AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಇತಿಹಾಸ ಸೃಷ್ಟಿಸಿದ ಹಾರ್ದಿಕ್ ಪಾಂಡ್ಯ; ಟಿ20 ಮಾದರಿಯಲ್ಲಿ ಈ ಸಾಧನೆ ಮಾಡಿದ ಏಕೈಕ ಭಾರತೀಯ

IND vs WI: ಹಾರ್ದಿಕ್ ತಮ್ಮ ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ 50 ವಿಕೆಟ್ ಪೂರೈಸಿ 806 ರನ್ ಗಳಿಸಿದ್ದಾರೆ. ಜೊತೆಗೆ ಟಿ20ಯಲ್ಲಿ ಭಾರತದ ಪರ 50 ವಿಕೆಟ್ ಹಾಗೂ 500ಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಭಾರತೀಯ ಹಾರ್ದಿಕ್.

IND vs WI: ಇತಿಹಾಸ ಸೃಷ್ಟಿಸಿದ ಹಾರ್ದಿಕ್ ಪಾಂಡ್ಯ; ಟಿ20 ಮಾದರಿಯಲ್ಲಿ ಈ ಸಾಧನೆ ಮಾಡಿದ ಏಕೈಕ ಭಾರತೀಯ
TV9 Web
| Edited By: |

Updated on:Aug 03, 2022 | 2:30 PM

Share

ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅದ್ಭುತ ದಾಖಲೆ ನಿರ್ಮಿಸಿದ್ದಾರೆ. ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಹಾರ್ದಿಕ್ 50 ವಿಕೆಟ್ ಪೂರೈಸಿದ ಸಾಧನೆ ಮಾಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ T20 ಯಲ್ಲಿ, ಹಾರ್ದಿಕ್ ಪಾಂಡ್ಯ ಅವರು ಬ್ರಾಂಡನ್ ಕಿಂಗ್ ಅವರನ್ನು ಔಟ್ ಮಾಡಿದ ತಕ್ಷಣ T20 ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 50-ವಿಕೆಟ್​ಗಳನ್ನು ಪೂರ್ಣಗೊಳಿಸಿದರು. ಈ ಮೂಲಕ ಹಾರ್ದಿಕ್ ಟಿ20ಯಲ್ಲಿ 50 ವಿಕೆಟ್ ಪೂರೈಸಿದ ಭಾರತದ ಆರನೇ ಬೌಲರ್ ಎನಿಸಿಕೊಂಡರು. ಹಾರ್ದಿಕ್‌ಗಿಂತ ಮೊದಲು, ಯುಜ್ವೇಂದ್ರ ಚಹಾಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ( Yuzvendra Chahal, Bhuvneshwar Kumar, Jasprit Bumrah and Ravindra Jadeja) ಭಾರತದ ಪರ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಟೀ20ಯಲ್ಲಿ ಭಾರತ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆಯನ್ನು ಚಹಲ್ ನಿರ್ಮಿಸಿದ್ದಾರೆ. ಚಹಲ್ ಒಟ್ಟು 79 ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದಾರೆ.

ಹಾರ್ದಿಕ್ ವೃತ್ತಿಜೀವನ

ಹಾರ್ದಿಕ್ ತಮ್ಮ ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ 50 ವಿಕೆಟ್ ಪೂರೈಸಿ 806 ರನ್ ಗಳಿಸಿದ್ದಾರೆ. ಜೊತೆಗೆ ಟಿ20ಯಲ್ಲಿ ಭಾರತದ ಪರ 50 ವಿಕೆಟ್ ಹಾಗೂ 500ಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಭಾರತೀಯ ಹಾರ್ದಿಕ್.

ಇದನ್ನೂ ಓದಿ
Image
IND vs WI: 2 ಗಂಟೆ ತಡವಾಗಿ ಶುರುವಾಗಲಿದೆ ಭಾರತ- ವೆಸ್ಟ್ ಇಂಡೀಸ್ 2ನೇ ಟಿ20 ಪಂದ್ಯ
Image
IND vs PAK: ಭಾರತದ ದಾಳಿಗೆ ಕೇವಲ 8 ಎಸೆತಗಳಲ್ಲಿ ತರಗೆಲೆಗಳಂತೆ ಉದುರಿದವು ಪಾಕಿಸ್ತಾನದ ವಿಕೆಟ್..!

ಶಾಹಿದ್ ಅಫ್ರಿದಿ ವಿಶೇಷ ಪಟ್ಟಿಗೆ ಸೇರ್ಪಡೆಗೊಂಡ ಭಾರತೀಯ ಆಲ್‌ರೌಂಡರ್

ಹಾರ್ದಿಕ್ ಪಾಂಡ್ಯ ಅವರು T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 50 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಮತ್ತು 500+ ರನ್ ಗಳಿಸಿದ ವಿಶ್ವದ 9 ನೇ ಕ್ರಿಕೆಟಿಗನಾಗುವ ಮೂಲಕ ಅದ್ಭುತ ದಾಖಲೆ ಮಾಡಿದರು. ಹಾರ್ದಿಕ್‌ಗಿಂತ ಮೊದಲು ಶಕೀಬ್ ಅಲ್ ಹಸನ್, ಶಾಹಿದ್ ಅಫ್ರಿದಿ, ಡ್ವೇನ್ ಬ್ರಾವೋ, ಜಾರ್ಜ್ ಡಾಕ್ರೆಲ್, ಮೊಹಮ್ಮದ್ ನಬಿ, ಮೊಹಮ್ಮದ್ ಹಫೀಜ್, ಕೆವಿನ್ ಒಬ್ರೇನ್ ಮತ್ತು ತಿಸಾರಾ ಪೆರೇರಾ ಅದ್ಭುತ ಡಬಲ್ ಬ್ಲಾಸ್ಟ್‌ಗಳ ಪಟ್ಟಿಯಲ್ಲಿದ್ದಾರೆ.

ಭಾರತ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

ಐದು ಟಿ20 ಸರಣಿಯ ಮೂರನೇ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಮೂರನೇ ಟಿ20ಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 7 ವಿಕೆಟ್​ಗಳ ಜಯ ಸಾಧಿಸಿದೆ. ಭಾರತದ ಪರವಾಗಿ ಸೂರ್ಯಕುಮಾರ್ ಯಾದವ್ 76 ರನ್ ಗಳಿಸಿದರು. ಜೊತೆಗೆ ಸೂರ್ಯಕುಮಾರ್ ಯಾದವ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಸದ್ಯ, ಸರಣಿಯ ಕೊನೆಯ ಎರಡು ಪಂದ್ಯಗಳು ಅಮೆರಿಕದ ಫ್ಲೋರಿಡಾದಲ್ಲಿ ನಡೆಯಲಿವೆ.

Published On - 2:30 pm, Wed, 3 August 22

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!