AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIR ವಿಚಾರಣೆಗೆ ಹಾಜರಾಗಲು ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಸಮನ್ಸ್

Special Intensive Revision - SIR: ವಿಶೇಷ ತೀವ್ರ ಪರಿಷ್ಕರಣೆ ಎಂದರೆ ಜನರ ಸ್ಥಳಾಂತರದಿಂದಾಗಿ ಮತದಾರರ ಪಟ್ಟಿಯಲ್ಲಿ ಆಗುವ ಬದಲಾವಣೆಗಳನ್ನು ಸರಿಪಡಿಸುವುದಾಗಿದೆ. ಇದರ ಜೊತೆಗೆ 18 ವರ್ಷ ಪೂರ್ಣಗೊಂಡ ಹೊಸ ಮತದಾರರನ್ನು ಪಟ್ಟಿಗೆ ಸೇರಿಸಲಾಗುತ್ತದೆ. ಹಾಗೆಯೇ ಮರಣ ಹೊಂದಿದವರು, ಒಂದೇ ಹೆಸರಿನಲ್ಲಿ ಎರಡು ನೋಂದಣಿಗಳು, ಇತ್ಯಾದಿಗಳನ್ನು ಈ ಪರಿಷ್ಕರಣೆಯ ಮೂಲಕ ತೆಗೆದುಹಾಕಲಾಗುತ್ತದೆ.

SIR ವಿಚಾರಣೆಗೆ ಹಾಜರಾಗಲು ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಸಮನ್ಸ್
Mohammed Shami
ಝಾಹಿರ್ ಯೂಸುಫ್
|

Updated on:Jan 06, 2026 | 1:09 PM

Share

ದೇಶದ ಹಲವು ರಾಜ್ಯಗಳಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಚಾಲ್ತಿಯಲ್ಲಿದೆ. ಈ ಪರಿಷ್ಕರಣೆಯ ಭಾಗವಾಗಿ ಇದೀಗ ವಿಚಾರಣೆಗೆ ಹಾಜರಾಗುವಂತೆ ಟೀಮ್ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ಮತ್ತು ಅವರ ಸಹೋದರ ಮೊಹಮ್ಮದ್ ಕೈಫ್​ ಅವರಿಗೆ ಚುನಾವಣಾ ಆಯೋಗ ಸಮನ್ಸ್ ಜಾರಿ ಮಾಡಿದೆ.

ದಕ್ಷಿಣ ಕೋಲ್ಕತ್ತಾದ ಜಾದವ್‌ಪುರ ಪ್ರದೇಶದ ಕರ್ತ್ಜು ನಗರ ಶಾಲೆಯಿಂದ ಸೋಮವಾರ ನೋಟಿಸ್‌ಗಳನ್ನು ಜಾರಿಗೊಳಿಸಲಾಗಿದ್ದು, ಸಹಾಯಕ ಚುನಾವಣಾ ನೋಂದಣಿ ಅಧಿಕಾರಿ (AERO) ಮುಂದೆ ಹಾಜರಾಗುವಂತೆ ಶಮಿ ಮತ್ತು ಅವರ ತಮ್ಮನಿಗೆ ಸೂಚಿಸಲಾಗಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಮೊಹಮ್ಮದ್ ಶಮಿ ವಿಜಯ್ ಹಝಾರೆ ಟ್ರೋಫಿಯಲ್ಲಿ ರಾಜ್‌ಕೋಟ್‌ನಲ್ಲಿ ಬಂಗಾಳವನ್ನು ಪ್ರತಿನಿಧಿಸುತ್ತಿರುವುದರಿಂದ ನಿಗದಿತ ದಿನಾಂಕದಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ಈ ಪಂದ್ಯದ ಬಳಿಕ ಅವರು ಕೊಲ್ಕತ್ತಾಗೆ ಮರಳುವ ಸಾಧ್ಯತೆಯಿದೆ.

ಸಮನ್ಸ್ ಜಾರಿಗೊಳಿಸಿದ್ದೇಕೆ?

ಮೊಹಮ್ಮದ್ ಶಮಿ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ (ಕೆಎಂಸಿ) ವಾರ್ಡ್ ಸಂಖ್ಯೆ 93 ರಲ್ಲಿ ಮತದಾರರಾಗಿ ದಾಖಲಾಗಿದ್ದಾರೆ. ಇದು ರಾಶ್‌ಬೆಹರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಅಂದರೆ ರಾಶ್​ಬೆಹರಿ ಕ್ಷೇತ್ರದಲ್ಲಿ ಮೊಹಮ್ಮದ್ ಶಮಿ ಮತದಾನದ ಹಕ್ಕನ್ನು ಹೊಂದಿದ್ದಾರೆ.

ಆದರೆ ಶಮಿ ಅವರು ಮೂಲತಃ ಉತ್ತರ ಪ್ರದೇಶದವರು. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಜನಿಸಿದ ಅವರು ಹಲವಾರು ವರ್ಷಗಳಿಂದ ಕೋಲ್ಕತ್ತಾದ ಖಾಯಂ ನಿವಾಸಿಯಾಗಿದ್ದಾರೆ

ಇದೀಗ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ವೇಳೆ  ಮೊಹಮ್ಮದ್ ಶಮಿ ಮತ್ತು ಅವರ ಸಹೋದರನ ಹೆಸರುಗಳು ಎಣಿಕೆ ನಮೂನೆಗಳಲ್ಲಿನ ತೊಡಕುಗಳಿಂದಾಗಿ ವಿಚಾರಣಾ ಪಟ್ಟಿಯಲ್ಲಿ ಕಾಣಿಸಿಕೊಂಡಿವೆ. ಈ ಮ್ಯಾಪಿಂಗ್ ವ್ಯತ್ಯಾಸಗಳ ಬಗ್ಗೆ ವಿಚಾರಣೆ ನಡೆಸಲು ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಕೈಫ್ ಅವರಿಗೆ ಚುನಾವಣಾ ಆಯೋಗ ನೋಟೀಸ್ ಕಳುಹಿಸಿದೆ.

ಅತ್ತ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿರುವುದರಿಂದ ಮೊಹಮ್ಮದ್ ಶಮಿ ಈವರೆಗೆ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಶಮಿ ಅವರ ವಿಚಾರಣೆಯನ್ನು ಜನವರಿ 9 ರಿಂದ 11 ರ ನಡುವೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ ಎಂದು ವರದಿಯಾಗಿದೆ.

ಸದ್ಯ ಪಶ್ಚಿಮ ಬಂಗಾಳದಲ್ಲಿ ಎಸ್​ಐಆರ್​ ಪ್ರಕ್ರಿಯೆ ಚಾಲನೆಯಲ್ಲಿದ್ದು, ಮುಂದಿನ ವಿಧಾನಸಭಾ ಚುನಾವಣೆಗೂ ಮುನ್ನ ಈ ಪ್ರಕ್ರಿಯೆಯು ಅಂತ್ಯಗೊಳ್ಳಲಿದೆ. ಅಲ್ಲದೆ ಬಂಗಾಳದ ಅಂತಿಮ ಮತದಾರರ ಪಟ್ಟಿಯನ್ನು ಫೆಬ್ರವರಿ 14 ರಂದು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಇದನ್ನೂ ಓದಿ: ಅಬ್ಬರ ಸಿಡಿಲಬ್ಬರ… ಟ್ರಾವಿಸ್ ಹೆಡ್​ ಬ್ಯಾಟ್​ನಿಂದ ದಾಖಲೆಯ ಸೆಂಚುರಿ

ಇದಕ್ಕೂ ಮುನ್ನ ಪಶ್ಚಿಮ ಬಂಗಾಳದ ಎಸ್​ಐಆರ್​ ಪ್ರಕ್ರಿಯೆಯ ಭಾಗವಾಗಿ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ 58 ಲಕ್ಷಕ್ಕೂ ಅಧಿಕ ಮತದಾರರ ಹೆಸರುಗಳನ್ನು ಅಳಿಸಲಾಗಿತ್ತು. ಅಲ್ಲದೆ ಪ್ರಕಟವಾದ ಕರಡು ಮತದಾರರ ಪಟ್ಟಿಯಿಂದ ಹೆಸರು ಅಳಿಸಿಹೋಗಿದ್ದರೆ ಅಥವಾ ಕಾಣೆಯಾಗಿದ್ದರೆ, ಅವರು ಮತ್ತೊಮ್ಮೆ ಅಧಿಕೃತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಚುನಾವಣಾ ಆಯೋಗ ತಿಳಿಸಿದೆ.

Published On - 1:06 pm, Tue, 6 January 26

Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ