AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Schedule: ಐಪಿಎಲ್ ವೇಳಾಪಟ್ಟಿ ಪ್ರಕಟ; ಮೊದಲ ಪಂದ್ಯದಲ್ಲಿ ಸಿಎಸ್​ಕೆ- ಆರ್​ಸಿಬಿ ಮುಖಾಮುಖಿ

IPL 2024 Schedule: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ 17 ದಿನಗಳ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ. ಈ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು 2 ಹಂತಗಳಲ್ಲಿ ವೇಳಾಪಟ್ಟಿ ಬಿಡುಗಡೆಯಾಗಲಿದ್ದು, ಮೊದಲ ಹಂತವನ್ನು ಈಗ ಪ್ರಕಟಿಸಲಾಗಿದೆ.

IPL 2024 Schedule: ಐಪಿಎಲ್ ವೇಳಾಪಟ್ಟಿ ಪ್ರಕಟ; ಮೊದಲ ಪಂದ್ಯದಲ್ಲಿ ಸಿಎಸ್​ಕೆ- ಆರ್​ಸಿಬಿ ಮುಖಾಮುಖಿ
ಐಪಿಎಲ್ 2024
ಪೃಥ್ವಿಶಂಕರ
|

Updated on:Feb 22, 2024 | 6:26 PM

Share

ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ (IPL 2024) 17 ನೇ ಆವೃತ್ತಿ ಯಾವಾಗ ಪ್ರಾರಂಭವಾಗಲಿದೆ ಎಂಬುದರ ಕುರಿತು ಬಿಗ್ ಅಪ್ಡೇಟ್ ಹೊರಬಿದ್ದಿದೆ. ಅದರಂತೆ ಬಹು ನಿರೀಕ್ಷಿತ ಈ ಚುಟುಕು ಸಮರದ ಮೊದಲ 17 ದಿನಗಳ ಅಂದರೆ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ ಈ ಟೂರ್ನಿ ಮುಂದಿನ ತಿಂಗಳು ಅಂದರೆ ಮಾರ್ಚ್ 22 ರಿಂದ ಪ್ರಾರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು (CSK vs RCB) ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯಕ್ಕೆ ಸಿಎಸ್​ಕೆಯ ತವರು ನೆಲ ತಮಿಳುನಾಡಿನ ಎಂ ಚಿದಂಬರಂ ಸ್ಟೇಡಿಯಂ ಆತಿಥ್ಯವಹಿಸಲಿದೆ.​

2 ಹಂತದಲ್ಲಿ ಐಪಿಎಲ್

ಈ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು 2 ಹಂತಗಳಲ್ಲಿ ವೇಳಾಪಟ್ಟಿ ಬಿಡುಗಡೆಯಾಗಲಿದ್ದು, ಮೊದಲ ಹಂತವನ್ನು ಈಗ ಪ್ರಕಟಿಸಲಾಗಿದೆ. ಅದರಂತೆ ಮಾರ್ಚ್​ 22 ರಿಂದ ಆರಂಭವಾಗಲಿರುವ ಐಪಿಎಲ್​ನ ಮೊದಲ ಹಂತ ಏಪ್ರಿಲ್ 7 ರ ವರೆಗೆ ನಡೆಯಲ್ಲಿದೆ. ಅಂದರೆ ಮೊದಲ ಹಂತದ ಐಪಿಎಲ್ 17 ದಿನಗಳವರೆಗೆ ನಡೆಯಲ್ಲಿದೆ. ಈ ಅವದಿಯಲ್ಲಿ 21 ಪಂದ್ಯಗಳು ನಡೆಯಲ್ಲಿವೆ. ಐಪಿಎಲ್​ನ ದ್ವಿತೀಯಾರ್ಧದ ವೇಳಾಪಟ್ಟಿಯನ್ನು ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾದ ನಂತರವಷ್ಟೇ ನಿರ್ಧಾರವಾಗಲಿದೆ ಎಂದು ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಈ ಹಿಂದೆಯೇ ತಿಳಿಸಿದ್ದರು. ಅದರಂತೆ ಐಪಿಎಲ್​ನ ಉಳಿದಾರ್ಧದ ವೇಳಾಪಟ್ಟಿ ಲೋಕಸಬೆ ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ಹೊರಬರಲಿದೆ.

ವೇಳಾಪಟ್ಟಿ ಹೀಗಿದೆ

ಪಂದ್ಯ ಸಂಖ್ಯೆ ದಿನಾಂಕ ಮುಖಾಮುಖಿ ಸಮಯ ಸ್ಥಳ
1 ಮಾರ್ಚ್​ 22 ಸಿಎಸ್​ಕೆ vs ಆರ್​ಸಿಬಿ ಸಂಜೆ 7:30 ಚೆನ್ನೈ
2 ಮಾರ್ಚ್​ 23 ಪಂಜಾಬ್ vs ಡೆಲ್ಲಿ ಮಧ್ಯಾಹ್ನ 3:30 ಮೊಹಾಲಿ
3 ಮಾರ್ಚ್​ 23 ಕೋಲ್ಕತ್ತಾ vs ಹೈದರಾಬಾದ್ ಸಂಜೆ 7:30 ಕೋಲ್ಕತ್ತಾ
4 ಮಾರ್ಚ್​ 24 ರಾಜಸ್ಥಾನ್ vs ಲಕ್ನೋ ಮಧ್ಯಾಹ್ನ 3:30 ಜೈಪುರ
5 ಮಾರ್ಚ್​ 24 ಗುಜರಾತ್ vs ಮುಂಬೈ ಸಂಜೆ 7:30 ಅಹಮದಾಬಾದ್
6 ಮಾರ್ಚ್​ 25 ಆರ್​ಸಿಬಿ vs ಪಂಜಾಬ್ ಸಂಜೆ 7:30 ಬೆಂಗಳೂರು
7 ಮಾರ್ಚ್​ 26 ಚೆನ್ನೈ vs ಗುಜರಾತ್ ಸಂಜೆ 7:30 ಚೆನ್ನೈ
8 ಮಾರ್ಚ್​ 27 ಹೈದರಾಬಾದ್ vs ಮುಂಬೈ ಸಂಜೆ 7:30 ಹೈದರಾಬಾದ್
9 ಮಾರ್ಚ್​ 28 ರಾಜಸ್ಥಾನ್ vs ಡೆಲ್ಲಿ ಸಂಜೆ 7:30 ಜೈಪುರ
10 ಮಾರ್ಚ್​ 29 ಆರ್​ಸಿಬಿ vs ಕೋಲ್ಕತ್ತಾ ಸಂಜೆ 7:30 ಬೆಂಗಳೂರು
11 ಮಾರ್ಚ್​ 30 ಲಕ್ನೋ vs ಪಂಜಾಬ್ ಸಂಜೆ 7:30 ಲಕ್ನೋ
12 ಮಾರ್ಚ್​ 31 ಗುಜರಾತ್ vs ಹೈದರಾಬಾದ್ ಮಧ್ಯಾಹ್ನ 3:30 ಅಹಮದಾಬಾದ್
13 ಮಾರ್ಚ್​ 31 ಡೆಲ್ಲಿ vs ಚೆನ್ನೈ ಸಂಜೆ 7:30 ವೈಜಾಗ್
14 ಏಪ್ರಿಲ್​ 1 ಮುಂಬೈ vs ರಾಜಸ್ಥಾನ್ ಸಂಜೆ 7:30 ಮುಂಬೈ
15 ಏಪ್ರಿಲ್​ 2 ಆರ್​ಸಿಬಿ vs ಲಕ್ನೋ ಸಂಜೆ 7:30 ಬೆಂಗಳೂರು
16 ಏಪ್ರಿಲ್​ 3 ಡೆಲ್ಲಿ vs ಕೆಕೆಆರ್ ಸಂಜೆ 7:30 ವೈಜಾಗ್
17 ಏಪ್ರಿಲ್​ 4 ಗುಜರಾತ್ vs ಪಂಜಾಬ್ ಸಂಜೆ 7:30 ಅಹಮದಾಬಾದ್
18 ಏಪ್ರಿಲ್​ 5 ಹೈದರಾಬಾದ್ vs ಚೆನ್ನೈ ಸಂಜೆ 7:30 ಹೈದರಾಬಾದ್
19 ಏಪ್ರಿಲ್​ 6 ರಾಜಸ್ಥಾನ್ vs ಆರ್​ಸಿಬಿ ಸಂಜೆ 7:30 ಜೈಪುರ
20 ಏಪ್ರಿಲ್​ 7 ಮುಂಬೈ vs ಡೆಲ್ಲಿ ಮಧ್ಯಾಹ್ನ 3:30 ಮುಂಬೈ
21 ಏಪ್ರಿಲ್​ 7 ಲಕ್ನೋ vs ಗುಜರಾತ್ ಸಂಜೆ 7:30 ಲಕ್ನೋ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Thu, 22 February 24

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್