AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 world cup: ಕೊಹ್ಲಿ ನತದೃಷ್ಟ ನಾಯಕ! ಭಾರತವನ್ನು ಸೋಲಿಸಲು ಪಾಕ್ ತಂಡಕ್ಕೆ 3 ಸಲಹೆ ನೀಡಿದ ಅಖ್ತರ್..!

T20 world cup: ಪಾಕಿಸ್ತಾನ ಅತ್ಯಂತ ಬಲಿಷ್ಠ ತಂಡವಾಗಿರುವುದರಿಂದ ಟೀಂ ಇಂಡಿಯಾದ ಆಟಗಾರರಿಗೆ ನಿದ್ರೆ ಮಾತ್ರೆ ನೀಡಬೇಕು. ಎರಡನೇ ಸಲಹೆ ಏನೆಂದರೆ ನೀವು ವಿರಾಟ್ ಕೊಹ್ಲಿಯನ್ನು ಇನ್‌ಸ್ಟಾಗ್ರಾಮ್ ಬಳಸದಂತೆ ತಡೆಯಿರಿ ಏಕೆಂದರೆ ಅವರು ಅಲ್ಲಿ ಬಹಳ ಜನಪ್ರಿಯರಾಗಿದ್ದಾರೆ.

T20 world cup: ಕೊಹ್ಲಿ ನತದೃಷ್ಟ ನಾಯಕ! ಭಾರತವನ್ನು ಸೋಲಿಸಲು ಪಾಕ್ ತಂಡಕ್ಕೆ 3 ಸಲಹೆ ನೀಡಿದ ಅಖ್ತರ್..!
ಧೋನಿ- ಕೊಹ್ಲಿ
TV9 Web
| Edited By: |

Updated on: Oct 24, 2021 | 4:39 PM

Share

ಟಿ20 ವಿಶ್ವಕಪ್‌ನ ಅತ್ಯಧಿಕ ವೋಲ್ಟೇಜ್ ಪಂದ್ಯ ಭಾನುವಾರ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿದೆ. ಈ ಮಹಾನ್ ಪಂದ್ಯಕ್ಕಾಗಿ ಎರಡೂ ದೇಶಗಳ ಅಭಿಮಾನಿಗಳು ತುಂಬಾ ಕಾತುರರಾಗಿದ್ದಾರೆ. ಅಭಿಮಾನಿಗಳಿಂದ ಅನುಭವಿಗಳವರೆಗೆ, ಪ್ರತಿಯೊಬ್ಬರೂ ಈ ಪಂದ್ಯಕ್ಕಾಗಿ ತಮ್ಮ ತಂಡಗಳ ಉತ್ಸಾಹವನ್ನು ಹೆಚ್ಚಿಸಲು ಮೈದಾನಕ್ಕೆ ತಂಡೋಪ ತಂಡವಾಗಿ ಇಳಿಯಲಿದ್ದಾರೆ. ಆದರೆ ಟೀಂ ಇಂಡಿಯಾವನ್ನು ಸೋಲಿಸಲು ಪಾಕಿಸ್ತಾನದ ಮಾಜಿ ಬೌಲರ್ ಶೋಯೆಬ್ ಅಖ್ತರ್ ತಮ್ಮ ತಂಡಕ್ಕೆ ಮೂರು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಶೋಯೆಬ್ ಪ್ರಕಾರ, ಈ ಸಲಹೆಯನ್ನು ಅನುಸರಿಸುವ ಮೂಲಕ ಪಾಕಿಸ್ತಾನದ ಗೆಲುವು ಸುಲಭವಾಗಲಿದೆ.

ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ತಂಡವು ಭಾರತದ ಎದುರು ಗೆಲ್ಲಲು ಹೆಣಗಾಡುತ್ತಿರುವುದು ಕಂಡುಬಂದಿದೆ. ಈ ಪಂದ್ಯಾವಳಿಯ ಆರು ಋತುಗಳಲ್ಲಿ, ಎರಡೂ ತಂಡಗಳು ಐದು ಬಾರಿ ಮುಖಾಮುಖಿಯಾಗಿವೆ ಮತ್ತು ಪ್ರತಿ ಬಾರಿಯೂ ಟೀಮ್ ಇಂಡಿಯಾ ಗೆಲುವು ಸಾಧಿಸಿದೆ. ಅದೇ ಸಮಯದಲ್ಲಿ, ಉಭಯ ತಂಡಗಳ ನಡುವೆ ಆಡಿದ 8 ಟಿ 20 ಪಂದ್ಯಗಳಲ್ಲಿ ಪಾಕಿಸ್ತಾನ ಕೇವಲ ಒಂದು ಪಂದ್ಯವನ್ನು ಗೆದ್ದಿದೆ. ಈ ಸೋಲಿನ ಸರಣಿಯನ್ನು ಅಂತ್ಯಗೊಳಿಸಲು ಭಾನುವಾರ ಪಾಕಿಸ್ತಾನ ಕಣಕ್ಕಿಳಿಯಲಿದೆ.

ಶೋಯೆಬ್ ಅಖ್ತರ್ ತಮ್ಮ ತಂಡಕ್ಕೆ ಸಲಹೆ ನೀಡಿದರು ಈ ಪಂದ್ಯವನ್ನು ಗೆಲ್ಲಲು ಪಾಕಿಸ್ತಾನದ ಮಾಜಿ ಬೌಲರ್ ಶೋಯೆಬ್ ಅಖ್ತರ್ ತಮ್ಮ ತಂಡಕ್ಕೆ ಅಂತಹ ಮೂರು ಸಲಹೆಗಳನ್ನು ನೀಡಿದ್ದಾರೆ. ಆ ಮೂರು ಸಲಹೆಗಳನ್ನು ಕೇಳಿದರೆ ಎಂತವರೂ ನಗದೆ ಇರಲಾರು. ಶೋಯೆಬ್ ಅಖ್ತರ್ ಸಲಹೆಗಳೆಂದರೆ, ಪಾಕಿಸ್ತಾನ ಅತ್ಯಂತ ಬಲಿಷ್ಠ ತಂಡವಾಗಿರುವುದರಿಂದ ಟೀಂ ಇಂಡಿಯಾದ ಆಟಗಾರರಿಗೆ ನಿದ್ರೆ ಮಾತ್ರೆ ನೀಡಬೇಕು. ಎರಡನೇ ಸಲಹೆ ಏನೆಂದರೆ ನೀವು ವಿರಾಟ್ ಕೊಹ್ಲಿಯನ್ನು ಇನ್‌ಸ್ಟಾಗ್ರಾಮ್ ಬಳಸದಂತೆ ತಡೆಯಿರಿ ಏಕೆಂದರೆ ಅವರು ಅಲ್ಲಿ ಬಹಳ ಜನಪ್ರಿಯರಾಗಿದ್ದಾರೆ. ಅದೇ ಸಮಯದಲ್ಲಿ, ಅತ್ಯಂತ ಮುಖ್ಯವಾದ ಮೂರನೇ ಸಲಹೆಯಂತೆ, ಟೀಮ್ ಇಂಡಿಯಾದ ಆಪ್ತ ಸಲಹೆಗಾರ ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಮಾಡಲು ಬರುವುದಿಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳುವಂತೆ ಅವರು ತಮ್ಮ ಆಟಗಾರರಿಗೆ ಕಿವಿಮಾತು ಹೇಳಿದ್ದಾರೆ. ಪಾಕಿಸ್ತಾನದ ಆಟಗಾರರು ಕೇವಲ ಧೋನಿ ಮೈದಾನದಲ್ಲಿ ಬ್ಯಾಟಿಂಗ್ ಮಾಡಲು ಬರುವುದಿಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ಏಕೆಂದರೆ ಅವರು ಇನ್ನೂ ಅತ್ಯಂತ ಫಾರ್ಮ್ ಬ್ಯಾಟ್ಸ್‌ಮನ್ ಆಗಿದ್ದಾರೆ ಎಂದು ಅಖ್ತರ್, ಧೋನಿಯನ್ನು ಹೊಗಳಿದ್ದಾರೆ.

ವಿರಾಟ್ ಕೊಹ್ಲಿಯನ್ನು ಕೆಣಕ್ಕಿದ ಶೋಯಿಬ್ ಅಖ್ತರ್ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಗ್ಗೆ ಶೋಯೆಬ್ ಅಖ್ತರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಲ್ಲದೇ ನಾಯಕರ ಅದೃಷ್ಟದ ವಿಚಾರಕ್ಕೆ ಬಂದರೆ ಅದರಲ್ಲಿ ಬಾಬರ್ ಅಜಮ್, ಕೊಹ್ಲಿಗಿಂತ ಮುಂದಿರುವ ಕಾರಣ ಪಾಕಿಸ್ತಾನದ ಮೇಲುಗೈ ಇದೆ ಎಂದೂ ಅಖ್ತರ್ ಹೇಳಿದ್ದಾರೆ. ವಿರಾಟ್ ಕೊಹ್ಲಿ ಬಗ್ಗೆ ನನಗೆ ಬೇಸರವಾಗಿದೆ, ಅವರು ಟೀಮ್ ಇಂಡಿಯಾಕ್ಕೆ ಅದೃಷ್ಟದ ನಾಯಕರಾಗಿಲ್ಲ, ಆದರೆ ಭಾರತ ಮತ್ತು ಪಾಕಿಸ್ತಾನ ನಡುವೆ ನಿಕಟ ಸ್ಪರ್ಧೆ ಇರುತ್ತದೆ. ಇಬ್ಬರು ಅತ್ಯುತ್ತಮ ನಾಯಕರು ಮತ್ತು ಇಬ್ಬರು ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳು ತಮ್ಮ ತಂಡಗಳನ್ನು ಮುನ್ನಡೆಸಲಿದ್ದಾರೆ ಎಂದಿದ್ದಾರೆ.

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ