AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಮಳೆಯಿಂದ ಪಂದ್ಯ ರದ್ದಾದ್ರೆ ಯಾರಿಗೆ ಲಾಭ?

India vs Pakistan: ಟಿ20 ವಿಶ್ವಕಪ್​​ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ಭಾನುವಾರ (ಫೆ.15) ನಡೆಯಲಿರುವ ಈ ಪಂದ್ಯಕ್ಕೆ ಇದೀಗ ಮಳೆ ಭೀತಿ ಎದುರಾಗಿದೆ. ಒಂದು ವೇಳೆ ಮ:ಳೆಯಿಂದಾಗಿ ಪಂದ್ಯ ರದ್ದಾದರೆ ಯಾರಿಗೆ ಲಾಭ? ಎಂಬ ಪ್ರಶ್ನೆ ಮೂಡುವುದು ಸಹಜ. ಇದಕ್ಕೆ ಉತ್ತರ ಇಲ್ಲಿದೆ.

IND vs PAK: ಮಳೆಯಿಂದ ಪಂದ್ಯ ರದ್ದಾದ್ರೆ ಯಾರಿಗೆ ಲಾಭ?
Ind Vs Pak
ಝಾಹಿರ್ ಯೂಸುಫ್
|

Updated on: Feb 14, 2026 | 8:34 AM

Share

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಕಾರ್ಮೋಡ ಕವಿದಿದೆ. ಫೆಬ್ರವರಿ 15 ರಂದು ಕೊಲಂಬೋದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡೊ-ಪಾಕ್ ನಡುವಿನ ಟಿ20 ವಿಶ್ವಕಪ್ 2026 ರ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಹೀಗಾಗಿ ಮ್ಯಾಚ್ ನಡೆಯುವುದು ಕೂಡ ಅನುಮಾನ ಎನ್ನಲಾಗುತ್ತಿದೆ.

ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದ ಸಮಯದಲ್ಲಿ ಸುಮಾರು ಶೇ. 50 ರಿಂದ ಶೇ. 70 ರಷ್ಟು ಮಳೆಯಾಗುವ ಮುನ್ಸೂಚನೆ ಇದೆ. ಲೈವ್ ಮಿಂಟ್ (LiveMint) ವರದಿಯ ಪ್ರಕಾರ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ಭಾರಿ ಮಳೆಯಾಗಬಹುದು.

ಸ್ಥಳೀಯ ಕಾಲಮಾನ ರಾತ್ರಿ 7:00 ಗಂಟೆಗೆ ಪಂದ್ಯ ಆರಂಭವಾಗಬೇಕಿದೆ. ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಟಾಸ್ ವಿಳಂಬವಾಗಬಹುದು. ಅತ್ತ ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ಆಧುನಿಕ ಡ್ರೈನೇಜ್ ಸಿಸ್ಟಂ ಇಲ್ಲದೇ ಇರುವುದರಿಂದ, ಮೈದಾನದಲ್ಲಿ ನೀರು ತುಂಬಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಸಂಜೆ ವೇಳೆ ಭಾರೀ ಮಳೆಯಾದರೆ ಪಂದ್ಯವನ್ನು ಆಯೋಜಿಸುವುದು ಕಷ್ಟಕರ.

ಮೀಸಲು ದಿನವಿದೆಯೇ?

ಟಿ20 ವಿಶ್ವಕಪ್​ನ ಲೀಗ್ ಹಂತದ ಪಂದ್ಯಗಳಿಗೆ ಯಾವುದೇ ಮೀಸಲು ದಿನವಿಲ್ಲ. ಫೆಬ್ರವರಿ 15 ರಂದೇ ಭಾರತ ಮತ್ತು ಪಾಕಿಸ್ತಾನ್ ಕಣಕ್ಕಿಳಿಯಬೇಕು. ಅದು ಅಸಾಧ್ಯವಾದರೆ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ.

ಒಂದು ವೇಳೆ ಪಂದ್ಯ ರದ್ದಾದರೆ ಏನಾಗುತ್ತದೆ?

ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ, ಐಸಿಸಿ (ICC) ನಿಯಮದಂತೆ ಎರಡೂ ತಂಡಗಳಿಗೆ ತಲಾ ಒಂದೊಂದು ಅಂಕವನ್ನು ಹಂಚಲಾಗುತ್ತದೆ.

ಪ್ರಸ್ತುತ ಅಂಕಪಟ್ಟಿಯಲ್ಲಿ ಈ ಎರಡೂ ತಂಡಗಳು ಉತ್ತಮ ಸ್ಥಾನದಲ್ಲಿದ್ದು, ಅಂಕ ಹಂಚಿಕೆಯಾದರೂ ಸೂಪರ್ 8 ಹಂತಕ್ಕೇರಲು ಹೆಚ್ಚಿನ ತೊಂದರೆಯಾಗುವುದಿಲ್ಲ.

ಮಳೆ ಬಂದರೆ ಯಾರಿಗೆ ಲಾಭ?

ಫೆಬ್ರವರಿ 15 ರಂದು ಮಳೆ ಬಂದು ಪಂದ್ಯ ರದ್ದಾದರೆ ಪಾಕಿಸ್ತಾನ್ ತಂಡಕ್ಕೆ ಲಾಭವಾಗಲಿದೆ. ಏಕೆಂದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುವ ಫೇವರೇಟ್. ಅದರಲ್ಲೂ ಪಾಕಿಸ್ತಾನ್ ತಂಡವು ಕಳೆದ 5 ಮುಖಾಮುಖಿಯಲ್ಲಿ ಟೀಮ್ ಇಂಡಿಯಾ ವಿರುದ್ಧ ಹೀನಾಯವಾಗಿ ಸೋತಿದೆ.

ಅಷ್ಟೇ ಅಲ್ಲದೆ ಕಳೆದ ವರ್ಷ ನಡೆದ ಏಷ್ಯಾಕಪ್​ನಲ್ಲೂ ಭಾರತ ತಂಡವು ಪಾಕಿಸ್ತಾನ್ ತಂಡವನ್ನು 3 ಬಾರಿ ಸೋಲಿಸಿ ಮೇಲುಗೈ ಸಾಧಿಸಿದೆ. ಹೀಗಾಗಿ ಟಿ20 ವಿಶ್ವಕಪ್​ನಲ್ಲೂ ಭಾರತ ತಂಡವೇ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ.

ಇದನ್ನೂ ಓದಿ: ಟಿ20 ಕ್ರಿಕೆಟ್​ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ಬರೆದ ‘ಮೊಸ್ಕಾ’ ಬ್ರದರ್ಸ್

ಅತ್ತ ಮಳೆ ಬಂದು ಪಂದ್ಯ ರದ್ದಾದರೆ ಪಾಕಿಸ್ತಾನ್ ತಂಡವು ಸೋಲಿನಿಂದ ತಪ್ಪಿಸಿಕೊಳ್ಳಲಿದೆ. ಅಲ್ಲದೆ 2 ಅಂಕಗಳಲ್ಲಿ ಒಂದು ಅಂಕವನ್ನು ಪಡೆದುಕೊಳ್ಳಲಿದ್ದಾರೆ. ಹೀಗಾಗಿ ಟಿ20 ವಿಶ್ವಕಪ್​ನ 28ನೇ ಪಂದ್ಯವು ರದ್ದಾದರೆ ಪಾಕಿಸ್ತಾನ್ ತಂಡಕ್ಕೆ ಹೆಚ್ಚಿನ ಲಾಭವಾಗಲಿದೆ ಎನ್ನಬಹುದು.

ಭಾರತ ಮತ್ತು ಪಾಕಿಸ್ತಾನ್ ನಡುವಣ ಕಳೆದ 5 ಪಂದ್ಯಗಳ ಫಲಿತಾಂಶ:

  • ಸೆಪ್ಟೆಂಬರ್ 28, 2025 T20 ಏಷ್ಯಾ ಕಪ್ (ಫೈನಲ್)- ಭಾರತಕ್ಕೆ 5 ವಿಕೆಟ್‌ಗಳ ಜಯ
  • ಸೆಪ್ಟೆಂಬರ್ 21, 2025 T20 ಏಷ್ಯಾ ಕಪ್ (ಸೂಪರ್ 4)- ಭಾರತಕ್ಕೆ 6 ವಿಕೆಟ್‌ಗಳ ಜಯ
  • ಸೆಪ್ಟೆಂಬರ್ 14, 2025 T20 ಏಷ್ಯಾ ಕಪ್ (ಗ್ರೂಪ್ ಹಂತ)- ಭಾರತಕ್ಕೆ 7 ವಿಕೆಟ್‌ಗಳ ಜಯ
  • ಫೆಬ್ರವರಿ 23, 2025 ODI ಚಾಂಪಿಯನ್ಸ್ ಟ್ರೋಫಿ- ಭಾರತಕ್ಕೆ 6 ವಿಕೆಟ್‌ಗಳ ಜಯ
  • ಜೂನ್ 09, 2024 T20 T20 ವಿಶ್ವಕಪ್- ಭಾರತಕ್ಕೆ 6 ರನ್‌ಗಳ ಜಯ.
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?