AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup Qualifier 2023: ಕೊನೆಗೂ ಗೆದ್ದು ಬೀಗಿದ ಚೀನಾ ತಂಡ

T20 World Cup Qualifier 2023: ಟಿ20 ವಿಶ್ವಕಪ್ ಏಷ್ಯಾ ಅರ್ಹತಾ ಸುತ್ತಿನ ಪಂದ್ಯದಲ್ಲಿ ಇದು ಚೀನಾ ತಂಡದ ಮೊದಲ ಗೆಲುವಾಗಿದೆ. ಇದಕ್ಕೂ ಮುನ್ನ ನಡೆದ ಮೂರು ಪಂದ್ಯಗಳಲ್ಲಿ ಚೀನಾ ತಂಡವು 50 ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿದ್ದರು.

T20 World Cup Qualifier 2023: ಕೊನೆಗೂ ಗೆದ್ದು ಬೀಗಿದ ಚೀನಾ ತಂಡ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 31, 2023 | 9:30 PM

Share

T20 World Cup Qualifier 2023: ಟಿ20 ವಿಶ್ವಕಪ್ ಏಷ್ಯಾ ಕ್ವಾಲಿಫೈಯರ್-ಬಿ ವಿಭಾಗದ ಅರ್ಹತಾ ಸುತ್ತಿನ ಪಂದ್ಯದಲ್ಲಿ ಚೀನಾ ತಂಡವು ತನ್ನ ಮೊದಲ ಗೆಲುವು ದಾಖಲಿಸಿದೆ. ಕೌಲಾಲಂಪುರದ ಬೇಯುಮಾಸ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಚೀನಾ ತಂಡವು ಮ್ಯಾನ್ಮಾರ್ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಮ್ಯಾನ್ಮಾರ್ ತಂಡವು ಕೇವಲ 30 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ 17 ರನ್​ಗಳ ಕೊಡುಗೆ ನೀಡಿದ ವಿಕೆಟ್ ಕೀಪರ್ ಬ್ಯಾಟರ್ ನಾಯಿಂಗ್ ತುನ್ ತಂಡಕ್ಕೆ ಆಸರೆಯಾದರು.

ಆದರೆ ಮತ್ತೊಂದೆಡೆ ಚೀನಾ ಬೌಲರ್​ಗಳು ವಿಕೆಟ್​ಗಳನ್ನು ಉರುಳಿಸುತ್ತಾ ಸಾಗಿದರು. ಪರಿಣಾಮ ನಿಗದಿತ 20 ಓವರ್​ಗಳಲ್ಲಿ ಮ್ಯಾನ್ಮಾರ್ ತಂಡವು 8 ವಿಕೆಟ್ ನಷ್ಟದೊಂದಿಗೆ ಕೇವಲ 77 ರನ್​ಗಳಿಸಲಷ್ಟೇ ಶಕ್ತರಾದರು.

78 ರನ್​ಗಳ ಸುಲಭ ಗುರಿ ಪಡೆದ ಚೀನಾ ತಂಡದ ಪರ ಆರಂಭಿಕ ಆಟಗಾರ ಝುವಾಂಗ್ ಝೆಲಿನ್ 33 ರನ್​ಗಳನ್ನು ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು. ಇನ್ನು ವಾಂಗ್ ಲಿಯುಯಾಂಗ್ 18 ರನ್​ಗಳ ಕೊಡುಗೆ ನೀಡಿದರೆ, ಚೆನ್ ಝೂಯುಯೆ ಅಜೇಯ 13 ರನ್​ಗಳಿಸಿ ತಂಡವನ್ನು 17.2 ಓವರ್​ಗಳಲ್ಲಿ ಗುರಿ ಮುಟ್ಟಿಸಿದರು. ಈ ಮೂಲಕ ಚೀನಾ ತಂಡವು 5 ವಿಕೆಟ್​ಗಳ ಜಯ ಸಾಧಿಸಿತು.

ಚೀನಾ ತಂಡಕ್ಕೆ ಮೊದಲ ಗೆಲುವು:

ಟಿ20 ವಿಶ್ವಕಪ್ ಏಷ್ಯಾ ಅರ್ಹತಾ ಸುತ್ತಿನ ಪಂದ್ಯದಲ್ಲಿ ಇದು ಚೀನಾ ತಂಡದ ಮೊದಲ ಗೆಲುವಾಗಿದೆ. ಇದಕ್ಕೂ ಮುನ್ನ ನಡೆದ ಮೂರು ಪಂದ್ಯಗಳಲ್ಲಿ ಚೀನಾ ತಂಡವು 50 ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿದ್ದರು.

ಇದನ್ನೂ ಓದಿ: Team India: ಒಟ್ಟು 47 ಪ್ಲೇಯರ್ಸ್​: ಟೀಮ್ ಇಂಡಿಯಾದಿಂದ 32 ಆಟಗಾರರು ಔಟ್..!

ಮೊದಲ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ 23 ರನ್​ಗಳಿಗೆ ಆಲೌಟ್ ಆಗಿದ್ದ ಚೀನಾ, ಆ ಬಳಿಕ ಥೈಲ್ಯಾಂಡ್​ ವಿರುದ್ಧ 26 ರನ್​ಗಳಿಗೆ ಮುಗ್ಗರಿಸಿದ್ದರು. ಇನ್ನು ಭೂತಾನ್ ವಿರುದ್ಧ 3ನೇ ಪಂದ್ಯದಲ್ಲಿ 48 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದೀಗ 78 ರನ್​ಗಳನ್ನು ಚೇಸ್ ಮಾಡುವ ಮೂಲಕ ಚೀನಾ ತಂಡವು ತನ್ನ ಮೊದಲ ಗೆಲುವು ಸಾಧಿಸಿದೆ.

Published On - 9:30 pm, Mon, 31 July 23

Follow Us
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ