Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವಿಶ್ವಕಪ್​ಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇಲ್ಲ..!

T20 World Cup 2026: ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿದೆ. ಇಲ್ಲಿ ಆತಿಥೇಯ ರಾಷ್ಟ್ರಗಳಾದ ಭಾರತ ಮತ್ತು ಶ್ರೀಲಂಕಾ ತಂಡಗಳಿಗೆ ನೇರ ಅರ್ಹತೆ ಪಡೆದುಕೊಂಡಿದೆ. ಹಾಗೆಯೇ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೂಪರ್-8 ಹಂತಕ್ಕೇರಿರುವ ಎಂಟು ತಂಡಗಳೂ ಕೂಡ ಮುಂಬರುವ ವಿಶ್ವಕಪ್​ಗೆ ಅರ್ಹತೆ ಗಿಟ್ಟಿಸಿಕೊಂಡಿದೆ.

ಮುಂದಿನ ವಿಶ್ವಕಪ್​ಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇಲ್ಲ..!
Rohit Sharma - Virat Kohli
Follow us
ಝಾಹಿರ್ ಯೂಸುಫ್
|

Updated on: Mar 11, 2025 | 9:04 AM

ಐಸಿಸಿ ಚಾಂಪಿಯನ್ಸ್ ಟ್ರೋಫಿ ಮುಕ್ತಾಯದ ಬೆನ್ನಲ್ಲೇ ಮುಂದಿನ ಟೂರ್ನಿಗೆ ರೂಪುರೇಷೆಗಳು ಸಿದ್ಧಗೊಂಡಿದೆ. ಅದರಂತೆ 2026 ರಲ್ಲಿ ಐಸಿಸಿ ಟಿ20 ವಿಶ್ವಕಪ್ ಆಯೋಜಿಸಲು ನಿರ್ಧರಿಸಲಾಗಿದೆ. ಈ ಚುಟುಕು ಕ್ರಿಕೆಟ್ ಟೂರ್ನಿಗೆ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆತಿಥ್ಯವಹಿಸಲಿದೆ. ಅಂದರೆ ಬಹುತೇಕ ಪಂದ್ಯಗಳು ಭಾರತದಲ್ಲಿ ನಡೆದರೆ, ಕೆಲ ಮ್ಯಾಚ್​ಗಳು ಶ್ರೀಲಂಕಾದಲ್ಲಿ ಜರುಗಲಿದೆ.

ಇನ್ನು ಈ ಟೂರ್ನಿಯನ್ನು 2026ರ ಫೆಬ್ರವರಿ ಮತ್ತು ಮಾರ್ಚ್ ನಡುವೆ ಆಯೋಜಿಸಲು ಐಸಿಸಿ ಆಡಳಿತ ಮಂಡಳಿ ನಿರ್ಧರಿಸಿದೆ. ಅದಕ್ಕೂ ಮುನ್ನ ಎಲ್ಲಾ ಮಂಡಳಿಗಳು ತಮ್ಮ ಸರಣಿಗಳನ್ನು ಪೂರ್ಣಗೊಳಿಸಲು ತಿಳಿಸಲಾಗಿದೆ.

ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಇಲ್ಲ:

ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ. ಏಕೆಂದರೆ ಈ ಇಬ್ಬರು ಆಟಗಾರರು ಈಗಾಗಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

2024ರ ಟಿ20 ವಿಶ್ವಕಪ್ ಗೆದ್ದ ಬಳಿಕ ಇಬ್ಬರು ದಿಢೀರ್ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಭಾರತದಲ್ಲಿ ನಡೆಯಲಿರುವ ಚುಟುಕು ಕ್ರಿಕೆಟ್ ಸಮರದಲ್ಲಿ ಇಬ್ಬರು ದಾಂಡಿಗರು ಕಣಕ್ಕಿಳಿಯುವುದಿಲ್ಲ. ಅಲ್ಲದೆ ಈ ಟೂರ್ನಿಯಲ್ಲಿ ಟೀಮ್ ಇಂಡಿಯಾವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.

ಇದಾಗ್ಯೂ ಇಬ್ಬರು ದಿಗ್ಗಜರನ್ನು ಟಿ20 ವಿಶ್ವಕಪ್​ನ ರಾಯಭಾರಿಗಳಾಗಿ ಬಳಸಿಕೊಳ್ಳಲು ಐಸಿಸಿ ಚಿಂತಿಸಿದೆ. ಹೀಗಾಗಿ ಮುಂಬರುವ ವಿಶ್ವಕಪ್​ ವೇಳೆ ಹಿಟ್​ಮ್ಯಾನ್ ಹಾಗೂ ಕಿಂಗ್ ಕೊಹ್ಲಿ ಫೋಟೋಗಳು ಭಾರತದಲ್ಲಿ ರಾರಾಜಿಸಲಿದೆ.

ಇದನ್ನೂ ಓದಿ: IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ

20 ತಂಡಗಳು ಕಣಕ್ಕೆ:

ಐಸಿಸಿಯ ಮುಂದಿನ ಟೂರ್ನಿಯಲ್ಲಿ ಒಟ್ಟು 20 ಕಣಕ್ಕಿಳಿಯಲಿವೆ. ಈಗಾಗಲೇ 12 ತಂಡಗಳು ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದ್ದು, ಉಳಿದ 8 ತಂಡಗಳನ್ನು ಅರ್ಹತಾ ಸುತ್ತಿನ ಮೂಲಕ ಆಯ್ಕೆ ಮಾಡಲಾಗುತ್ತದೆ. ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ತಂಡಗಳು ಈ ಕೆಳಗಿನಂತಿದೆ….

  1. ಭಾರತ
  2. ಶ್ರೀಲಂಕಾ
  3. ಅಫ್ಘಾನಿಸ್ತಾನ್
  4. ಆಸ್ಟ್ರೇಲಿಯಾ
  5. ಬಾಂಗ್ಲಾದೇಶ್
  6. ಇಂಗ್ಲೆಂಡ್
  7. ಸೌತ್ ಆಫ್ರಿಕಾ
  8. ಯುಎಸ್​ಎ
  9. ವೆಸ್ಟ್ ಇಂಡೀಸ್
  10. ನ್ಯೂಝಿಲೆಂಡ್
  11. ಪಾಕಿಸ್ತಾನ್
  12. ಐರ್ಲೆಂಡ್

ಅರ್ಹತಾ ಸುತ್ತಿನಲ್ಲಿರುವ ತಂಡಗಳು:

  1. ಝಿಂಬಾಬ್ವೆ
  2. ಬೋಟ್ಸ್ವಾನ
  3. ಕೀನ್ಯಾ
  4. ಮಲಾವಿ
  5. ನಮೀಬಿಯಾ
  6. ನೈಜೀರಿಯಾ
  7. ತಾಂಜಾನಿಯಾ
  8. ಉಗಾಂಡಾ
  9. ಬಹಾಮಾಸ್
  10. ಬರ್ಮುಡಾ
  11. ಕೆನಡಾ
  12. ಕೇಮನ್ ಐಲ್ಯಾಂಡ್
  13. ಜಪಾನ್
  14. ಕುವೈತ್
  15. ಮಲೇಷ್ಯಾ
  16. ನೇಪಾಳ
  17. ಓಮಾನ್
  18. ಪಪುವಾ ನ್ಯೂಗಿನಿಯಾ
  19. ಖತಾರ್
  20. ಸಮೋವಾ
  21. ಯುಎಇ
  22. ಗುರ್ನಸಿ
  23. ಇಟಲಿ
  24. ಜೆರ್ಸಿ
  25. ನೆದರ್ಲ್ಯಾಂಡ್ಸ್
  26. ಸ್ಕಾಟ್ಲೆಂಡ್
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ