AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup Qualifier: ಮೂರನೇ ಬಾರಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆದ ಚೀನಾ..!

T20 World Cup Asia Qualifier B 2023: ಟಿ20 ವಿಶ್ವಕಪ್​ ಅರ್ಹತಾ ಸುತ್ತಿನಲ್ಲಿ ಚೀನಾ ತಂಡವು ಇದುವರೆಗೆ 50 ರನ್ ಕಲೆಹಾಕಿಲ್ಲ ಎಂಬುದು ವಿಶೇಷ.

T20 World Cup Qualifier: ಮೂರನೇ ಬಾರಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆದ ಚೀನಾ..!
China Team
TV9 Web
| Edited By: |

Updated on:Jul 30, 2023 | 7:56 PM

Share

T20 World Cup Asia Qualifier B 2023: ಕೌಲಾಲಂಪುರದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಏಷ್ಯಾ ಕ್ವಾಲಿಫೈಯರ್​ ಪಂದ್ಯದಲ್ಲಿ ಚೀನಾ ಮೂರನೇ ಬಾರಿ ಮುಗ್ಗರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭೂತಾನ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಭೂತಾನ್ ಪರ ಆರಂಭಿಕರಾದ ಟೆಂಜಿನ್ ರಾಬ್ಗೆ (50) ಹಾಗೂ ಸುಪ್ರಿತ್ ಪ್ರಧಾನ್ (59) ಅವರ ಅರ್ಧಶತಕ ಬಾರಿಸಿ ಮಿಂಚಿದರು. ಈ ಅರ್ಧಶತಕಗಳ ನೆರವಿನಿಂದ ಭೂತಾನ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 161 ರನ್ ಪೇರಿಸಿತು.

162 ರನ್​ಗಳ ಗುರಿಯೊಂದಿಗೆ ಇನಿಂಗ್ಸ್ ಆರಂಭಿಸಿದ ಚೀನಾ ತಂಡಕ್ಕೆ ವರುಣ ಅಡ್ಡಿಪಡಿಸಿದ. ಮಳೆಯಿಂದಾಗಿ ಕೆಲ ಕಾಲ ಸ್ಥಗಿತಗೊಂಡಿದ್ದ ಪಂದ್ಯ ಓವರ್ ಕಡಿತದೊಂದಿಗೆ ಮತ್ತೆ ಶುರುವಾಯಿತು. ಅದರಂತೆ ಡಕ್​ವರ್ಥ್ ಲೂಯಿಸ್ ನಿಯಮದ ಪ್ರಕಾರ ಚೀನಾಗೆ 17 ಓವರ್​ಗಳಲ್ಲಿ 144 ರನ್​ಗಳ ಗುರಿ ನೀಡಲಾಗಿತ್ತು.

ಆದರೆ ಭೂತಾನ್ ಬೌಲರ್​ಗಳ ಕರಾರುವಾಕ್ ದಾಳಿ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದ ಚೀನಾ ಬ್ಯಾಟರ್​ಗಳು ಕೇವಲ 11.4 ಓವರ್​ಗಳಲ್ಲಿ 48 ರನ್​ಗಳಿಸಿ ಆಲೌಟ್ ಆದರು. ಇತ್ತ ಭೂತಾನ್ ತಂಡವು 95 ರನ್​ಗಳ ಭರ್ಜರಿ ಜಯ ಸಾಧಿಸಿತು.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾ ಮುಂದಿರುವುದು ಕೇವಲ 19 ಪಂದ್ಯಗಳು..!

ಮೂರನೇ ಬಾರಿ ಅತ್ಯಲ್ಪ ಮೊತ್ತಕ್ಕೆ ಆಲೌಟ್:

ಟಿ20 ವಿಶ್ವಕಪ್​ ಅರ್ಹತಾ ಸುತ್ತಿನಲ್ಲಿ ಚೀನಾ ತಂಡವು ಇದುವರೆಗೆ 50 ರನ್ ಕಲೆಹಾಕಿಲ್ಲ ಎಂಬುದು ವಿಶೇಷ. ಮಲೇಷ್ಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಕೇವಲ 23 ರನ್​ಗಳಿಗೆ ಆಲೌಟ್ ಆಗಿದ್ದರು. ಇನ್ನು ಥೈಲ್ಯಾಂಡ್ ವಿರುದ್ಧದ 2ನೇ ಪಂದ್ಯದಲ್ಲಿ 26 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದೀಗ ಭೂತಾನ್ ವಿರುದ್ಧ 48 ರನ್​ಗಳಿಗೆ ಆಲೌಟ್ ಆಗಿ ಭಾರೀ ಮುಖಭಂಗಕ್ಕೆ ಒಳಗಾಗಿದೆ.

Published On - 7:56 pm, Sun, 30 July 23

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ