AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್ ಟ್ರೋಫಿ ಎಲ್ಲಿ? ಪಾಕ್ ಪತ್ರಕರ್ತರ ಪ್ರಶ್ನೆಗೆ ತಬ್ಬಿಬ್ಬಾದ ಮೊಹ್ಸಿನ್ ನಖ್ವಿ

Asia Cup Trophy Mystery: 2025ರ ಏಷ್ಯಾಕಪ್‌ ಫೈನಲ್ ಗೆದ್ದಿದ್ದರೂ ಟೀಂ ಇಂಡಿಯಾ ಇನ್ನೂ ಟ್ರೋಫಿ ಎತ್ತಿಹಿಡಿದಿಲ್ಲ. ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಪಡೆಯಲು ಭಾರತ ನಿರಾಕರಿಸಿತ್ತು. ಮೂರು ತಿಂಗಳಾದರೂ ಟ್ರೋಫಿ ಎಲ್ಲಿಯೂ ಸಿಕ್ಕಿಲ್ಲ. ನಖ್ವಿ ‘ಟ್ರೋಫಿ ಸುರಕ್ಷಿತವಾಗಿದೆ’ ಎಂದಿದ್ದರೂ, ಯಾವಾಗ ಭಾರತಕ್ಕೆ ಸಿಗುತ್ತದೆ ಎಂಬ ಬಗ್ಗೆ ಮೌನ ವಹಿಸಿದ್ದಾರೆ. ಬಿಸಿಸಿಐ ಕೂಡ ಐಸಿಸಿ ಸಭೆಯಲ್ಲಿ ಈ ವಿಷಯ ಎತ್ತಿಲ್ಲ. ಟ್ರೋಫಿ ವಿತರಣೆ ಈಗಲೂ ಪ್ರಶ್ನಾರ್ಥಕವಾಗಿದೆ.

ಏಷ್ಯಾಕಪ್ ಟ್ರೋಫಿ ಎಲ್ಲಿ? ಪಾಕ್ ಪತ್ರಕರ್ತರ ಪ್ರಶ್ನೆಗೆ ತಬ್ಬಿಬ್ಬಾದ ಮೊಹ್ಸಿನ್ ನಖ್ವಿ
Mohsin Naqvi
ಪೃಥ್ವಿಶಂಕರ
|

Updated on: Jan 04, 2026 | 10:01 PM

Share

2025 ರ ಸೆಪ್ಟೆಂಬರ್ ತಿಂಗಳಲ್ಲಿ ನಡೆದ ಏಷ್ಯಾಕಪ್‌ (Asia Cup) ಫೈನಲ್​ನಲ್ಲಿ ಪಾಕಿಸ್ತಾನವನ್ನು ಮಣಿಸಿದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಭಾರತ ಏಷ್ಯಾಕಪ್ ಗೆದ್ದಿದ್ದರೂ ಇದುವರೆಗೆ ಟ್ರೋಫಿಯನ್ನು ಎತ್ತಿಹಿಡಿಯಲು ಸಾಧ್ಯವಾಗಿಲ್ಲ. ವಾಸ್ತವವಾಗಿ ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿ (Mohsin Naqvi) ಅವರ ಕೈಯಿಂದ ಟ್ರೋಫಿಯನ್ನು ಪಡೆಯಲು ಭಾರತ ತಂಡ ನಿರಾಕರಿಸಿತ್ತು. ಅಂದಿನಿಂದ, ಈ ಟ್ರೋಫಿ ಮೊಹ್ಸಿನ್ ನಖ್ವಿ ಅವರ ಬಳಿಯೇ ಇದೆ. ಈ ಘಟನೆ ನಡೆದು ಈಗ ಮೂರು ತಿಂಗಳುಗಳು ಕಳೆದಿವೆ. ಆದಾಗ್ಯೂ ಭಾರತ ತಂಡಕ್ಕೆ ಟ್ರೋಫಿ ಸಿಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.

ನಖ್ವಿ ಬಳಿಯಲ್ಲೇ ಇದೆ ಏಷ್ಯಾಕಪ್ ಟ್ರೋಫಿ

ಮೊಹ್ಸಿನ್ ನಖ್ವಿ ಎಸಿಸಿ ಅಧ್ಯಕ್ಷರಾಗಿ ಇರುವ ತನಕ ಭಾರತ ತಂಡದ ಕೈಗೆ ಏಷ್ಯಾಕಪ್ ಟ್ರೋಫಿ ಸಿಗುವ ಸಾಧ್ಯತೆಗಳಿಲ್ಲ. ಆರಂಭದಲ್ಲಿ ಏಷ್ಯಾಕಪ್ ಟ್ರೋಫಿಯನ್ನು ಎಸಿಸಿ ಪ್ರಧಾನ ಕಚೇರಿಯಲ್ಲಿ ಇರಿಸಲಾಗಿದೆ ಎಂದು ವರದಿಯಾಗಿತ್ತು. ಆ ಬಳಿಕ ಮೊಹ್ಸಿನ್ ನಖ್ವಿ ಅವರೇ ಈ ಟ್ರೋಫಿಯನ್ನು ಬೇರೆಯವರಿಗೆ ತಿಳಿಯದಂತೆ ಬಚ್ಚಿಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದುವರೆಗೂ ಏಷ್ಯಾಕಪ್‌ ಟ್ರೋಫಿ ಎಲ್ಲಿದೆ ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ. ಈ ಬಗ್ಗೆ ನಖ್ವಿ ಅವರನ್ನು ಪ್ರಶ್ನೆ ಮಾಡಿದಾಗಲೂ ಅವರು ಯಾವುದೇ ಸ್ಪಷ್ಟ ಉತ್ತರವನ್ನು ನೀಡಿಲ್ಲ.

ಟ್ರೋಫಿ ಎಲ್ಲಿದ್ದರೂ ಅದು ಸುರಕ್ಷಿತವಾಗಿದೆ

ಆದರೆ ಪಾಕಿಸ್ತಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಖ್ವಿ ಅವರ ಬಳಿ ಏಷ್ಯಾಕಪ್ ಟ್ರೋಫಿಯ ಬಗ್ಗೆ ಪ್ರಶ್ನೆಯನ್ನು ಕೇಳಲಾಗಿದೆ. ವಾಸ್ತವವಾಗಿ ಕರಾಚಿಯಲ್ಲಿ ನಡೆದ ಚಾನೆಲ್‌ನಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ನಖ್ವಿಗೆ ಈ ಪ್ರಶ್ನೆಯನ್ನು ಕೇಳಲಾಯಿತು. ಪತ್ರಕರ್ತರು ಮೊಹ್ಸಿನ್ ನಖ್ವಿ ಅವರ ಬಳಿ ಏಷ್ಯಾಕಪ್ ಟ್ರೋಫಿಯನ್ನು ಎಲ್ಲಿ ಇರಿಸಲಾಗಿದೆ? ಅದನ್ನು ಭಾರತ ತಂಡಕ್ಕೆ ನೀಡಲಾಗುತ್ತದೆಯೇ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ. ಈ ಪ್ರಶ್ನೆಯಿಂದ ನಖ್ವಿ ಸ್ವಲ್ಪ ಗೊಂದಲಕ್ಕೊಳಗಾದರು. ಆದರೆ ಆ ನಂತರ ನೇರ ಉತ್ತರ ನೀಡಿದ ನಖ್ವಿ, ‘ಟ್ರೋಫಿ ಎಲ್ಲಿದ್ದರೂ ಅದು ಸುರಕ್ಷಿತವಾಗಿದೆ’ ಎಂದು ಉತ್ತರಿಸಿದ್ದಾರೆ. ಆದರೆ ಟ್ರೋಫಿಯನ್ನು ಭಾರತಕ್ಕೆ ಯಾವಾಗ ನೀಡಲಾಗುತ್ತದೆ ಎಂಬ ಪ್ರಶ್ನೆಗೆ ಮಾತ್ರ ಅವರ ಉತ್ತರ ಮೌನವಾಗಿತ್ತು.

ಇನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿಯೂ ಏಷ್ಯಾಕಪ್ ಟ್ರೋಫಿಯ ವಿಷಯದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿದುಬಂದಿದೆ. ಈ ಸಭೆಯಲ್ಲಿ ಭಾರತೀಯ ಕ್ರಿಕೆಟ್ ಮಂಡಳಿ, ಬಿಸಿಸಿಐ, ಏಷ್ಯಾಕಪ್ ಬಗ್ಗೆ ಯಾವುದೇ ಪ್ರಶ್ನೆಗಳನ್ನು ಕೇಳಲಿಲ್ಲ ಎಂತಲೂ ವರದಿಯಾಗಿದೆ. ಸುದ್ದಿಯ ಪ್ರಕಾರ, ಐಸಿಸಿ ಮಂಡಳಿ ಸಭೆಯಲ್ಲಿ ಏಷ್ಯಾಕಪ್ ಟ್ರೋಫಿಯ ಬಗ್ಗೆ ಯಾವುದೇ ಪ್ರಸ್ತಾಪ ನಡೆದಿಲ್ಲ. ಆದ್ದರಿಂದ, ಅದರ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಆದಾಗ್ಯೂ ಈ ಟ್ರೋಫಿಯನ್ನು ಭಾರತ ತಂಡಕ್ಕೆ ಯಾವಾಗ ನೀಡಲಾಗುತ್ತದೆ ಎಂಬುದಕ್ಕೆ ಮೊಹ್ಸಿನ್ ನಖ್ವಿ ಮಾತ್ರ ಉತ್ತರಿಸಬಹುದಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ