WTC Final 2023: ಲಂಡನ್​ನಲ್ಲಿ ಟೀಮ್ ಇಂಡಿಯಾ ಪ್ಲೇಯರ್ಸ್: ಹೊಸ ಕಿಟ್ ಧರಿಸಿ ಅಭ್ಯಾಸ ಶುರು

Team India: ಸದ್ಯ ಲಂಡನ್​ಗೆ ತಲುಪಿರುವ ಟೀಮ್ ಇಂಡಿಯಾ ಪ್ಲೇಯರ್ಸ್ ತಮ್ಮ ಹೊಸ ಅಡಿಡಾಸ್ ಕಿಟ್ ಧರಿಸಿ ಅಭ್ಯಾಸ ಶುರು ಮಾಡಿಕೊಂಡಿದ್ದಾರೆ. ಮೊನ್ನೆಯಷ್ಟೆ ಬಿಸಿಸಿಐ ಜರ್ಮನ್ ಕ್ರೀಡಾ ಸಾಮಗ್ರಿಗಳ ಕಂಪನಿ ಅಡಿಡಾಸ್ ಸಂಸ್ಥೆ​ಯೊಂದಿಗೆ ಕಿಟ್‌ ಪ್ರಾಯೋ​ಜ​ಕ​ತ್ವಕ್ಕೆ ಸಹಿ ಹಾಕಿತ್ತು.

WTC Final 2023: ಲಂಡನ್​ನಲ್ಲಿ ಟೀಮ್ ಇಂಡಿಯಾ ಪ್ಲೇಯರ್ಸ್: ಹೊಸ ಕಿಟ್ ಧರಿಸಿ ಅಭ್ಯಾಸ ಶುರು
Team India
Follow us
|

Updated on: May 26, 2023 | 11:25 AM

ಭಾರತೀಯ ಕ್ರಿಕೆಟ್ ತಂಡದ ಕೆಲ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2023) ಬ್ಯುಸಿ ಆಗಿದ್ದರೆ ಇನ್ನೂ ಕೆಲ ಪ್ಲೇಯರ್ಸ್ ಲಂಡನ್​ಗೆ ತಲುಪಿದ್ದಾರೆ. ಐಪಿಎಲ್ 2023 ಮುಗಿದ ಬೆನ್ನಲ್ಲೇ ಟೀಮ್ ಇಂಡಿಯಾ ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​​ನಲ್ಲಿ (ICC WTC Final) ಕಣಕ್ಕಿಳಿದೆ. ಇದಕ್ಕಾಗಿ ಭಾರತದ ಕೋಚ್ ರಾಹುಲ್ ದ್ರಾವಿಡ್, ಶಾರ್ದೂಲ್ ಠಾಕೂರ್, ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್ ಸೇರಿದಂತೆ ಒಂದು ತಂಡ ಲಂಡನ್​ಗೆ ತಲುಪಿದೆ. ಮತ್ತೊಂದು ಬ್ಯಾಚ್ ಐಪಿಎಲ್ ಮುಗಿದ ತಕ್ಷಣ ಭಾರತದಿಂದ ಹೊರಡಲಿದೆ. ಸದ್ಯ ಲಂಡನ್​ಗೆ ತಲುಪಿರುವ ಟೀಮ್ ಇಂಡಿಯಾ (Team India) ಪ್ಲೇಯರ್ಸ್ ತಮ್ಮ ಹೊಸ ಅಡಿಡಾಸ್ ಕಿಟ್ ಧರಿಸಿ ಅಭ್ಯಾಸ ಶುರು ಮಾಡಿಕೊಂಡಿದ್ದಾರೆ.

ಮೊನ್ನೆಯಷ್ಟೆ ಬಿಸಿಸಿಐ ಜರ್ಮನ್ ಕ್ರೀಡಾ ಸಾಮಗ್ರಿಗಳ ಕಂಪನಿ ಅಡಿಡಾಸ್ ಸಂಸ್ಥೆ​ಯೊಂದಿಗೆ ಕಿಟ್‌ ಪ್ರಾಯೋ​ಜ​ಕ​ತ್ವಕ್ಕೆ ಸಹಿ ಹಾಕಿತ್ತು. ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದರು. ಇದೀಗ ಟೀಮ್ ಇಂಡಿಯಾ ಆಟಗಾರರು ತೊಡುವ ಜೆರ್ಸಿಯ ಮೇಲೆ ಅಡಿಡಾಸ್ ಕಂಪನಿಯ ಲೋಗೋ ಕಾಣಿಸಿದೆ. ಈ ಹೊಸ ಲೋಗೋ ಇರುವ ಜೆರ್ಸಿ ಧರಿಸಿ ಆಟಗಾರರು ಅಭ್ಯಾಸ ನಡೆಸುತ್ತಿದ್ದಾರೆ. ಬಿಸಿಸಿಐ ಈ ಫೋಟೋವನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಇದನ್ನೂ ಓದಿ
Image
IPL 2023 Closing Ceremony: ಐಪಿಎಲ್ 2023 ಸಮಾರೋಪ ಸಮಾರಂಭಕ್ಕೆ ಬಿಸಿಸಿಐ ಮೆಗಾ ಪ್ಲಾನ್: ಏನಿರಲಿದೆ ಗೊತ್ತೇ?
Image
GT vs MI: ಕ್ವಾಲಿಫೈಯರ್-2 ಪಂದ್ಯ ನಡೆಯಲಿರುವ ಅತಿ ದೊಡ್ಡ ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ಹೇಗಿದೆ?
Image
Wrestlers Protest: ಸಾಕ್ಷಿ, ವಿನೇಶ್, ಬಜರಂಗ್ ವಿರುದ್ಧ ಎಫ್‌ಐಆರ್‌ಗೆ ಅರ್ಜಿ: ಪ್ರತಿಭಟನೆ ತೀವ್ರಗೊಳಿಸಲು ಮತ್ತೊಂದು ಹೆಜ್ಜೆ ಇಟ್ಟಿ ಕುಸ್ತಿಪಟುಗಳು
Image
GT vs MI, Qualifier 2: ಐಪಿಎಲ್​ನಲ್ಲಿಂದು ಗುಜರಾತ್-ಮುಂಬೈ ನಡುವೆ ಕ್ವಾಲಿಫೈಯರ್-2: ಸೋತರೆ ಔಟ್, ಗೆದ್ದರೆ ಫೈನಲ್​ಗೆ

Virat Kohli: ಮೈದಾನಕ್ಕಿಳಿಯದೇ ದಾಖಲೆ ಬರೆದ ಕಿಂಗ್ ಕೊಹ್ಲಿ

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಈ ಪಂದ್ಯ ಜೂನ್ 7 ರಿಂದ 11ರ ವರೆಗೆ ನಡೆಯಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನ ಈ ಐತಿಹಾಸಿಕ ಕಾದಾಟಕ್ಕೆ ಸಾಕ್ಷಿಯಾಗಲಿದೆ. ಈಗಾಗಲೇ ಈ ಮಹತ್ವದ ಟೂರ್ನಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಟೀಮ್ ಇಂಡಿಯಾವನ್ನು ಕೂಡ ಪ್ರಕಟ ಮಾಡಿದೆ.

ಈ ಹಿಂದೆ ಟೆಸ್ಟ್ ತಂಡದಿಂದ ಹೊರಬಿದ್ದ ಅಜಿಂಕ್ಯಾ ರಹಾನೆ ಕಮ್​ಬ್ಯಾಕ್ ಮಾಡಿದ್ದಾರೆ. ಸದ್ಯ ಸಾಗುತ್ತಿರುವ ಐಪಿಎಲ್​ನಲ್ಲಿ ಸಿಎಸ್​ಕೆ ಪರ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿರುವ ರಹಾನೆ ಸ್ಥಾನ ಪಡೆದುಕೊಂಡಿದ್ದಾರೆ. ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದು ಶುಭ್​ಮನ್ ಗಿಲ್ ಆಯ್ಕೆ ಆಗಿದ್ದಾರೆ. ಕೆಎಸ್ ಭರತ್ ವಿಕೆಟ್ ಕೀಪರ್ ಆಗಿರಲಿದ್ದಾರೆ.

ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಮಧ್ಯಮ ಕ್ರಮಾಂಕದ ಬಲವಾಗಿದ್ದಾರೆ. ಆಲ್ರೌಂಡರ್​ಗಳಾಗಿ ನಾಲ್ವರು ಆಯ್ಕೆ ಆಗಿದ್ದು ರವಿಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಥಾಕೂರ್ ಹಾಗೂ ರವಿಚಂದ್ರನ್ ಅಶ್ವಿನ್ ಇದ್ದಾರೆ. ವೇಗಿಗಳ ವಿಭಾಗದಲ್ಲಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನಾದ್ಕಟ್ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್