AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ವಿಚಾರದಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ; ಅಫ್ಘಾನ್ ಕ್ರಿಕೆಟ್​ಗೆ ತಾಲಿಬಾನಿಗಳಿಂದ ಸಿಗ್ತು ಬೇಷರತ್ ಬೆಂಬಲ

ದೇಶದ ಕ್ರಿಕೆಟ್ ತಂಡ ಮತ್ತು ಆಟಗಾರರ ಸಮಸ್ಯೆಗಳ ಕುರಿತು ತಾಲಿಬಾನ್ ತಕ್ಷಣ ಕ್ರಮ ಕೈಗೊಳ್ಳಲಿದೆ ಎಂದು ಹಕ್ಕಾನಿ ಹೇಳಿದ್ದಾರೆ.

ಕ್ರಿಕೆಟ್ ವಿಚಾರದಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ; ಅಫ್ಘಾನ್ ಕ್ರಿಕೆಟ್​ಗೆ ತಾಲಿಬಾನಿಗಳಿಂದ ಸಿಗ್ತು ಬೇಷರತ್ ಬೆಂಬಲ
ತಾಲಿಬಾನ್, ಅಫ್ಘಾನಿಸ್ತಾನ ಕ್ರಿಕೆಟ್ ತಂಡ
TV9 Web
| Edited By: |

Updated on:Aug 22, 2021 | 5:32 PM

Share

ಅಫ್ಘಾನಿಸ್ತಾನದಲ್ಲಿ ಕ್ರಿಕೆಟ್ ಬಗ್ಗೆ ಊಹಾಪೋಹಗಳು ಮತ್ತು ಆತಂಕಗಳು ಮುಂದುವರಿದಿದೆ. ದೇಶದಲ್ಲಿ ತಾಲಿಬಾನ್ ಆಕ್ರಮಣದಿಂದ ಜನರ ಜೀವನ ಬದಲಾಗಿದೆ ಮತ್ತು ಕ್ರಿಕೆಟಿಗರ ಪರಿಸ್ಥಿತಿ ಸದ್ಯಕ್ಕೆ ಭಿನ್ನವಾಗಿಲ್ಲ. ಪಾಕಿಸ್ತಾನದೊಂದಿಗಿನ ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಏಕದಿನ ಸರಣಿಯ ಬಗ್ಗೆಯೂ ಪರಿಸ್ಥಿತಿ ಸ್ಪಷ್ಟವಾಗಿಲ್ಲ. ಆದರೆ ಈಗ ಕ್ರಿಕೆಟ್​ನಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡಬೇಡಿ ಎಂದು ತಾಲಿಬಾನ್ ನಿಂದ ಹೇಳಿಕೆ ಬಂದಿದೆ. ಹಿರಿಯ ತಾಲಿಬಾನ್ ಅಧಿಕಾರಿಯೊಬ್ಬರು ಅಫ್ಘಾನಿಸ್ತಾನ ಕ್ರಿಕೆಟಿಗರಿಗೆ ಭರವಸೆ ನೀಡಿದ್ದಾರೆ. ಜೊತೆಗೆ ದೇಶದಲ್ಲಿ ಕ್ರಿಕೆಟ್ ಅನ್ನು ಸಂಪೂರ್ಣವಾಗಿ ಬೆಂಬಲಿಸುವುದನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.

ಅಫಘಾನ್ ಸುದ್ದಿ ವೆಬ್‌ಸೈಟ್ ಅರಿಯಾನಾ ನ್ಯೂಸ್‌ನ ವರದಿಯ ಪ್ರಕಾರ, ತಾಲಿಬಾನ್‌ನ ರಾಜಕೀಯ ಶಿಬಿರಕ್ಕೆ ಸಂಬಂಧಿಸಿದ ನಾಯಕ ಅನಸ್ ಹಕ್ಕಾನಿ ಇತ್ತೀಚೆಗೆ ಅಫ್ಘಾನಿಸ್ತಾನ ತಂಡದ ನಾಯಕ ಹಷ್ಮತುಲ್ಲಾ ಶಾಹಿದಿ ಮತ್ತು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ ಮಾಜಿ ಅಧಿಕಾರಿಗಳಾದ ಅಸದುಲ್ಲಾ ಮತ್ತು ನೂರ್ ಅಲಿ ಜದ್ರನ್‌ರನ್ನು ಭೇಟಿಯಾದರು. ಈ ಸಮಯದಲ್ಲಿ, ಹಕ್ಕಾನಿ 1996 ರಿಂದ 2001 ರ ಅವಧಿಯಲ್ಲಿ ತನ್ನ ಆಡಳಿತಾವಧಿಯಲ್ಲಿ ದೇಶದಲ್ಲಿ ಕ್ರಿಕೆಟ್ ಆರಂಭವಾಯಿತು ಮತ್ತು ಭವಿಷ್ಯದಲ್ಲಿಯೂ ದೇಶದಲ್ಲಿ ಆಟಕ್ಕೆ ತನ್ನ ಬೆಂಬಲವನ್ನು ಮುಂದುವರಿಸುವುದಾಗಿ ಹೇಳಿದರು.

ಆಟಗಾರರ ಸಮಸ್ಯೆಗಳನ್ನು ಪರಿಹರಿಸುವ ವಿಶ್ವಾಸ ದೇಶದ ಕ್ರಿಕೆಟ್ ತಂಡ ಮತ್ತು ಆಟಗಾರರ ಸಮಸ್ಯೆಗಳ ಕುರಿತು ತಾಲಿಬಾನ್ ತಕ್ಷಣ ಕ್ರಮ ಕೈಗೊಳ್ಳಲಿದೆ ಎಂದು ಹಕ್ಕಾನಿ ಹೇಳಿದ್ದಾರೆ. ಈ ಸಮಯದಲ್ಲಿ ಹಕ್ಕಾನಿ, ಆಟಗಾರರಿಗೆ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ತಾಲಿಬಾನ್ ದೇಶದಲ್ಲಿ ಕ್ರಿಕೆಟ್ ಅನ್ನು ಬೆಂಬಲಿಸುವುದನ್ನು ಮುಂದುವರಿಸುವ ಭರವಸೆಯನ್ನು ವ್ಯಕ್ತಪಡಿಸಿದರು. ಕಳೆದ ವಾರ ಕಾಬೂಲ್‌ನಲ್ಲಿರುವ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ ಕಚೇರಿಗೆ ತಾಲಿಬಾನ್ ಹೋರಾಟಗಾರರು ಪ್ರವೇಶಿಸಿದ ಸುದ್ದಿ ಮತ್ತು ಚಿತ್ರಗಳು ಹೊರಬಂದಿದ್ದವು, ಅದರಲ್ಲಿ ಕೆಲವು ಕ್ರಿಕೆಟಿಗರು ಸಹ ಅವರೊಂದಿಗೆ ಕಾಣಿಸಿಕೊಂಡಿದ್ದರು.

ಪಾಕಿಸ್ತಾನದೊಂದಿಗಿನ ಸರಣಿ ಅಸ್ಪಷ್ಟವಾಗಿದೆ ಅಫ್ಘಾನಿಸ್ತಾನ ಮುಂದಿನ ತಿಂಗಳ ಆರಂಭದಲ್ಲಿ ಪಾಕಿಸ್ತಾನದ ವಿರುದ್ಧ ಏಕದಿನ ಸರಣಿಯನ್ನು ಆಡಬೇಕಿದೆ. ಇದನ್ನು ಅಫ್ಘಾನಿಸ್ತಾನವು ಆಯೋಜಿಸಬೇಕಿತ್ತು, ಆದರೆ ಕಳೆದ ಒಂದು ತಿಂಗಳಲ್ಲಿ ದೇಶದ ಪರಿಸ್ಥಿತಿಯಲ್ಲಿನ ತ್ವರಿತ ಬದಲಾವಣೆಯಿಂದಾಗಿ, ಈ ಸರಣಿಯನ್ನು ಆಯೋಜಿಸಲು ಶ್ರೀಲಂಕಾವನ್ನು ಆಯ್ಕೆ ಮಾಡಲಾಯಿತು. ಆದಾಗ್ಯೂ, ತಾಲಿಬಾನ್ ಕಾಬೂಲ್ ಅನ್ನು ವಶಪಡಿಸಿಕೊಂಡ ನಂತರ, ಅಲ್ಲಿಂದ ವಿಮಾನ ಹಾರಾಟವನ್ನು ನಿಷೇಧಿಸಲಾಗಿದೆ. ಈ ಕಾರಣದಿಂದಾಗಿ ಅಫ್ಘಾನ್ ತಂಡವು ಶ್ರೀಲಂಕಾಗೆ ಆಗಮಿಸುವ ಬಗ್ಗೆ ಗೊಂದಲದ ಪರಿಸ್ಥಿತಿ ಉಂಟಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸರಣಿಗೆ ತಂಡದ ಆಯ್ಕೆಯನ್ನು ಮುಂದೂಡಿದೆ.

Published On - 5:17 pm, Sun, 22 August 21

ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್