದ್ದಾದರೆ ಸೂಪರ್ 8 ಹಂತದ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡವು ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ.

ಇದನ್ನೂ ಓದಿ: ಕೊಹ್ಲಿ-ರೋಹಿತ್ ರಿಟರ್ನ್ಸ್​: 15 ಪಂದ್ಯಗಳ ವೇಳಾಪಟ್ಟಿ ಪ್ರಕಟ

ಸೆಮಿಫೈನಲ್ ವೇಳಾಪಟ್ಟಿ:

  • ಸೆಮಿಫೈನಲ್ 1 ಮಾರ್ಚ್ 4, 2026: ಸೌತ್ ಆಫ್ರಿಕಾ vs ನ್ಯೂಝಿಲೆಂಡ್ (ಈಡನ್ ಗಾರ್ಡನ್ಸ್, ಕೋಲ್ಕತ್ತಾ)
  • ಸೆಮಿಫೈನಲ್ 2 ಮಾರ್ಚ್ 5, 2026: ಭಾರತ vs ಇಂಗ್ಲೆಂಡ್ (ವಾಂಖೆಡೆ ಸ್ಟೇಡಿಯಂ, ಮುಂಬೈ)
Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?