AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತಿಹಾಸದಲ್ಲೇ ಮೊದಲು… ಟೀಮ್ ಇಂಡಿಯಾ ಕ್ಯಾಪ್ಟನ್ ಹೆಗಲಿಗೆ ಬೇಡದ ದಾಖಲೆ!

IND vs ENG: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡಕ್ಕೆ ಆರಂಭದಲ್ಲೇ ಭಾರೀ ನಿರಾಶೆ ಎದುರಾಗಿದೆ. ಮ್ಯಾಂಚೆಸ್ಟರ್‌ನಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ಎದುರು 4 ವಿಕೆಟ್‌ಗಳ ಸೋಲು ಕಾಣುವ ಮೂಲಕ ಭಾರತ ತಂಡ ಒಂದು ಅನಿಷ್ಟ ಇತಿಹಾಸವನ್ನು ಮರುಕಳಿಸಿದೆ. 2021ರ ಬಳಿಕ ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ಸತತವಾಗಿ ಮೂರು ಟಿ20 ಪಂದ್ಯಗಳನ್ನು ಸೋತಿದೆ.

ಇತಿಹಾಸದಲ್ಲೇ ಮೊದಲು... ಟೀಮ್ ಇಂಡಿಯಾ ಕ್ಯಾಪ್ಟನ್ ಹೆಗಲಿಗೆ ಬೇಡದ ದಾಖಲೆ!
Shreyas IyerImage Credit source: GettyImages
ಝಾಹಿರ್ ಯೂಸುಫ್
|

Updated on: Jul 05, 2026 | 10:52 AM

Share

ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಈವರೆಗೆ 15 ನಾಯಕರುಗಳು ಮುನ್ನಡೆಸಿದ್ದಾರೆ. ಈ ಹದಿನೈದು ನಾಯಕರುಗಳಲ್ಲಿ ಹದಿನಾಲ್ಕು ಕ್ಯಾಪ್ಟನ್​ಗಳು ಬರೆಯದ ಅನಗತ್ಯ ದಾಖಲೆಯೊಂದು ಶ್ರೇಯಸ್ ಅಯ್ಯರ್ ಪಾಲಾಗಿದೆ. ಅದು ಸಹ ಸೋಲುಗಳೊಂದಿಗೆ..!

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಪಂದ್ಯದಲ್ಲಿ ಭಾರತ ತಂಡ 4 ವಿಕೆಟ್‌ಗಳ ಸೋಲನ್ನು ಅನುಭವಿಸಿದೆ. ಇದರೊಂದಿಗೆ ನಾಯಕ ಶ್ರೇಯಸ್ ಅಯ್ಯರ್ ಅವರ ಗೆಲುವಿನ ಕಾಯುವಿಕೆ ಮತ್ತಷ್ಟು ಸುದೀರ್ಘವಾಗಿದೆ.

ನಾಯಕನಾಗಿ ಜವಾಬ್ದಾರಿ ವಹಿಸಿಕೊಂಡ ಆರಂಭದ ನಾಲ್ಕೂ ಪಂದ್ಯಗಳಲ್ಲಿ ಒಂದೂ ಜಯ ಕಾಣದ ಭಾರತದ ಮೊದಲ ಕ್ಯಾಪ್ಟನ್ ಎಂಬ ನಿರಾಶಾದಾಯಕ ದಾಖಲೆಗೆ ಅಯ್ಯರ್ ಪಾತ್ರರಾಗಿದ್ದಾರೆ.

ಸೋಲಿನ ಮೇಲೆ ಸೋಲು:

ಶ್ರೇಯಸ್ ಅಯ್ಯರ್ ನಾಯಕನಾಗಿ ಪಾದರ್ಪಣೆ ಮಾಡಿದ ಮೊದಲ ಸರಣಿಯಲ್ಲೇ ಟೀಮ್ ಇಂಡಿಯಾ ಮುಗ್ಗರಿಸಿತ್ತು. ಐರ್ಲೆಂಡ್ ವಿರುದ್ಧ ನಡೆದ 2 ಪಂದ್ಯಗಳ ಈ ಸರಣಿಯಲ್ಲಿ 2-0 ಅಂತರದಿಂದ ಸೋತು ಭಾರತ ತಂಡ ಭಾರೀ ಮುಖಭಂಗ ಅನುಭವಿಸಿತ್ತು.

ಇನ್ನು ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ ಮ್ಯಾಚ್ ಮಳೆಗೆ ಆಹುತಿಯಾಗಿತ್ತು. ಇದೀಗ ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿದೆ. ಅಂದರೆ ಶ್ರೇಯಸ್ ನಾಯಕತ್ವದಲ್ಲಿ ಭಾರತ ಆಡಿದ ಮೊದಲ 4 ಪಂದ್ಯಗಳಲ್ಲಿ ಒಂದನ್ನೂ ಗೆಲ್ಲಲು ಸಾಧ್ಯವಾಗಿಲ್ಲ.

‘ಅನಪೇಕ್ಷಿತ’ ದಾಖಲೆ ಪಟ್ಟಿ:

ಐಸಿಸಿ ಪೂರ್ಣ ಪ್ರಮಾಣದ ಸದಸ್ಯತ್ವ ಹೊಂದಿರುವ ದೇಶಗಳ ಪೈಕಿ, ತಮ್ಮ ನಾಯಕತ್ವದ ಮೊದಲ 4 ಟಿ20 ಪಂದ್ಯಗಳಲ್ಲಿ ಒಂದೂ ಗೆಲುವು ಕಾಣದ 9ನೇ ನಾಯಕರಾಗಿ ಶ್ರೇಯಸ್ ಅಯ್ಯರ್ ಹೊರಹೊಮ್ಮಿದ್ದಾರೆ. ಈ ಪಟ್ಟಿಯಲ್ಲಿರುವ ಇತರ ಪ್ರಮುಖ ನಾಯಕರುಗಳೆಂದರೆ…

  • ಶಾಕಿಬ್ ಅಲ್ ಹಸನ್ (ಬಾಂಗ್ಲಾದೇಶ್)
  • ಎಲ್ಟನ್ ಚಿಗುಂಬುರಾ (ಝಿಂಬಾಬ್ವೆ)
  • ಬ್ರೆಂಡನ್ ಟೇಲರ್ (ಝಿಂಬಾಬ್ವೆ)
  • ತಿಸಾರ ಪೆರೇರಾ (ಶ್ರೀಲಂಕಾ)
  • ಮಹಮುದುಲ್ಲಾ (ಬಾಂಗ್ಲಾದೇಶ್)
  • ಮ್ಯಾಥ್ಯೂ ವೇಡ್ (ಆಸ್ಟ್ರೇಲಿಯಾ)
  • ಶಾಹೀನ್ ಶಾ ಅಫ್ರಿದಿ (ಪಾಕಿಸ್ತಾನ್)
  • ಮೊಹಮ್ಮದ್ ರಿಝ್ವಾನ್ (ಪಾಕಿಸ್ತಾನ್)
  • ಶ್ರೇಯಸ್ ಅಯ್ಯರ್ (ಭಾರತ)

ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಟೀಮ್ ಇಂಡಿಯಾ ಪರ ನಾಯಕರೊಬ್ಬರು ಪಾದಾರ್ಪಣೆ ಬೆನ್ನಲ್ಲೇ ಸತತ ಮೂರು ಪಂದ್ಯಗಳಲ್ಲಿ ಸೋತಿರುವುದು ಇದೇ ಮೊದಲು. ಅಂದರೆ ಅಯ್ಯರ್ ಕ್ಯಾಪ್ಟನ್ ಆದ ಬಳಿಕ ಟೀಮ್ ಇಂಡಿಯಾ ಸತತ ಮೂರು ಮ್ಯಾಚ್​ಗಳಲ್ಲೂ ಪರಾಜಯಗೊಂಡಿದೆ.

ಅಲ್ಲದೆ 2021ರ ಬಳಿಕ ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ಸತತವಾಗಿ ಮೂರು ಟಿ20 ಪಂದ್ಯಗಳನ್ನು ಸೋತಿದೆ. ಈ ಸೋಲುಗಳಿಂದ ಶ್ರೇಯಸ್ ಅಯ್ಯರ್ ಪಡೆ ಭಾರೀ ನಿರಾಶೆ ಎದುರಿಸಿದ್ದು ಮಾತ್ರವಲ್ಲದೆ, ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ 0-1 ಅಂತರದಿಂದ ಹಿನ್ನಡೆ ಅನುಭವಿಸಿದೆ.

ಇದನ್ನೂ ಓದಿ: ಆಟವಲ್ಲ… ಹೊಡೆದಾಟ… ಕೈಕೈ ಮಿಲಾಯಿಸಿದ  ಫ್ರಾನ್ಸ್ vs ಪರಾಗ್ವೆ ಆಟಗಾರರು!

ಈ ಸರಣಿಯಲ್ಲಿ ಇನ್ನು ಮೂರು ಪಂದ್ಯಗಳು ಬಾಕಿ ಉಳಿದಿದ್ದು, ಟ್ರೋಫಿ ಗೆಲ್ಲುವ ಆಶಯವನ್ನು ಜೀವಂತವಾಗಿರಿಸಿಕೊಳ್ಳಲು ಭಾರತ ತಂಡವು ಮುಂದಿನ ಪಂದ್ಯಗಳಲ್ಲಿ ಕಡ್ಡಾಯವಾಗಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಹೀಗಾಗಿ ನ್ಯಾಟಿಂಗ್​ಹ್ಯಾಮ್​ನಲ್ಲಿ ನಡೆಯಲಿರುವ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾದ ಕಂಬ್ಯಾಕ್ ಅನ್ನು ನಿರೀಕ್ಷಿಸಬಹುದು.

Follow Us
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ
ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ
ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ
ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು
ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು
ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ವಿಜಯೇಂದ್ರ
ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ವಿಜಯೇಂದ್ರ
ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?
ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?
ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ: ಪ್ರಿಯಾಂಕ್ ಖರ್ಗೆ
ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ: ಪ್ರಿಯಾಂಕ್ ಖರ್ಗೆ
ನಾನಿನ್ನೂ ಬದುಕಿದ್ದೇನೆ; ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ
ನಾನಿನ್ನೂ ಬದುಕಿದ್ದೇನೆ; ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ