AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20I World Record: ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನಕ್ಕೆ ಸೆಡ್ಡು ಹೊಡೆಯಲಿದೆ ಭಾರತ; ಹೊಸ ದಾಖಲೆಯತ್ತ ರೋಹಿತ್ ಸೇನೆ!

T20I World Record: ವಿಶ್ವಕಪ್‌ಗೂ ಮುನ್ನ ಜಿಂಬಾಬ್ವೆಯಲ್ಲಿ ಜಿಂಬಾಬ್ವೆ ವಿರುದ್ಧ ಸರಣಿ ಆಡಲು ಬಿಸಿಸಿಐ ಮುಂದಾಗಿದೆ. ಹಿರಿಯ ಆಟಗಾರರು ಆ ಸರಣಿಯಲ್ಲಿ ಪಾಲ್ಗೊಳ್ಳದಿರುವ ಸಾಧ್ಯತೆ ಇದೆ. ಈ ಸರಣಿ ನಡೆದರೆ 2022ರಲ್ಲಿ ಭಾರತದ ಟಿ20 ಪಂದ್ಯಗಳ ಸಂಖ್ಯೆ ಹೆಚ್ಚಾಗಲಿದೆ.

T20I World Record: ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನಕ್ಕೆ ಸೆಡ್ಡು ಹೊಡೆಯಲಿದೆ ಭಾರತ; ಹೊಸ ದಾಖಲೆಯತ್ತ ರೋಹಿತ್ ಸೇನೆ!
IND Vs PAK
TV9 Web
| Updated By: ಪೃಥ್ವಿಶಂಕರ|

Updated on: Jun 25, 2022 | 7:00 AM

Share

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟಿ20 (T20 in international cricket) ಪ್ರಭಾವ ನಿರಂತರವಾಗಿ ಬೆಳೆಯುತ್ತಿದೆ. ಒಂದೆಡೆ ಐಪಿಎಲ್‌ (IPL)ನಲ್ಲಿ ತಂಡಗಳು ಮತ್ತು ಪಂದ್ಯಗಳ ಸಂಖ್ಯೆ ಹೆಚ್ಚಾಗುತ್ತಿದ್ದರೆ, ಇನ್ನೊಂದೆಡೆ ಭಾರತ ತಂಡವು ಈ ಮಾದರಿಯಲ್ಲಿ ಹಿಂದೆಂದಿಗಿಂತಲೂ ಹೆಚ್ಚು ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಲು ಪ್ರಾರಂಭಿಸಿದೆ. 2022ರಲ್ಲಿ ಭಾರತವು ಒಂದೇ ವರ್ಷದಲ್ಲಿ ಅತಿ ಹೆಚ್ಚು ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿ ವಿಶ್ವ ದಾಖಲೆ ನಿರ್ಮಿಸಲಿದೆ. ಸದ್ಯ ಈ ದಾಖಲೆ ಪಾಕಿಸ್ತಾನದ ಹೆಸರಿನಲ್ಲಿದೆ. ಈ ವರ್ಷಾಂತ್ಯಕ್ಕೆ ಟೀಂ ಇಂಡಿಯಾ ಈ ದಾಖಲೆಯನ್ನು ಮುರಿಯಲಿದೆ. 2022ರಲ್ಲಿ ಟೀಂ ಇಂಡಿಯಾ ಇದುವರೆಗೆ 11 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದೆ. ಭಾರತ ಕನಿಷ್ಠ 23 ಪಂದ್ಯಗಳನ್ನು ಆಡಬೇಕಿದೆ. ಅಂದರೆ ಈ ವರ್ಷಾಂತ್ಯದ ವೇಳೆಗೆ ಭಾರತ ತಂಡ 34 ಪಂದ್ಯಗಳನ್ನು ಆಡಲಿದ್ದು, ಪಾಕಿಸ್ತಾನದ ದಾಖಲೆಯನ್ನು ಮುರಿಯಲಿದೆ. ಕಳೆದ ವರ್ಷ 29 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಪಾಕಿಸ್ತಾನ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ದಾಖಲೆಯನ್ನು ಹೊಂದಿದೆ.

ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳು..

ಭಾರತ ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳನ್ನು ಆಡಿದೆ. ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ತಲಾ 2 ಪಂದ್ಯಗಳನ್ನು ಆಡಲಿದೆ. ಟೀಂ ಇಂಡಿಯಾ ಜೂನ್ 26 ಮತ್ತು 28 ರಂದು ಐರ್ಲೆಂಡ್ ವಿರುದ್ಧ ಎರಡು ಪಂದ್ಯಗಳ ಸರಣಿಯನ್ನು ಸಹ ಆಡಲಿದೆ. ಇದರ ನಂತರ ಜುಲೈನಲ್ಲಿ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಜುಲೈ ಅಂತ್ಯದಿಂದ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭಾರತ 5 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಲಿದೆ.

ಇದನ್ನೂ ಓದಿ
Image
ENG vs NZ: ಆಂಗ್ಲರ ಎದುರು ಹ್ಯಾಟ್ರಿಕ್ ಶತಕ ಬಾರಿಸಿದ ಡ್ಯಾರಿಲ್ ಮಿಚೆಲ್; 73 ವರ್ಷಗಳ ಹಳೆಯ ದಾಖಲೆ ಪುಡಿ ಪುಡಿ!
Image
Lionel Messi: ಐಷರಾಮಿ ಬಂಗಲೆ, ಖಾಸಗಿ ಜೆಟ್, ದುಬಾರಿ ಕಾರುಗಳ ಭರಾಟೆ, ಲಿಯೋನೆಲ್ ಮೆಸ್ಸಿ ವೈಭವದ ಬದುಕು ಹೇಗಿದೆ ಗೊತ್ತಾ?
Image
ಐಪಿಎಲ್​ನಲ್ಲಿ ಕಳ್ಳಾಟ, ಕ್ರಿಕೆಟ್​ನಿಂದ ನಿಷೇಧ; ಜೀವನ ನಿರ್ವಹಣೆಗಾಗಿ ಶೂ, ಬಟ್ಟೆ ಮಾರುತ್ತಿರುವ ಪಾಕ್ ಮೂಲದ ಅಂಪೈರ್

ಏಷ್ಯಾಕಪ್‌ನಲ್ಲಿ ಕನಿಷ್ಠ 5 ಪಂದ್ಯಗಳು.

ಶ್ರೀಲಂಕಾ ಏಷ್ಯಾಕಪ್ ಅನ್ನು ಆಗಸ್ಟ್-ಸೆಪ್ಟೆಂಬರ್ನಲ್ಲಿ ಆಯೋಜಿಸಲಿದೆ. 2018 ರ ಏಷ್ಯಾ ಕಪ್ ODI ಮಾದರಿಯಲ್ಲಿ ನಡೆಯಲಿದೆ. ಆದರೆ, ಈ ಬಾರಿ ಟಿ20 ಮಾದರಿಯಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ತಂಡ ಕನಿಷ್ಠ 5 ಪಂದ್ಯಗಳನ್ನು ಆಡಲಿದೆ. ತಂಡವು ಫೈನಲ್ ತಲುಪಿದರೆ ಪಂದ್ಯಗಳ ಸಂಖ್ಯೆ 6 ಆಗಲಿದೆ. ಆಸ್ಟ್ರೇಲಿಯಾ ತಂಡವು ಮೂರು ಪಂದ್ಯಗಳ T20I ಸರಣಿಯನ್ನು ಆಡಲು ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಭೇಟಿ ನೀಡಲಿದೆ. ನಂತರ ಉಭಯ ತಂಡಗಳು ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾಕ್ಕೆ ತೆರಳಲಿವೆ. ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ನಾಕೌಟ್ ಹಂತ ತಲುಪದಿದ್ದರೆ ಕನಿಷ್ಠ 5 ಪಂದ್ಯಗಳನ್ನಾದರೂ ಆಡಬೇಕಾಗುತ್ತದೆ.

ಸೆಮಿಫೈನಲ್ ತಲುಪಿದ ನಂತರ, ಪಂದ್ಯಗಳ ಸಂಖ್ಯೆ 6 ಕ್ಕೆ ಏರುತ್ತದೆ, ಮತ್ತು ಫೈನಲ್ ತಲುಪಿದಾಗ, ಪಂದ್ಯಗಳ ಸಂಖ್ಯೆ 7 ಕ್ಕೆ ಏರುತ್ತದೆ. ಹೀಗಾಗಿ, ವಿಶ್ವಕಪ್ ವರೆಗಿನ ಎಲ್ಲಾ ಪಂದ್ಯಗಳನ್ನು ಸೇರಿಸಿದರೆ, ಭಾರತವು 2022 ರಲ್ಲಿ ಕನಿಷ್ಠ 34 ಪಂದ್ಯಗಳನ್ನು ಆಡಬೇಕಾಗುತ್ತದೆ. ಏಷ್ಯಾ ಕಪ್ ಮತ್ತು ವಿಶ್ವಕಪ್ ಎರಡರಲ್ಲೂ ತಂಡವು ಫೈನಲ್ ತಲುಪಿದರೆ, ಆಗ ಪಂದ್ಯಗಳ ಸಂಖ್ಯೆ 37 ಆಗಿರುತ್ತದೆ.

ಆದರೆ, ವಿಶ್ವಕಪ್‌ಗೂ ಮುನ್ನ ಜಿಂಬಾಬ್ವೆಯಲ್ಲಿ ಜಿಂಬಾಬ್ವೆ ವಿರುದ್ಧ ಸರಣಿ ಆಡಲು ಬಿಸಿಸಿಐ ಮುಂದಾಗಿದೆ. ಹಿರಿಯ ಆಟಗಾರರು ಆ ಸರಣಿಯಲ್ಲಿ ಪಾಲ್ಗೊಳ್ಳದಿರುವ ಸಾಧ್ಯತೆ ಇದೆ. ಈ ಸರಣಿ ನಡೆದರೆ 2022ರಲ್ಲಿ ಭಾರತದ ಟಿ20 ಪಂದ್ಯಗಳ ಸಂಖ್ಯೆ ಹೆಚ್ಚಾಗಲಿದೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!