AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ದೇಶಕ್ಕಿಂತ ಆರ್​ಸಿಬಿ ತಂಡ ಮುಖ್ಯವೇ? ಆರ್​ಸಿಬಿ ಫ್ಯಾನ್ಸ್ ವಿರುದ್ಧ ಗಂಭೀರ ಆರೋಪ

RCB Fans Controversy: 2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸಿತು. ರನ್‌ಗಳ ಮಹಾಪೂರ ಹರಿದ ಈ ಪಂದ್ಯದಲ್ಲಿ, ಇಂಗ್ಲೆಂಡ್‌ನ ಜಾಕಬ್ ಬೆಥೆಲ್ ಬ್ಯಾಟ್ ಮಾಡುತ್ತಿದ್ದಾಗ ಕೆಲ ಆರ್‌ಸಿಬಿ ಅಭಿಮಾನಿಗಳು ಅವರನ್ನು ಹುರಿದುಂಬಿಸಿದ್ದು ದೊಡ್ಡ ವಿವಾದ ಸೃಷ್ಟಿಸಿತು. ಇದು ಅಂತರರಾಷ್ಟ್ರೀಯ ಪಂದ್ಯದಲ್ಲಿ ದೇಶಭಕ್ತಿಗಿಂತ ಫ್ರಾಂಚೈಸಿ ನಿಷ್ಠೆಗೆ ಆದ್ಯತೆ ನೀಡಿದ್ದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

IND vs ENG: ದೇಶಕ್ಕಿಂತ ಆರ್​ಸಿಬಿ ತಂಡ ಮುಖ್ಯವೇ? ಆರ್​ಸಿಬಿ ಫ್ಯಾನ್ಸ್ ವಿರುದ್ಧ ಗಂಭೀರ ಆರೋಪ
Rcb Fans
ಪೃಥ್ವಿಶಂಕರ
|

Updated on:Mar 06, 2026 | 7:16 PM

Share

2026 ರ ಟಿ20 ವಿಶ್ವಕಪ್‌ (T20 World Cup 2026) ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಕೇವಲ 7 ರನ್‌ಗಳಿಂದ ಸೋಲಿಸಿದ ಟೀಂ ಇಂಡಿಯಾ (India vs England) ಫೈನಲ್​ಗೇರಿತು. ರನ್​ಗಳ ಮಳೆಯೇ ಹರಿದ ಈ ಪಂದ್ಯದಲ್ಲಿ ಬೌಲರ್​ಗಳು ಹೈರಾಣಾದರೆ ಬ್ಯಾಟ್ಸ್​ಮನ್​ಗಳು ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದರು. ಅದರಲ್ಲೂ ಕ್ರೀಡಾಂಗಣದಲ್ಲಿ ಭಾರತದ ಅಭಿಮಾನಿಗಳು ಹೆಚ್ಚಿದ್ದ ಕಾರಣ, ಟೀಂ ಇಂಡಿಯಾದ ಬ್ಯಾಟಿಂಗ್‌ ವೇಳೆ ಇಡೀ ಕ್ರೀಡಾಂಗಣವೇ ಜೈಕಾರಗಳಿಂದ ತುಂಬಿ ತುಳುಕಿತ್ತು. ಇತ್ತ ಇಂಗ್ಲೆಂಡ್ ಬ್ಯಾಟಿಂಗ್‌ ವೇಳೆ ಆಂಗ್ಲ ಆಭಿಮಾನಿಗಳು ಕಡಿಮೆ ಇದ್ದ ಕಾರಣ, ಇಂಗ್ಲೆಂಡ್ ಬ್ಯಾಟ್ಸ್‌ಮನ್​ಗಳು ಬೌಂಡರಿ, ಸಿಕ್ಸರ್ ಬಾರಿಸುತ್ತಿದ್ದಂತೆ ಇಡೀ ಕ್ರೀಡಾಂಗಣವೇ ನಿಶ್ಯಬ್ದವಾಗಿತ್ತು. ಆದಾಗ್ಯೂ ಇಂಗ್ಲೆಂಡ್ ತಂಡದ ಬ್ಯಾಟಿಂಗ್‌ ವೇಳೆ ಆರ್​ಸಿಬಿ ಅಭಿಮಾನಿಗಳ (RCB Fans) ಅತಿರೇಕ ಇತರ ಅಭಿಮಾನಿಗಳನ್ನು ಅಸಮಾಧಾನಗೊಳ್ಳುವಂತೆ ಮಾಡಿತು. ಇದೀಗ ಆರ್​ಸಿಬಿ ಫ್ಯಾನ್ಸ್ ಅಂಧಾಭಿಮಾನಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ಆರ್​ಸಿಬಿ ಫ್ಯಾನ್ಸ್ ಅಂಧಾಭಿಮಾನ

ವಾಸ್ತವವಾಗಿ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಬರೋಬ್ಬರಿ 253 ರನ್ ಕಲೆಹಾಕಿತು. ಗುರಿ ದೊಡ್ಡದಿದ್ದರಿಂದ ಟೀಂ ಇಂಡಿಯಾ ಈ ಪಂದ್ಯವನ್ನು ಸುಲಭವಾಗಿ ಗೆದ್ದುಕೊಳ್ಳುತ್ತದೆ ಎಂದು ಭಾವಿಸಲಾಗಿತ್ತು. ಆದರೆ ಕೊನೆಯವರೆಗೂ ಸೋಲೊಪ್ಪಿಕೊಳ್ಳದ ಇಂಗ್ಲೆಂಡ್ ಆಟಗಾರರು ಪಂದ್ಯವನ್ನು ಕೊನೆಯವರೆಗೂ ರೋಚಕಗೊಳಿಸಿದರು. ಇದರಿಂದ ಟೀಂ ಇಂಡಿಯಾ ಅಭಿಮಾನಿಗಳಲ್ಲಿ ಕೊನೆಯ ಓವರ್​ವರೆಗೂ ಆತಂಕ ಮನೆಮಾಡಿತ್ತು. ಆದರೆ ಆರ್​ಸಿಬಿ ಅಭಿಮಾನಿಗಳು ಕ್ರೀಡಾಂಗಣದಲ್ಲಿ ವರ್ತಿಸಿದ ರೀತಿ ನಿಜಕ್ಕೂ ಟೀಂ ಇಂಡಿಯಾ ಅಭಿಮಾನಿಗಳನ್ನು ಬೇಸರಗೊಳಿಸಿದಲ್ಲದೆ, ಕೋಪಗೊಳ್ಳುವಂತೆ ಮಾಡಿತು.

ಅಷ್ಟಕ್ಕೂ ಆರ್​ಸಿಬಿ ಫ್ಯಾನ್ಸ್ ಮಾಡಿದ್ದಾದರೂ ಏನು ಎಂಬುದನ್ನು ನೋಡುವುದಾದರೆ… ಇಂಗ್ಲೆಂಡ್ ಪರ ಗೆಲುವಿಗಾಗಿ ಏಕಾಂಗಿ ಹೋರಾಟ ನಡೆಸಿದ ಜೆಕಬ್ ಬೆಥೆಲ್ ಸ್ಫೋಟಕ ಶತಕ ಸಿಡಿಸುವುದರ ಜೊತೆಗೆ ತಂಡವನ್ನು ಗೆಲುವಿನ ಸನಿಹಕ್ಕೆ ಕೊಂಡೊಯ್ಯುವ ಕೆಲಸ ಮಾಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 48 ಎಸೆತಗಳನ್ನು ಎದುರಿಸಿದ ಬೆಥೆಲ್ 8 ಬೌಂಡರಿ ಹಾಗೂ 7 ಸಿಕ್ಸರ್‌ಗಳನ್ನು ಬಾರಿಸಿದರು. ಹೀಗೆ ಬೆಥೆಲ್ ಭಾರತದ ಬೌಲರ್​ಗಳನ್ನು ದಂಡಿಸುತ್ತಿದ್ದರೆ ಒಂದೆಡೆ ಟೀಂ ಇಂಡಿಯಾ ಅಭಿಮಾನಿಗಳು ಬೇಸರದಿಂದ ತಲೆಮೇಲೆ ಕೈಹೊತ್ತು ಕುಳಿತಿದ್ದರು. ಆದರೆ ಕ್ರೀಡಾಂಗಣದಲ್ಲಿದ್ದ ಕೆಲವು ಆರ್​ಸಿಬಿ ಫ್ಯಾನ್ಸ್, ಬೆಥೆಲ್ ಬೌಂಡರಿ ಸಿಕ್ಸರ್‌ಗಳನ್ನು ಬಾರಿಸುತ್ತಿದ್ದಂತೆ ಆರ್​ಸಿಬಿ, ಆರ್​ಸಿಬಿ ಎಂದು ಕೂಗಲು ಶುರು ಮಾಡುತ್ತಿದ್ದರು.

ದೇಶಕ್ಕಿಂತ ಆರ್​ಸಿಬಿ ತಂಡ ಮುಖ್ಯವೇ?

ಏಕೆಂದರೆ ಬೆಥೆಲ್ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡುತ್ತಾರೆ. ಹೀಗಾಗಿ ಕೆಲವು ಆರ್​ಸಿಬಿ ಅಭಿಮಾನಿಗಳು ಬೆಥೆಲ್​, ಭಾರತದ ಬೌಲರ್​ಗಳನ್ನು ದಂಡಿಸುತ್ತಿದ್ದಾಗ ಆರ್​ಸಿಬಿ, ಆರ್​ಸಿಬಿ ಎಂದು ಕೂಗಿ ಟೀಂ ಇಂಡಿಯಾ ಅಭಿಮಾನಿಗಳಿಗೆ ಇರಿಸು ಮುರಿಸು ಉಂಟುಮಾಡಿದರು. ಆರ್​ಸಿಬಿ ಅಭಿಮಾನಿಗಳ ಈ ಅತಿರೇಕ ಎಲ್ಲರನ್ನು ಅಸಮಾಧಾನಗೊಳಿಸಿದೆ. ಅಂತರರಾಷ್ಟ್ರೀಯ ಪಂದ್ಯದಲ್ಲಿ ತಮ್ಮ ದೇಶವನ್ನು ಬೆಂಬಲಿಸುವ ಬದಲು ಫ್ರಾಂಚೈಸ್ ಕ್ರಿಕೆಟ್​ನಲ್ಲಿ ಒಂದು ತಂಡವನ್ನು ಪ್ರತಿನಿಧಿಸುವ ಆಟಗಾರನನ್ನು ಬೆಂಬಲಿಸುವುದು ಎಷ್ಟು ಸರಿ ಎಂಬುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

T20 World Cup 2026: ಫೈನಲ್ ಪಂದ್ಯ ರದ್ದಾದರೆ ಯಾವ ತಂಡಕ್ಕೆ ಚಾಂಪಿಯನ್ ಪಟ್ಟ? ಐಸಿಸಿ ನಿಯಮ ಏನು ಹೇಳುತ್ತದೆ?

ಆರ್​ಸಿಬಿ ಅಭಿಮಾನಿಗಳ ಈ ಅಂಧಾಭಿಮಾನ ಸೋಶಿಯಲ್ ಮಿಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಟೀಂ ಇಂಡಿಯಾ ಅಭಿಮಾನಿಗಳ ಇದನ್ನು ನಾಚಿಕೆಗೇಡಿನ ಸಂಗತಿ ಎಂದು ಜರಿದಿದ್ದಾರೆ. ದೇಶದ ತಂಡವು ಅಂತರರಾಷ್ಟ್ರೀಯ ಪಂದ್ಯದಲ್ಲಿ ಆಡುತ್ತಿರುವಾಗ ಫ್ರಾಂಚೈಸಿ ನಿಷ್ಠೆಯನ್ನು ತೋರಿಸುವುದು ತಪ್ಪು ಎಂದು ಅನೇಕರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇನ್ನು ಕೆಲವರು ‘ಫ್ರಾಂಚೈಸಿ ಕ್ರಿಕೆಟ್​ಗಿಂತ ದೇಶವೇ ಮೊದಲು, ಐಪಿಎಲ್ ಅಲ್ಲ’ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:11 pm, Fri, 6 March 26

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?