AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 Cricket: ಕೇವಲ 26 ರನ್​ಗಳಿಗೆ ಆಲೌಟ್​ ಆದ ಚೀನಾ..!

T20 World Cup Asia Qualifier: ಮಲೇಷ್ಯಾದ ಕೌಲಾಲಂಪುರ್​ನಲ್ಲಿ ಮುಂಬರುವ ಟಿ20 ವಿಶ್ವಕಪ್​​ಗಾಗಿ ಏಷ್ಯನ್ ತಂಡಗಳ ನಡುವೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ಈ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡುವ ಮೂಲಕ ಚೀನಾ ಭಾರೀ ಮುಖಭಂಗಕ್ಕೆ ಒಳಗಾಗಿದೆ.

T20 Cricket: ಕೇವಲ 26 ರನ್​ಗಳಿಗೆ ಆಲೌಟ್​ ಆದ ಚೀನಾ..!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 27, 2023 | 8:47 PM

Share

T20 World Cup Asia Qualifier: ಕೌಲಾಲಂಪುರ್​ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಏಷ್ಯಾ ಕ್ವಾಲಿಫೈಯರ್​ನ 3ನೇ ಪಂದ್ಯದಲ್ಲಿ ಚೀನಾ ತಂಡವು ಕೇವಲ 26 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಥೈಲ್ಯಾಂಡ್ ತಂಡ ಚೀನಾವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಚೀನಾ ತಂಡವು 1 ರನ್​ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ವಾಂಗ್ ಲಿಯುಯಾಂಗ್ (0) ಶೂನ್ಯಕ್ಕೆ ಔಟಾದರೆ, ಆ ಬಳಿಕ ಬಂದ ಝುವಾಂಗ್ ಝೆಲಿನ್ ಕೂಡ ಸೊನ್ನೆ ಸುತ್ತಿ ಹಿಂತಿರುಗಿದರು.

ಮತ್ತೊಂದೆಡೆ ವೀ ಗುಲೆಯಿ 8 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಯಾವುದೇ ಬ್ಯಾಟರ್ ಒಂದೇ ಒಂದು ಫೋರ್ ಬಾರಿಸಿಲ್ಲ ಎಂಬುದು ವಿಶೇಷ. ಅದರಲ್ಲೂ ಕೆಳ ಕ್ರಮಾಂಕದ ಐವರು ಬ್ಯಾಕ್ ಟು ಬ್ಯಾಕ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಹಾಗೆಯೇ ಒಟ್ಟು 7 ಮಂದಿ ಖಾತೆ ತೆರೆಯದೇ ಪೆವಿಲಿಯನ್​ಗೆ ಹಿಂತಿರುಗಿದ್ದರು.

ಇಲ್ಲಿ ಮತ್ತೊಂದು ಅಚ್ಚರಿಯೆಂದರೆ ಚೀನಾ ಬ್ಯಾಟ್ಸ್​ಮನ್​ಗಳು ಒಟ್ಟುಗೂಡಿ ಕಲೆಹಾಕಿದ್ದು ಕೇವಲ 17 ರನ್​ ಮಾತ್ರ. ಅಂದರೆ ಥೈಲ್ಯಾಂಡ್ ಬೌಲರ್​ಗಳು ಹೆಚ್ಚುವರಿಯಾಗಿ 8 ವೈಡ್ ಹಾಗೂ 1 ನೋಬಾಲ್​ನೊಂದಿಗೆ 9 ರನ್ ನೀಡಿದ್ದರು. ಇದು ಚೀನಾ ತಂಡದ ಆರಂಭಿಕ ಆಟಗಾರ ವೀ ಗುಲೆಯಿ (8) ಕಲೆಹಾಕಿದ ಗರಿಷ್ಠ ಸ್ಕೋರ್​ಗಿಂತ ಹೆಚ್ಚು ಎಂಬುದು ವಿಶೇಷ.

ಇನ್ನು ಈ ಪಂದ್ಯದಲ್ಲಿ 27 ರನ್​ಗಳ ಸುಲಭ ಗುರಿ ಪಡೆದ ಥೈಲ್ಯಾಂಡ್ ತಂಡವು 4.1 ಓವರ್​ಗಳಲ್ಲಿ 1 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟುವ ಮೂಲಕ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಇದನ್ನೂ ಓದಿ: ICC Test Rankings: ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

23 ರನ್​ಗೆ ಆಲೌಟ್ ಆಗಿದ್ದ ಚೀನಾ:

ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಚೀನಾ ತಂಡವು ಮಲೇಷ್ಯಾ ವಿರುದ್ಧ ಕೇವಲ 23 ರನ್​ಗಳಿಗೆ ಆಲೌಟ್ ಆಗಿತ್ತು. ಇದೇ ಪಂದ್ಯದಲ್ಲಿ ಕೇವಲ 8 ರನ್​ ನೀಡಿ 7 ವಿಕೆಟ್ ಕಬಳಿಸಿ ಮಲೇಷ್ಯಾ ವೇಗಿ ಸೈಝ್ರುಲ್ ಇದ್ರಸ್ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ತನ್ನ 2ನೇ ಪಂದ್ಯದಲ್ಲೂ ಚೀನಾ 26 ರನ್​ಗಳಿಗೆ ಆಲೌಟ್ ಆಗಿ ಭಾರೀ ಮುಖಭಂಗಕ್ಕೆ ಒಳಗಾಗಿದೆ.

Follow Us
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ