AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್​ನಲ್ಲಿ ಕಳ್ಳರ ಕಾಟ: ರೂಮ್​​ನಲ್ಲೇ ಟೀಂ ಇಂಡಿಯಾ ಆಟಗಾರ್ತಿಯ ಹಣ-ಒಡವೆ ಕದ್ದ ಖದೀಮರು

ನಮ್ಮ ತಂಡ ತಂಗಿದ್ದ ಲಂಡನ್‌ನ ಮ್ಯಾರಿಯಟ್ ಹೋಟೆಲ್‌ನಲ್ಲಿ ಕಳ್ಳತನ ನಡೆದಿದ್ದು ಇದು ನಮಗೆ ಆಘಾತವನ್ನುಂಟು ಮಾಡಿದೆ. ಯಾರೋ ನನ್ನ ಖಾಸಗಿ ಕೋಣೆಗೆ ನುಗ್ಗಿ ನನ್ನ ಬ್ಯಾಗ್, ನಗದು, ಕಾರ್ಡ್‌, ವಾಚ್‌ಗಳು ಮತ್ತು ಆಭರಣಗಳನ್ನು ಕದ್ದೊಯ್ದಿದ್ದಾರೆ ಎಂದು ಭಾಟಿಯಾ ಟ್ವೀಟ್ ಮಾಡಿದ್ದಾರೆ.

ಇಂಗ್ಲೆಂಡ್​ನಲ್ಲಿ ಕಳ್ಳರ ಕಾಟ: ರೂಮ್​​ನಲ್ಲೇ ಟೀಂ ಇಂಡಿಯಾ ಆಟಗಾರ್ತಿಯ ಹಣ-ಒಡವೆ ಕದ್ದ ಖದೀಮರು
ಭಾರತ ಮಹಿಳಾ ಕ್ರಿಕೆಟ್ ತಂಡ
TV9 Web
| Updated By: ಪೃಥ್ವಿಶಂಕರ|

Updated on: Sep 26, 2022 | 7:09 PM

Share

ಇಂಗ್ಲೆಂಡ್‌ನಲ್ಲಿ ಐತಿಹಾಸಿಕ ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ ಆಟಗಾರ್ತಿಯರಿಗೆ (India women’s team) ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ ಎಂಬ ಮಾಹಿತಿ ಈಗಷ್ಟೇ ಹೊರಬಿದ್ದಿದೆ. ವಾಸ್ತವವಾಗಿ, ಭಾರತೀಯ ಮಹಿಳಾ ಕ್ರಿಕೆಟ್ ತಂಡ ತಂಗಿದ್ದ ಹೋಟೆಲ್​ನ ರೂಂನಲ್ಲಿ ಕಳ್ಳತನ ನಡೆದಿದೆ. ತಮ್ಮ ಹೋಟೆಲ್ ಕೋಣೆಯಲ್ಲಿ ಕಳ್ಳತನವಾಗಿದೆ ಎಂದು ಟೀಂ ಇಂಡಿಯಾ ಮಹಿಳಾ ಆಟಗಾರ್ತಿ ತಾನಿಯಾ ಭಾಟಿಯಾ (Taniya Bhatia) ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಭಾಟಿಯಾ ಟ್ವೀಟ್ ಮಾಡಿದ್ದು, ಕಳ್ಳರು ತಮ್ಮ ಕೊಠಡಿಯಿಂದ ನಗದು, ಕಾರ್ಡ್‌, ಆಭರಣ ಮತ್ತು ವಾಚ್‌ಗಳನ್ನು ಕದ್ದು ಪರಾರಿಯಾಗಿದ್ದಾರೆ ಎಂದು ಬರದುಕೊಂಡಿದ್ದಾರೆ. ಅಲ್ಲದೆ ತಾನಿಯಾ ಭಾಟಿಯಾ ಅವರು ಟ್ವೀಟ್ ಮಾಡುವ ಮೂಲಕ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗೆ ನೇರವಾಗಿ ಪ್ರಶ್ನೆಗಳನ್ನು ಮಾಡಿದ್ದಾರೆ. ಏಕದಿನ ಹಾಗೂ ಟಿ20 ಸರಣಿಗಾಗಿ ಇಂಗ್ಲೆಂಡ್ ಪ್ರವಾಸ ಮಾಡಿದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಲಂಡನ್‌ನ ಮ್ಯಾರಿಯಟ್ ಹೋಟೆಲ್‌ನಲ್ಲಿ ವಾಸ್ಥವ್ಯ ಹೂಡಿತ್ತು.

ಕೊಠಡಿಯಲ್ಲಿ ಕಳ್ಳತನವಾದ ನಂತರ ತಾನಿಯಾ ಭಾಟಿಯಾ ಟ್ವೀಟ್ ಮಾಡಿ, ನಮ್ಮ ತಂಡ ತಂಗಿದ್ದ ಲಂಡನ್‌ನ ಮ್ಯಾರಿಯಟ್ ಹೋಟೆಲ್‌ನಲ್ಲಿ ಕಳ್ಳತನ ನಡೆದಿದ್ದು ಇದು ನಮಗೆ ಆಘಾತವನ್ನುಂಟು ಮಾಡಿದೆ. ಯಾರೋ ನನ್ನ ಖಾಸಗಿ ಕೋಣೆಗೆ ನುಗ್ಗಿ ನನ್ನ ಬ್ಯಾಗ್, ನಗದು, ಕಾರ್ಡ್‌, ವಾಚ್‌ಗಳು ಮತ್ತು ಆಭರಣಗಳನ್ನು ಕದ್ದೊಯ್ದಿದ್ದಾರೆ. ಮ್ಯಾರಿಯಟ್ ಹೋಟೆಲ್ ಅಸುರಕ್ಷಿತವಾಗಿದೆ. ಈ ಮಾಹಿತಿ ತಿಳಿದ ತಕ್ಷಣ ಇಸಿಬಿ ಈ ಬಗ್ಗೆ ಶೀಘ್ರವಾಗಿ ತನಿಖೆ ನಡೆಸಿ, ನಾನು ಕಳೆದುಕೊಂಡ ವಸ್ತುಗಳನ್ನು ಪುನಃ ನನಗೆ ಸಿಗುವಂತೆ ಮಾಡುತ್ತದೆ ಎಂದು ನಾನು ಆಶಿಸುತ್ತೇನೆ. ಇಸಿಬಿ ಕ್ರಿಕೆಟ್ ಮಂಡಳಿ ಆಯ್ಕೆ ಮಾಡಿರುವ ಹೋಟೆಲ್‌ನಲ್ಲಿ ಇಂತಹ ಕಳಪೆ ಭದ್ರತೆ ಇದೆ ಎಂದರೆ ನಂಬಲಾಸಾಧ್ಯವಾಗಿದೆ. ಹೀಗಾಗಿ ಇಸಿಬಿ ಈ ವಿಷಯದ ಬಗ್ಗೆ ಗಮನ ಹರಿಸುತ್ತಾರೆ ಎಂದು ಭಾವಿಸುತ್ತೇವೆ ಎಂದು ಭಾಟಿಯಾ ಬರೆದುಕೊಂಡಿದ್ದಾರೆ.

ಇತ್ತೀಚೆಗಷ್ಟೇ ಇಂಗ್ಲೆಂಡ್ ತಂಡವನ್ನು ಟೀಮ್ ಇಂಡಿಯಾ 3-0 ಅಂತರದಿಂದ ಅವರದ್ದೇ ನೆಲದಲ್ಲಿ ಮಣಿಸಿತ್ತು. ತಾನಿಯಾ ಭಾಟಿಯಾಗೆ ODI ಸರಣಿಯಲ್ಲಿ ಆಡಲು ಅವಕಾಶ ಸಿಗಲಿಲ್ಲ ಆದರೆ ಅವರು ತಂಡದ ಭಾಗವಾಗಿದ್ದರು. ಹೀಗಾಗಿ ಅವರು ತಂಗಿದ್ದ ಕೋಣೆಯಲ್ಲಿ ಕಳ್ಳತನ ನಡೆದಿರುವುದು ಎಲ್ಲರೂ ಆಘಾತಕ್ಕೊಳಗಾಗುವಂತೆ ಮಾಡಿದೆ. ಜೊತೆಗೆ ಈ ಘಟನೆಯಿಂದ ECB ಯ ಖ್ಯಾತಿಗೂ ಧಕ್ಕೆಯಾಗಿದೆ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ