AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup Qualifier: ಮೂರನೇ ಬಾರಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆದ ಚೀನಾ..!

T20 World Cup Asia Qualifier B 2023: ಟಿ20 ವಿಶ್ವಕಪ್​ ಅರ್ಹತಾ ಸುತ್ತಿನಲ್ಲಿ ಚೀನಾ ತಂಡವು ಇದುವರೆಗೆ 50 ರನ್ ಕಲೆಹಾಕಿಲ್ಲ ಎಂಬುದು ವಿಶೇಷ.

T20 World Cup Qualifier: ಮೂರನೇ ಬಾರಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆದ ಚೀನಾ..!
China Team
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jul 30, 2023 | 7:56 PM

T20 World Cup Asia Qualifier B 2023: ಕೌಲಾಲಂಪುರದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಏಷ್ಯಾ ಕ್ವಾಲಿಫೈಯರ್​ ಪಂದ್ಯದಲ್ಲಿ ಚೀನಾ ಮೂರನೇ ಬಾರಿ ಮುಗ್ಗರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭೂತಾನ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಭೂತಾನ್ ಪರ ಆರಂಭಿಕರಾದ ಟೆಂಜಿನ್ ರಾಬ್ಗೆ (50) ಹಾಗೂ ಸುಪ್ರಿತ್ ಪ್ರಧಾನ್ (59) ಅವರ ಅರ್ಧಶತಕ ಬಾರಿಸಿ ಮಿಂಚಿದರು. ಈ ಅರ್ಧಶತಕಗಳ ನೆರವಿನಿಂದ ಭೂತಾನ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 161 ರನ್ ಪೇರಿಸಿತು.

162 ರನ್​ಗಳ ಗುರಿಯೊಂದಿಗೆ ಇನಿಂಗ್ಸ್ ಆರಂಭಿಸಿದ ಚೀನಾ ತಂಡಕ್ಕೆ ವರುಣ ಅಡ್ಡಿಪಡಿಸಿದ. ಮಳೆಯಿಂದಾಗಿ ಕೆಲ ಕಾಲ ಸ್ಥಗಿತಗೊಂಡಿದ್ದ ಪಂದ್ಯ ಓವರ್ ಕಡಿತದೊಂದಿಗೆ ಮತ್ತೆ ಶುರುವಾಯಿತು. ಅದರಂತೆ ಡಕ್​ವರ್ಥ್ ಲೂಯಿಸ್ ನಿಯಮದ ಪ್ರಕಾರ ಚೀನಾಗೆ 17 ಓವರ್​ಗಳಲ್ಲಿ 144 ರನ್​ಗಳ ಗುರಿ ನೀಡಲಾಗಿತ್ತು.

ಆದರೆ ಭೂತಾನ್ ಬೌಲರ್​ಗಳ ಕರಾರುವಾಕ್ ದಾಳಿ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದ ಚೀನಾ ಬ್ಯಾಟರ್​ಗಳು ಕೇವಲ 11.4 ಓವರ್​ಗಳಲ್ಲಿ 48 ರನ್​ಗಳಿಸಿ ಆಲೌಟ್ ಆದರು. ಇತ್ತ ಭೂತಾನ್ ತಂಡವು 95 ರನ್​ಗಳ ಭರ್ಜರಿ ಜಯ ಸಾಧಿಸಿತು.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾ ಮುಂದಿರುವುದು ಕೇವಲ 19 ಪಂದ್ಯಗಳು..!

ಮೂರನೇ ಬಾರಿ ಅತ್ಯಲ್ಪ ಮೊತ್ತಕ್ಕೆ ಆಲೌಟ್:

ಟಿ20 ವಿಶ್ವಕಪ್​ ಅರ್ಹತಾ ಸುತ್ತಿನಲ್ಲಿ ಚೀನಾ ತಂಡವು ಇದುವರೆಗೆ 50 ರನ್ ಕಲೆಹಾಕಿಲ್ಲ ಎಂಬುದು ವಿಶೇಷ. ಮಲೇಷ್ಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಕೇವಲ 23 ರನ್​ಗಳಿಗೆ ಆಲೌಟ್ ಆಗಿದ್ದರು. ಇನ್ನು ಥೈಲ್ಯಾಂಡ್ ವಿರುದ್ಧದ 2ನೇ ಪಂದ್ಯದಲ್ಲಿ 26 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದೀಗ ಭೂತಾನ್ ವಿರುದ್ಧ 48 ರನ್​ಗಳಿಗೆ ಆಲೌಟ್ ಆಗಿ ಭಾರೀ ಮುಖಭಂಗಕ್ಕೆ ಒಳಗಾಗಿದೆ.

Published On - 7:56 pm, Sun, 30 July 23

ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್