AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup Qualifier 2023: ಕೊನೆಗೂ ಗೆದ್ದು ಬೀಗಿದ ಚೀನಾ ತಂಡ

T20 World Cup Qualifier 2023: ಟಿ20 ವಿಶ್ವಕಪ್ ಏಷ್ಯಾ ಅರ್ಹತಾ ಸುತ್ತಿನ ಪಂದ್ಯದಲ್ಲಿ ಇದು ಚೀನಾ ತಂಡದ ಮೊದಲ ಗೆಲುವಾಗಿದೆ. ಇದಕ್ಕೂ ಮುನ್ನ ನಡೆದ ಮೂರು ಪಂದ್ಯಗಳಲ್ಲಿ ಚೀನಾ ತಂಡವು 50 ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿದ್ದರು.

T20 World Cup Qualifier 2023: ಕೊನೆಗೂ ಗೆದ್ದು ಬೀಗಿದ ಚೀನಾ ತಂಡ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 31, 2023 | 9:30 PM

Share

T20 World Cup Qualifier 2023: ಟಿ20 ವಿಶ್ವಕಪ್ ಏಷ್ಯಾ ಕ್ವಾಲಿಫೈಯರ್-ಬಿ ವಿಭಾಗದ ಅರ್ಹತಾ ಸುತ್ತಿನ ಪಂದ್ಯದಲ್ಲಿ ಚೀನಾ ತಂಡವು ತನ್ನ ಮೊದಲ ಗೆಲುವು ದಾಖಲಿಸಿದೆ. ಕೌಲಾಲಂಪುರದ ಬೇಯುಮಾಸ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಚೀನಾ ತಂಡವು ಮ್ಯಾನ್ಮಾರ್ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಮ್ಯಾನ್ಮಾರ್ ತಂಡವು ಕೇವಲ 30 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ 17 ರನ್​ಗಳ ಕೊಡುಗೆ ನೀಡಿದ ವಿಕೆಟ್ ಕೀಪರ್ ಬ್ಯಾಟರ್ ನಾಯಿಂಗ್ ತುನ್ ತಂಡಕ್ಕೆ ಆಸರೆಯಾದರು.

ಆದರೆ ಮತ್ತೊಂದೆಡೆ ಚೀನಾ ಬೌಲರ್​ಗಳು ವಿಕೆಟ್​ಗಳನ್ನು ಉರುಳಿಸುತ್ತಾ ಸಾಗಿದರು. ಪರಿಣಾಮ ನಿಗದಿತ 20 ಓವರ್​ಗಳಲ್ಲಿ ಮ್ಯಾನ್ಮಾರ್ ತಂಡವು 8 ವಿಕೆಟ್ ನಷ್ಟದೊಂದಿಗೆ ಕೇವಲ 77 ರನ್​ಗಳಿಸಲಷ್ಟೇ ಶಕ್ತರಾದರು.

78 ರನ್​ಗಳ ಸುಲಭ ಗುರಿ ಪಡೆದ ಚೀನಾ ತಂಡದ ಪರ ಆರಂಭಿಕ ಆಟಗಾರ ಝುವಾಂಗ್ ಝೆಲಿನ್ 33 ರನ್​ಗಳನ್ನು ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು. ಇನ್ನು ವಾಂಗ್ ಲಿಯುಯಾಂಗ್ 18 ರನ್​ಗಳ ಕೊಡುಗೆ ನೀಡಿದರೆ, ಚೆನ್ ಝೂಯುಯೆ ಅಜೇಯ 13 ರನ್​ಗಳಿಸಿ ತಂಡವನ್ನು 17.2 ಓವರ್​ಗಳಲ್ಲಿ ಗುರಿ ಮುಟ್ಟಿಸಿದರು. ಈ ಮೂಲಕ ಚೀನಾ ತಂಡವು 5 ವಿಕೆಟ್​ಗಳ ಜಯ ಸಾಧಿಸಿತು.

ಚೀನಾ ತಂಡಕ್ಕೆ ಮೊದಲ ಗೆಲುವು:

ಟಿ20 ವಿಶ್ವಕಪ್ ಏಷ್ಯಾ ಅರ್ಹತಾ ಸುತ್ತಿನ ಪಂದ್ಯದಲ್ಲಿ ಇದು ಚೀನಾ ತಂಡದ ಮೊದಲ ಗೆಲುವಾಗಿದೆ. ಇದಕ್ಕೂ ಮುನ್ನ ನಡೆದ ಮೂರು ಪಂದ್ಯಗಳಲ್ಲಿ ಚೀನಾ ತಂಡವು 50 ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿದ್ದರು.

ಇದನ್ನೂ ಓದಿ: Team India: ಒಟ್ಟು 47 ಪ್ಲೇಯರ್ಸ್​: ಟೀಮ್ ಇಂಡಿಯಾದಿಂದ 32 ಆಟಗಾರರು ಔಟ್..!

ಮೊದಲ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ 23 ರನ್​ಗಳಿಗೆ ಆಲೌಟ್ ಆಗಿದ್ದ ಚೀನಾ, ಆ ಬಳಿಕ ಥೈಲ್ಯಾಂಡ್​ ವಿರುದ್ಧ 26 ರನ್​ಗಳಿಗೆ ಮುಗ್ಗರಿಸಿದ್ದರು. ಇನ್ನು ಭೂತಾನ್ ವಿರುದ್ಧ 3ನೇ ಪಂದ್ಯದಲ್ಲಿ 48 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದೀಗ 78 ರನ್​ಗಳನ್ನು ಚೇಸ್ ಮಾಡುವ ಮೂಲಕ ಚೀನಾ ತಂಡವು ತನ್ನ ಮೊದಲ ಗೆಲುವು ಸಾಧಿಸಿದೆ.

Published On - 9:30 pm, Mon, 31 July 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ