AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್-8 ಪಂದ್ಯಗಳ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ?

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ವೆಸ್ಟ್ ಇಂಡೀಸ್, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಸುತ್ತಿನಿಂದ ನಾಲ್ಕು ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ದ್ವಿತೀಯ ಸುತ್ತಿನಲ್ಲಿ ಪ್ರಬಲ ಪೈಪೋಟಿ ಕಂಡು ಬರಲಿದೆ.

ಸೂಪರ್-8 ಪಂದ್ಯಗಳ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ?
T20 World Cup 2026
ಝಾಹಿರ್ ಯೂಸುಫ್
|

Updated on:Feb 21, 2026 | 11:54 AM

Share

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಗಿದಿದೆ. ಮೊದಲ ಸುತ್ತಿನಲ್ಲಿ ಕಣಕ್ಕಿಳಿದ 20 ತಂಡಗಳಲ್ಲಿ 8 ಟೀಮ್​ಗಳು ಸೂಪರ್-8 ಸುತ್ತಿಗೆ ಪ್ರವೇಶಿಸಿದೆ. ಈ ಎಂಟು ತಂಡಗಳನ್ನು 2 ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಅದರಂತೆ ದ್ವಿತೀಯ ಸುತ್ತಿನಲ್ಲಿ ಗ್ರೂಪ್​ಗಳಲ್ಲಿರುವ ತಂಡಗಳ ನಡುವೆ ಸೆಣಸಾಟ ನಡೆಯಲಿದೆ.

ಸೂಪರ್-8 ಗುಂಪುಗಳು:

  • ಗ್ರೂಪ್ 1: ಭಾರತ, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ.
  • ಗ್ರೂಪ್ 2: ಇಂಗ್ಲೆಂಡ್, ನ್ಯೂಝಿಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ.

ಇಲ್ಲಿ ಭಾರತ ತಂಡವು ಗ್ರೂಪ್-1 ರಲ್ಲಿರುವ ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ ತಂಡಗಳನ್ನು ಎದುರಿಸಲಿದೆ. ಇದೇ ಮಾದರಿಯಲ್ಲಿ ಗ್ರೂಪ್-2 ನಲ್ಲಿರುವ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ.

ಅದರಂತೆ ದ್ವಿತೀಯ ಸುತ್ತಿನಲ್ಲಿ ಒಂದು ತಂಡವು ಒಟ್ಟು 3 ಪಂದ್ಯಗಳನ್ನಾಡಲಿದೆ. ಈ ಪಂದ್ಯಗಳಲ್ಲಿ ಗೆದ್ದು ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ 4 ಟೀಮ್​ಗಳು ಸೆಮಿಫೈನಲ್​ಗೇರಲಿದೆ.

ಒಂದು ವೇಳೆ  ಪಂದ್ಯಗಳಿಗೆ ಮಳೆ ಅಡಚಣೆ ಉಂಟು ಮಾಡಿದರೆ ಫಲಿತಾಂಶ ನಿರ್ಧರಿಸುವುದು ಹೇಗೆ? ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಈ ಕೆಳಗಿನಂತಿದೆ..

  • ಮೀಸಲು ದಿನ ಇಲ್ಲ: ಸೂಪರ್ 8 ಹಂತದ ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇರುವುದಿಲ್ಲ. ಮೀಸಲು ದಿನಗಳು ಕೇವಲ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಿಗೆ ಮಾತ್ರ ಅನ್ವಯಿಸುತ್ತವೆ.
  • ಒಂದೊಂದು ಅಂಕ: ಟಿ20 ವಿಶ್ವಕಪ್‌ನ ಸೂಪರ್ 8 ಪಂದ್ಯವು ಮಳೆಯಿಂದಾಗಿ ರದ್ದಾದರೆ ಎರಡೂ ತಂಡಗಳಿಗೆ ತಲಾ ಒಂದು ಅಂಕವನ್ನು ನೀಡಲಾಗುತ್ತದೆ.
  • ಕನಿಷ್ಠ ಓವರ್‌ಗಳು: ಪಂದ್ಯದ ಫಲಿತಾಂಶ ನಿರ್ಧರಿಸಲು ಎರಡೂ ತಂಡಗಳು ಕನಿಷ್ಠ 5 ಓವರ್‌ಗಳನ್ನು ಆಡುವುದು ಕಡ್ಡಾಯ.
  • ಹೆಚ್ಚುವರಿ ಸಮಯ: ಮಳೆ ಬಂದಾಗ ಪಂದ್ಯ ನಡೆಸಲು ಅಧಿಕಾರಿಗಳಿಗೆ ನಿಗದಿತ ಸಮಯದ ನಂತರ ಹೆಚ್ಚುವರಿಯಾಗಿ 90 ನಿಮಿಷಗಳ ಕಾಲಾವಕಾಶ ಇರಲಿದೆ.
  • 30 ಎಸೆತಗಳು: ಮಳೆಯಿಂದಾಗಿ ಪಂದ್ಯವು ಸ್ಥಗಿತಗೊಂಡರೆ, ಎರಡನೇ ಬ್ಯಾಟಿಂಗ್ ಮಾಡುವ ತಂಡ (ಉದಾಹರಣೆಗೆ ಭಾರತ) ಕನಿಷ್ಠ 5 ಓವರ್‌ಗಳನ್ನು ಪೂರ್ಣಗೊಳಿಸಿದರೆ ಮಾತ್ರ DLS ವಿಧಾನದಡಿ ವಿಜೇತರನ್ನು ನಿರ್ಧರಿಸಲು ಸಾಧ್ಯವಾಗುತ್ತದೆ.
  • ಪಂದ್ಯ ರದ್ದು: ಒಂದು ವೇಳೆ ಮಳೆಯ ಕಾರಣದಿಂದ ಎರಡೂ ತಂಡಗಳು ತಲಾ 5 ಓವರ್‌ಗಳನ್ನು ಆಡಲು ಸಾಧ್ಯವಾಗದಿದ್ದರೆ ಮಾತ್ರ ಪಂದ್ಯವನ್ನು ‘ರದ್ದು’ ಎಂದು ಘೋಷಿಸಲಾಗುತ್ತದೆ.

ಇತ್ತ ಭಾರತ ತಂಡವು ತನ್ನೆಲ್ಲಾ ಪಂದ್ಯಗಳನ್ನು ಭಾರತದಲ್ಲೇ ಆಡಲಿದೆ. ಹೀಗಾಗಿ ಮಳೆ ಭೀತಿ ಇಲ್ಲ ಎಂದೇ ಹೇಳಬಹುದು. ಆದರೆ ಶ್ರೀಲಂಕಾದಲ್ಲಿ ನಡೆಯಲಿರುವ ನ್ಯೂಝಿಲೆಂಡ್, ಇಂಗ್ಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ ನಡುವಣ ಪಂದ್ಯಗಳಿಗೆ ಮಳೆ ಆತಂಕ ಎದುರಾಗಿದೆ.

ಇದನ್ನೂ ಓದಿ: ‘ಹೈದರಾಬಾದ್’ ತಂಡಕ್ಕೆ ಗ್ಲೆನ್ ಮ್ಯಾಕ್ಸ್​ವೆಲ್ ಡೈರೆಕ್ಟ್ ಎಂಟ್ರಿ

ಏಕೆಂದರೆ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಝಿಂಬಾಬ್ವೆ ಹಾಗೂ ಐರ್ಲೆಂಡ್ ನಡುವಣ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಹಾಗೆಯೇ ಕೆಲ ಪಂದ್ಯಗಳು ಮಳೆಯಿಂದಾಗಿ ವಿಳಂಬವಾಗಿತ್ತು. ಹೀಗಾಗಿ ಗ್ರೂಪ್-2 ನಲ್ಲಿರುವ ತಂಡಗಳ ಪಂದ್ಯಗಳಿಗೆ ಮಳೆ ಅಡಚಣೆ ಉಂಟು ಮಾಡುವ ಸಾಧ್ಯತೆಯಿದೆ.

Published On - 11:53 am, Sat, 21 February 26

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ