T20 Cricket: ಕೇವಲ 26 ರನ್​ಗಳಿಗೆ ಆಲೌಟ್​ ಆದ ಚೀನಾ..!

T20 World Cup Asia Qualifier: ಮಲೇಷ್ಯಾದ ಕೌಲಾಲಂಪುರ್​ನಲ್ಲಿ ಮುಂಬರುವ ಟಿ20 ವಿಶ್ವಕಪ್​​ಗಾಗಿ ಏಷ್ಯನ್ ತಂಡಗಳ ನಡುವೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ಈ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡುವ ಮೂಲಕ ಚೀನಾ ಭಾರೀ ಮುಖಭಂಗಕ್ಕೆ ಒಳಗಾಗಿದೆ.

T20 Cricket: ಕೇವಲ 26 ರನ್​ಗಳಿಗೆ ಆಲೌಟ್​ ಆದ ಚೀನಾ..!
ಸಾಂದರ್ಭಿಕ ಚಿತ್ರ
Follow us
| Updated By: ಝಾಹಿರ್ ಯೂಸುಫ್

Updated on: Jul 27, 2023 | 8:47 PM

T20 World Cup Asia Qualifier: ಕೌಲಾಲಂಪುರ್​ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಏಷ್ಯಾ ಕ್ವಾಲಿಫೈಯರ್​ನ 3ನೇ ಪಂದ್ಯದಲ್ಲಿ ಚೀನಾ ತಂಡವು ಕೇವಲ 26 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಥೈಲ್ಯಾಂಡ್ ತಂಡ ಚೀನಾವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಚೀನಾ ತಂಡವು 1 ರನ್​ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ವಾಂಗ್ ಲಿಯುಯಾಂಗ್ (0) ಶೂನ್ಯಕ್ಕೆ ಔಟಾದರೆ, ಆ ಬಳಿಕ ಬಂದ ಝುವಾಂಗ್ ಝೆಲಿನ್ ಕೂಡ ಸೊನ್ನೆ ಸುತ್ತಿ ಹಿಂತಿರುಗಿದರು.

ಮತ್ತೊಂದೆಡೆ ವೀ ಗುಲೆಯಿ 8 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಯಾವುದೇ ಬ್ಯಾಟರ್ ಒಂದೇ ಒಂದು ಫೋರ್ ಬಾರಿಸಿಲ್ಲ ಎಂಬುದು ವಿಶೇಷ. ಅದರಲ್ಲೂ ಕೆಳ ಕ್ರಮಾಂಕದ ಐವರು ಬ್ಯಾಕ್ ಟು ಬ್ಯಾಕ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಹಾಗೆಯೇ ಒಟ್ಟು 7 ಮಂದಿ ಖಾತೆ ತೆರೆಯದೇ ಪೆವಿಲಿಯನ್​ಗೆ ಹಿಂತಿರುಗಿದ್ದರು.

ಇಲ್ಲಿ ಮತ್ತೊಂದು ಅಚ್ಚರಿಯೆಂದರೆ ಚೀನಾ ಬ್ಯಾಟ್ಸ್​ಮನ್​ಗಳು ಒಟ್ಟುಗೂಡಿ ಕಲೆಹಾಕಿದ್ದು ಕೇವಲ 17 ರನ್​ ಮಾತ್ರ. ಅಂದರೆ ಥೈಲ್ಯಾಂಡ್ ಬೌಲರ್​ಗಳು ಹೆಚ್ಚುವರಿಯಾಗಿ 8 ವೈಡ್ ಹಾಗೂ 1 ನೋಬಾಲ್​ನೊಂದಿಗೆ 9 ರನ್ ನೀಡಿದ್ದರು. ಇದು ಚೀನಾ ತಂಡದ ಆರಂಭಿಕ ಆಟಗಾರ ವೀ ಗುಲೆಯಿ (8) ಕಲೆಹಾಕಿದ ಗರಿಷ್ಠ ಸ್ಕೋರ್​ಗಿಂತ ಹೆಚ್ಚು ಎಂಬುದು ವಿಶೇಷ.

ಇನ್ನು ಈ ಪಂದ್ಯದಲ್ಲಿ 27 ರನ್​ಗಳ ಸುಲಭ ಗುರಿ ಪಡೆದ ಥೈಲ್ಯಾಂಡ್ ತಂಡವು 4.1 ಓವರ್​ಗಳಲ್ಲಿ 1 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟುವ ಮೂಲಕ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಇದನ್ನೂ ಓದಿ: ICC Test Rankings: ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

23 ರನ್​ಗೆ ಆಲೌಟ್ ಆಗಿದ್ದ ಚೀನಾ:

ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಚೀನಾ ತಂಡವು ಮಲೇಷ್ಯಾ ವಿರುದ್ಧ ಕೇವಲ 23 ರನ್​ಗಳಿಗೆ ಆಲೌಟ್ ಆಗಿತ್ತು. ಇದೇ ಪಂದ್ಯದಲ್ಲಿ ಕೇವಲ 8 ರನ್​ ನೀಡಿ 7 ವಿಕೆಟ್ ಕಬಳಿಸಿ ಮಲೇಷ್ಯಾ ವೇಗಿ ಸೈಝ್ರುಲ್ ಇದ್ರಸ್ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ತನ್ನ 2ನೇ ಪಂದ್ಯದಲ್ಲೂ ಚೀನಾ 26 ರನ್​ಗಳಿಗೆ ಆಲೌಟ್ ಆಗಿ ಭಾರೀ ಮುಖಭಂಗಕ್ಕೆ ಒಳಗಾಗಿದೆ.

ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ