AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 Cricket: ಕೇವಲ 26 ರನ್​ಗಳಿಗೆ ಆಲೌಟ್​ ಆದ ಚೀನಾ..!

T20 World Cup Asia Qualifier: ಮಲೇಷ್ಯಾದ ಕೌಲಾಲಂಪುರ್​ನಲ್ಲಿ ಮುಂಬರುವ ಟಿ20 ವಿಶ್ವಕಪ್​​ಗಾಗಿ ಏಷ್ಯನ್ ತಂಡಗಳ ನಡುವೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ಈ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡುವ ಮೂಲಕ ಚೀನಾ ಭಾರೀ ಮುಖಭಂಗಕ್ಕೆ ಒಳಗಾಗಿದೆ.

T20 Cricket: ಕೇವಲ 26 ರನ್​ಗಳಿಗೆ ಆಲೌಟ್​ ಆದ ಚೀನಾ..!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 27, 2023 | 8:47 PM

Share

T20 World Cup Asia Qualifier: ಕೌಲಾಲಂಪುರ್​ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಏಷ್ಯಾ ಕ್ವಾಲಿಫೈಯರ್​ನ 3ನೇ ಪಂದ್ಯದಲ್ಲಿ ಚೀನಾ ತಂಡವು ಕೇವಲ 26 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಥೈಲ್ಯಾಂಡ್ ತಂಡ ಚೀನಾವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಚೀನಾ ತಂಡವು 1 ರನ್​ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ವಾಂಗ್ ಲಿಯುಯಾಂಗ್ (0) ಶೂನ್ಯಕ್ಕೆ ಔಟಾದರೆ, ಆ ಬಳಿಕ ಬಂದ ಝುವಾಂಗ್ ಝೆಲಿನ್ ಕೂಡ ಸೊನ್ನೆ ಸುತ್ತಿ ಹಿಂತಿರುಗಿದರು.

ಮತ್ತೊಂದೆಡೆ ವೀ ಗುಲೆಯಿ 8 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಯಾವುದೇ ಬ್ಯಾಟರ್ ಒಂದೇ ಒಂದು ಫೋರ್ ಬಾರಿಸಿಲ್ಲ ಎಂಬುದು ವಿಶೇಷ. ಅದರಲ್ಲೂ ಕೆಳ ಕ್ರಮಾಂಕದ ಐವರು ಬ್ಯಾಕ್ ಟು ಬ್ಯಾಕ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಹಾಗೆಯೇ ಒಟ್ಟು 7 ಮಂದಿ ಖಾತೆ ತೆರೆಯದೇ ಪೆವಿಲಿಯನ್​ಗೆ ಹಿಂತಿರುಗಿದ್ದರು.

ಇಲ್ಲಿ ಮತ್ತೊಂದು ಅಚ್ಚರಿಯೆಂದರೆ ಚೀನಾ ಬ್ಯಾಟ್ಸ್​ಮನ್​ಗಳು ಒಟ್ಟುಗೂಡಿ ಕಲೆಹಾಕಿದ್ದು ಕೇವಲ 17 ರನ್​ ಮಾತ್ರ. ಅಂದರೆ ಥೈಲ್ಯಾಂಡ್ ಬೌಲರ್​ಗಳು ಹೆಚ್ಚುವರಿಯಾಗಿ 8 ವೈಡ್ ಹಾಗೂ 1 ನೋಬಾಲ್​ನೊಂದಿಗೆ 9 ರನ್ ನೀಡಿದ್ದರು. ಇದು ಚೀನಾ ತಂಡದ ಆರಂಭಿಕ ಆಟಗಾರ ವೀ ಗುಲೆಯಿ (8) ಕಲೆಹಾಕಿದ ಗರಿಷ್ಠ ಸ್ಕೋರ್​ಗಿಂತ ಹೆಚ್ಚು ಎಂಬುದು ವಿಶೇಷ.

ಇನ್ನು ಈ ಪಂದ್ಯದಲ್ಲಿ 27 ರನ್​ಗಳ ಸುಲಭ ಗುರಿ ಪಡೆದ ಥೈಲ್ಯಾಂಡ್ ತಂಡವು 4.1 ಓವರ್​ಗಳಲ್ಲಿ 1 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟುವ ಮೂಲಕ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಇದನ್ನೂ ಓದಿ: ICC Test Rankings: ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

23 ರನ್​ಗೆ ಆಲೌಟ್ ಆಗಿದ್ದ ಚೀನಾ:

ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಚೀನಾ ತಂಡವು ಮಲೇಷ್ಯಾ ವಿರುದ್ಧ ಕೇವಲ 23 ರನ್​ಗಳಿಗೆ ಆಲೌಟ್ ಆಗಿತ್ತು. ಇದೇ ಪಂದ್ಯದಲ್ಲಿ ಕೇವಲ 8 ರನ್​ ನೀಡಿ 7 ವಿಕೆಟ್ ಕಬಳಿಸಿ ಮಲೇಷ್ಯಾ ವೇಗಿ ಸೈಝ್ರುಲ್ ಇದ್ರಸ್ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ತನ್ನ 2ನೇ ಪಂದ್ಯದಲ್ಲೂ ಚೀನಾ 26 ರನ್​ಗಳಿಗೆ ಆಲೌಟ್ ಆಗಿ ಭಾರೀ ಮುಖಭಂಗಕ್ಕೆ ಒಳಗಾಗಿದೆ.

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ