AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೊಂದು ಕಾಕತಾಳೀಯ; 2028 ರ ಟಿ20 ವಿಶ್ವಕಪ್ ಕೂಡ ಭಾರತದ್ದೇ

T20 World Cup 2028 Prediction: ಜೂನ್ 26ರಂದು ಐರ್ಲೆಂಡ್ ವಿರುದ್ಧದ ಟೀಂ ಇಂಡಿಯಾದ ಟಿ20 ಸೋಲು ಕ್ರಿಕೆಟ್ ಲೋಕದ ಚರ್ಚೆಗೆ ಗ್ರಾಸವಾಗಿದೆ. ಈ ಸೋಲು, 2024ರ ಟಿ20 ವಿಶ್ವಕಪ್ ನಂತರ ಜಿಂಬಾಬ್ವೆ ವಿರುದ್ಧದ ಸೋಲಿನಂತೆಯೇ ಇದೆ. ಹೊಸ ನಾಯಕತ್ವದಲ್ಲಿ ದುರ್ಬಲ ತಂಡದ ವಿರುದ್ಧ ಸೋತ ಇತಿಹಾಸ ಪುನರಾವರ್ತನೆಯಾಗಿದ್ದು, ಇದು 2028ರ ಟಿ20 ವಿಶ್ವಕಪ್ ಭಾರತವೇ ಗೆಲ್ಲುವ ಶುಭ ಸೂಚನೆ ಎಂದು ಹಲವರು ವಿಶ್ಲೇಷಿಸುತ್ತಿದ್ದಾರೆ. ಶ್ರೇಯಸ್ ಅಯ್ಯರ್ ನಾಯಕತ್ವ ಭವಿಷ್ಯ ಕುತೂಹಲ ಮೂಡಿಸಿದೆ.

ಹೀಗೊಂದು ಕಾಕತಾಳೀಯ; 2028 ರ ಟಿ20 ವಿಶ್ವಕಪ್ ಕೂಡ ಭಾರತದ್ದೇ
Team IndiaImage Credit source: indian express
ಪೃಥ್ವಿಶಂಕರ
|

Updated on:Jun 27, 2026 | 4:42 PM

Share

ಜೂನ್ 26 ರಂದು ನಡೆದ ಅದೊಂದು ಕ್ರಿಕೆಟ್ ಪಂದ್ಯ ಕ್ರಿಕೆಟ್ ಲೋಕದ ಅಚ್ಚರಿಗೆ ಕಾರಣವಾಗಿದೆ. ದುರ್ಬಲ ತಂಡವೆಂದೇ ಪರಿಗಣಿಸಿರುವ ಐರ್ಲೆಂಡ್, ಬಲಿಷ್ಠ ಟೀಂ ಇಂಡಿಯಾವನ್ನು (India vs Ireland) ಸೋಲಿಸಿದೆ. ಉಭಯ ತಂಡಗಳ ನಡುವೆ ನಡೆದ ಮೊದಲ ಟಿ20 ಪಂದ್ಯವನ್ನು ಆತಿಥೇಯ ಐರ್ಲೆಂಡ್ 34 ರನ್​ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಐರ್ಲೆಂಡ್, ಟೀಂ ಇಂಡಿಯಾ ವಿರುದ್ಧ ಮೊಟ್ಟ ಮೊದಲ ಪಂದ್ಯ ಗೆದ್ದ ಸಾಧನೆಯನ್ನು ಮಾಡಿದೆ. ಇತ್ತ ಟೀಂ ಇಂಡಿಯಾ ತನ್ನ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಐರ್ಲೆಂಡ್ ವಿರುದ್ಧ ಸೋತ ಬೇಡದ ದಾಖಲೆಯನ್ನು ನಿರ್ಮಿಸಿದೆ. ಆದರೆ ಈ ಹಿಂದೆ ನಡೆದಿದ್ದ ಘಟನೆಯನ್ನು ತಾಳೆ ಹಾಕಿ ನೋಡಿದರೆ, ಐರ್ಲೆಂಡ್ ವಿರುದ್ಧದ ಸೋಲು 2028 ರ ಟಿ20 ವಿಶ್ವಕಪ್​ನಲ್ಲಿ (T20 World Cup 2028) ಟೀಂ ಇಂಡಿಯಾವೇ ಚಾಂಪಿಯನ್ ಎಂಬ ಭವಿಷ್ಯ ನುಡಿಯುತ್ತಿದೆ.

ಚಾಂಪಿಯನ್ ಆದ ಬಳಿಕ ಮೊದಲ ಸೋಲು

ಎಲ್ಲರಿಗೂ ತಿಳಿದಿರುವಂತೆ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ವರ್ಷ ನಡೆದ ಟಿ20 ವಿಶ್ವಕಪ್ ಗೆದ್ದು ಸತತ ಎರಡನೇ ಬಾರಿಗೆ ಚಾಂಪಿಯನ್ ಆಯಿತು. ಇದಕ್ಕೂ ಮುನ್ನ ಟೀಂ ಇಂಡಿಯಾ 2024 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಆದಾಗ್ಯೂ, ಆ ಕಪ್ ಗೆದ್ದ ನಂತರ ಆಡಿದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿತು. ಅದೂ ಜಿಂಬಾಬ್ವೆಯಂತಹ ದುರ್ಬಲ ತಂಡದ ವಿರುದ್ಧ. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಜಿಂಬಾಬ್ವೆ ಕೇವಲ 115 ರನ್​ ಕಲೆಹಾಕಿತ್ತು. ಈ ಗುರಿ ಬೆನ್ನಟ್ಟಿದ್ದ ಟೀಂ ಇಂಡಿಯಾ 102 ರನ್​ಗಳಿಗೆ ಆಲೌಟ್ ಆಗುವ ಮೂಲಕ 13 ರನ್​ಗಳಿಂದ ಸೋತಿತ್ತು. ಆಗಲೂ, ಟೀಂ ಇಂಡಿಯಾ ಹೊಸ ನಾಯಕನ ನೇತೃತ್ವದಲ್ಲಿ ಕಣಕ್ಕಿಳಿದಿತ್ತು. ಅದು ಪೂರ್ಣ ಪ್ರಮಾಣದ ಟಿ20 ನಾಯಕನಾಗಿ ಶುಭ್​ಮನ್ ಗಿಲ್ ಅವರ ಮೊದಲ ಪಂದ್ಯವಾಗಿತ್ತು. ಹಾಗೆಯೇ ಅದು ಟಿ20 ವಿಶ್ವಕಪ್ ಗೆದ್ದ ನಂತರ ಟೀಂ ಇಂಡಿಯಾದ ಮೊದಲ ಪಂದ್ಯವೂ ಆಗಿತ್ತು.

2026 ರಲ್ಲೂ ಅದೇ ರಿಪೀಟ್

ಕಾಕತಾಳಿಯವೆಂದರೆ.. ಈಗಲೂ ಅದೇ ರೀತಿಯ ಫಲಿತಾಂಶ ಪುನರಾವರ್ತನೆಯಾಗಿದೆ. 2026 ರ ಟಿ20 ವಿಶ್ವಕಪ್ ಗೆದ್ದ ನಂತರ ಮೊದಲ ಪಂದ್ಯವನ್ನಾಡಿದ ಟೀಂ ಇಂಡಿಯಾ ಚೇಸಿಂಗ್ ಮಾಡುವಾಗ ಸೋತಿದೆ. ಅದು ಕೂಡ ಐರ್ಲೆಂಡ್​ನಂತಹ ದುರ್ಬಲ ತಂಡದ ವಿರುದ್ಧ. ಈ ಪಂದ್ಯದಲ್ಲೂ ಟೀಂ ಇಂಡಿಯಾ ಹೊಸ ನಾಯಕನೊಂದಿಗೆ ಕಣಕ್ಕಿಳಿದಿತ್ತು. ಪೂರ್ಣ ಪ್ರಮಾಣದ ನಾಯಕನಾಗಿ ಶ್ರೇಯಸ್ ಅಯ್ಯರ್​ಗೆ ಇದು ಮೊದಲ ಪಂದ್ಯವಾಗಿತ್ತು. ಈ ಎಲ್ಲಾ ಕಾಕತಾಳಿಯಗಳನ್ನು ಜೊತೆಗೆ ಸೇರಿಸಿ ನೋಡಿದಾಗ 2028 ರ ಟಿ20 ವಿಶ್ವಕಪ್ ಕೂಡ ಭಾರತದ್ದೇ ಎಂಬ ಭಾವನೆ ಹಲವರಲ್ಲಿ ಮೂಡಿದೆ.

IND vs IRE: ಐರ್ಲೆಂಡ್ ವಿರುದ್ಧ ಸೋತು 5 ಅವಮಾನಕರ ದಾಖಲೆ ಬರೆದ ಟೀಂ ಇಂಡಿಯಾ

ಬದಲಾಗ್ತಾನಾ ನಾಯಕ?

ಆದಾಗ್ಯೂ, ಗಿಲ್ ನಾಯಕನಾಗಿ ವಿಫಲವಾದ ನಂತರ, ಸೂರ್ಯ ಅವರಿಗೆ ಟಿ20 ನಾಯಕತ್ವವನ್ನು ನೀಡಲಾಯಿತು. ಇಲ್ಲೂ ಅದೇ ಆಗುತ್ತದೆಯೇ? ಅಥವಾ ಟಿ20 ವಿಶ್ವಕಪ್​ವರೆಗೆ ಅಯ್ಯರ್ ತಮ್ಮ ನಾಯಕತ್ವವನ್ನು ಉಳಿಸಿಕೊಳ್ಳುತ್ತಾರೆಯೇ? ಅದನ್ನು ನೋಡಬೇಕಾಗಿದೆ. ಏಕೆಂದರೆ ಅಯ್ಯರ್ ಮೊದಲ ಪಂದ್ಯದಲ್ಲಿ ನಾಯಕ ಮತ್ತು ಬ್ಯಾಟ್ಸ್‌ಮನ್ ಆಗಿ ವಿಫಲರಾಗಿದ್ದಾರೆ. ಆದಾಗ್ಯೂ, ಕೇವಲ ಒಂದು ಪಂದ್ಯದೊಂದಿಗೆ ಅಯ್ಯರ್ ಅವರನ್ನು ಕಡಿಮೆ ಅಂದಾಜು ಮಾಡುವುದು ಸರಿಯಲ್ಲ, ಆದರೆ ಟೀಂ ಇಂಡಿಯಾದ ಭವಿಷ್ಯ ಮತ್ತು ನಾಯಕನ ಭವಿಷ್ಯ ಹೇಗಿರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:41 pm, Sat, 27 June 26

Follow Us
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ
ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!
ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!
LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ
LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ
ಸಚಿವರನ್ನು ಬರಮಾಡಿಕೊಳ್ಳುವ ಭರದಲ್ಲಿ 1 ಲಕ್ಷ ರೂ. ಕಳೆದುಕೊಂಡ ಅಭಿಮಾನಿ
ಸಚಿವರನ್ನು ಬರಮಾಡಿಕೊಳ್ಳುವ ಭರದಲ್ಲಿ 1 ಲಕ್ಷ ರೂ. ಕಳೆದುಕೊಂಡ ಅಭಿಮಾನಿ
ಭಾರತದಲ್ಲಿ ಸ್ವಾವಲಂಬನೆಯ ನವ ಯುಗ ಆರಂಭ ಎಂದ ಪ್ರಧಾನಿ ಮೋದಿ
ಭಾರತದಲ್ಲಿ ಸ್ವಾವಲಂಬನೆಯ ನವ ಯುಗ ಆರಂಭ ಎಂದ ಪ್ರಧಾನಿ ಮೋದಿ
ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ: ಈ ಬಗ್ಗೆ ಗೃಹ ಸಚಿವ ಹೇಳಿದ್ದೇನು?
ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ: ಈ ಬಗ್ಗೆ ಗೃಹ ಸಚಿವ ಹೇಳಿದ್ದೇನು?