AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ವಿರುದ್ಧದ ಗೆಲುವನ್ನು ಅದ್ಧೂರಿಯಾಗಿ ಸಂಭ್ರಮಿಸುವುದು ಬೇಡವೆಂದ ರೋಹಿತ್- ದ್ರಾವಿಡ್!

T20 World Cup 2022: ಪಾಕಿಸ್ತಾನದ ವಿರುದ್ಧದ ಗೆಲುವನ್ನು ಅದ್ಧೂರಿಯಾಗಿ ಆಚರಿಸಬೇಡಿ ಎಂದು ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ತಂಡಕ್ಕೆ ಸಂದೇಶ ನೀಡಿದ್ದರು.

ಪಾಕ್ ವಿರುದ್ಧದ ಗೆಲುವನ್ನು ಅದ್ಧೂರಿಯಾಗಿ ಸಂಭ್ರಮಿಸುವುದು ಬೇಡವೆಂದ ರೋಹಿತ್- ದ್ರಾವಿಡ್!
ಟೀಂ ಇಂಡಿಯಾದ ಪ್ರಾತಿನಿಧಿಕ ಚಿತ್ರ
TV9 Web
| Updated By: ಪೃಥ್ವಿಶಂಕರ|

Updated on: Oct 26, 2022 | 1:06 PM

Share

ಮೆಲ್ಬೋರ್ನ್‌ನಲ್ಲಿ ಪಾಕ್ (Pakistan) ತಂಡವನ್ನು ಮಣಿಸಿದ ಟೀಂ ಇಂಡಿಯಾ (Team India) ಇದೀಗ ಸಿಡ್ನಿಗೆ ಆಗಮಿಸಿದೆ. ಗುರುವಾರ ನೆದರ್ಲೆಂಡ್ಸ್ ವಿರುದ್ಧ ರೋಹಿತ್ ಪಡೆ ಇದೇ ಮೈದಾನದಲ್ಲಿ ತನ್ನ ಎರಡನೇ ಪಂದ್ಯವನ್ನು ಆಡಲಿದೆ. ಆದರೆ ಆ ಪಂದ್ಯಕ್ಕೂ ಮುನ್ನ ತನ್ನ ಕುಟುಂಬದವರೊಂದಿಗೆ ಅದ್ಧೂರಿಯಾಗಿ ದೀಪಾವಳಿ ಆಚರಿಸಲು ನಿರ್ಧರಿಸಿದ್ದ ಟೀಂ ಇಂಡಿಯಾ ಆಟಗಾರರಿಗೆ ನಾಯಕ ಹಾಗೂ ಕೋಚ್ ಬ್ರೇಕ್ ಹಾಕಿದ್ದಾರೆ. ವಾಸ್ತವವಾಗಿ ಟೀಂ ಇಂಡಿಯಾ ಆಟಗಾರರು ಪಾಕಿಸ್ತಾನದ ವಿರುದ್ಧದ ರೋಚಕ ಗೆಲುವು ಮತ್ತು ದೀಪಾವಳಿ ಹಬ್ಬವನ್ನು (Diwali festival) ಸಿಡ್ನಿಯಲ್ಲಿ (Sydney) ಆಚರಿಸಲು ಯೋಜನೆ ರೂಪಿಸಿಕೊಂಡಿದ್ದರು. ಆದರೆ ಇದೀಗ ಈ ಆಚರಣೆಗೆ ಬ್ರೇಕ್ ಬಿದ್ದಂತ್ತಾಗಿದೆ.

ಪಾಕಿಸ್ತಾನದ ವಿರುದ್ಧದ ಗೆಲುವನ್ನು ಅದ್ಧೂರಿಯಾಗಿ ಆಚರಿಸಬೇಡಿ ಎಂದು ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ತಂಡಕ್ಕೆ ಸಂದೇಶ ನೀಡಿದ್ದರು. ಅಲ್ಲದೆ ದೀಪಾವಳಿ ಪ್ರಯುಕ್ತ ಆಯೋಜನೆಗೊಂಡಿದ್ದ ಡಿನ್ನರ್ ಪಾರ್ಟಿಯಲ್ಲೂ ಭಾಗಿಯಾಗದಂತೆ ಆಟಗಾರರಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಆಟಗಾರರೊಂದಿಗೆ ಮಾತನಾಡಿರುವ ನಾಯಕ ರೋಹಿತ್ ಹಾಗೂ ಮಾಜಿ ನಾಯಕ ಕೊಹ್ಲಿ, ಭಾವನೆಗಳಿಗೆ ಮಾರುಹೋಗಬೇಡಿ, ದೊಡ್ಡ ಗುರಿಯತ್ತ ಗಮನ ಹರಿಸಿ ಎಂಬ ಸಂದೇಶವನ್ನು ನೀಡಿದ್ದರು ಎಂದು ವರದಿಯಾಗಿದೆ.

ಸ್ಪರ್ಧೆ ಇನ್ನೂ ಮುಗಿದಿಲ್ಲ

ಅಲ್ಲದೆ ಮುಂದಿನ ಪಂದ್ಯದ ಬಗ್ಗೆ ಯೋಚಿಸಿ. ದೀರ್ಘಕಾಲೀನ ಗುರಿಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಿ. ಪಾಕ್ ವಿರುದ್ಧದ ಗೆಲುವಿನಿಂದ ನಮಗೆ ಉತ್ತಮ ಆರಂಭ ಸಿಕ್ಕಿದೆ. ಹೀಗಾಗಿ ನಮ್ಮ ಆಟ ಸ್ಥಿರವಾಗಿರಬೇಕು ಮತ್ತು ಉತ್ತಮ ಪ್ರದರ್ಶನ ನೀಡಬೇಕು. ಸ್ಪರ್ಧೆ ಇನ್ನೂ ಮುಗಿದಿಲ್ಲ. ಆದ್ದರಿಂದ ಗೆಲುವಿನ ಅಲೆಯಲ್ಲಿ ತೇಲುವ ಬದಲು ನೆಲದ ಮೇಲೆ ಇರಿ ಎಂದು ಪಂದ್ಯದ ನಂತರದ ಸಭೆಯಲ್ಲಿ ಆಟಗಾರರಿಗೆ ತಿಳಿಸಲಾಗಿದೆ ಎಂದು ಟೀಂ ಇಂಡಿಯಾ ಸಿಬ್ಬಂದಿಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ‘ನನ್ನನ್ನು ಕಾಪಾಡಿದಕ್ಕೆ ಥ್ಯಾಂಕ್ಸ್ ಬ್ರೋ, ಇಲ್ಲದಿದ್ದರೆ ಫ್ಯಾನ್ಸ್ ನನ್ನ ಉಳಿಸುತ್ತಿರಲಿಲ್ಲ’; ಡಿಕೆ ವಿಡಿಯೋ ಸಖತ್ ವೈರಲ್

ಗ್ರ್ಯಾಂಡ್ ಪಾರ್ಟಿಯನ್ನು ರದ್ದುಗೊಳಿಸಿದೆ

ಪಾಕ್ ವಿರುದ್ಧ ಜಯಸಿ, ಸಿಡ್ನಿಗೆ ಕಾಲಿಟ್ಟ ಟೀಂ ಇಂಡಿಯಾದ ಜೊತೆ ದೀಪಾವಳಿ ಆಚರಿಸಲು ಸಿಡ್ನಿ ನಗರ ಕೂಡ ಸಜ್ಜಾಗಿತ್ತು. ಆದರೆ ತಂಡದ ಹಿರಿಯ ಆಟಗಾರರು ಮತ್ತು ತರಬೇತುದಾರರಿಂದ ಸಂದೇಶಗಳನ್ನು ಸ್ವೀಕರಿಸಿದ ನಂತರ ಟೀಂ ಇಂಡಿಯಾ ದೀಪಾವಳಿಯ ಗ್ರ್ಯಾಂಡ್ ಪಾರ್ಟಿಯನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ.

ಅಲ್ಲದೆ ಪಾಕಿಸ್ತಾನ ವಿರುದ್ಧ ರೋಚಕ ಜಯ ಗಳಿಸಿದ ರೋಹಿತ್ ಪಡೆಗೆ ವಿಶ್ವದೆಲ್ಲೆಡೆಯಿಂದ ಶುಭ ಹಾರೈಕೆಗಳ ಮಹಾಪೂರವೇ ಹರಿದುಬಂದಿದೆ. ಆದರೆ ಮೆಲ್ಬೋರ್ನ್‌ನಲ್ಲಿ ಪಾಕ್ ತಂಡವನ್ನು ಮಣಿಸಿದ ನಂತರ ಟೀಂ ಇಂಡಿಯಾ ಆಟಗಾರರು ಯಾವುದೇ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿಲ್ಲ. ಅಲ್ಲದೆ ಆಟಗಾರರು ಕೂಡ ತಕ್ಷಣವೇ ತಮ್ಮ ಹೋಟೆಲ್ ಕೊಠಡಿಗಳಿಗೆ ಮರಳಿದ್ದು, ಮಾಧ್ಯಮ ಬದ್ಧತೆಯಿಂದಾಗಿ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಕೊನೆಯದಾಗಿ ತಮ್ಮ ಕೋಣೆಗಳಿಗೆ ತೆರಳಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ