AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಗೆಲುವು ಖಚಿತವಿಲ್ಲ..! ಇಂಗ್ಲೆಂಡ್‌ ಪ್ರವಾಸಕ್ಕೂ ಮುನ್ನ ಗೌತಮ್ ‘ಗಂಭೀರ’ ಮಾತು

India's England Tour 2025: ಭಾರತ ಕ್ರಿಕೆಟ್ ತಂಡದ ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಗೌತಮ್ ಗಂಭೀರ್ ಮತ್ತು ಶುಭ್ಮನ್ ಗಿಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಗಂಭೀರ್ ಅವರು ಇಂಗ್ಲೆಂಡ್‌ನಲ್ಲಿ 1000 ರನ್ ಗಳಿಸಿದರೂ ಗೆಲುವು ಖಚಿತವಲ್ಲ ಎಂದು ಹೇಳಿದರೆ, ಗಿಲ್ ಅವರು ತಮ್ಮ ನಾಯಕತ್ವ ಶೈಲಿ ಮತ್ತು ತಂಡದ ಸಿದ್ಧತೆಗಳ ಬಗ್ಗೆ ಮಾತನಾಡಿದ್ದಾರೆ. ಬುಮ್ರಾ ಅವರ ಲಭ್ಯತೆಯ ಬಗ್ಗೆಯೂ ಚರ್ಚೆ ನಡೆದಿದೆ. ಒಟ್ಟಾರೆ, ಟೀಂ ಇಂಡಿಯಾ ಇಂಗ್ಲೆಂಡ್‌ನಲ್ಲಿ ಎದುರಿಸುವ ಸವಾಲುಗಳು ಮತ್ತು ಅವರ ಗೆಲುವಿನ ನಿರೀಕ್ಷೆಗಳ ಬಗ್ಗೆ ಚರ್ಚೆ ನಡೆದಿದೆ.

IND vs ENG: ಗೆಲುವು ಖಚಿತವಿಲ್ಲ..! ಇಂಗ್ಲೆಂಡ್‌ ಪ್ರವಾಸಕ್ಕೂ ಮುನ್ನ ಗೌತಮ್ ‘ಗಂಭೀರ’ ಮಾತು
Team India
ಪೃಥ್ವಿಶಂಕರ
|

Updated on:Jun 05, 2025 | 11:14 PM

Share

2025 ರ ಐಪಿಎಲ್ (IPL 2025) ಸೀಸನ್ ಮುಗಿಯುತ್ತಿದ್ದಂತೆ, ಈಗ ಎಲ್ಲರ ಕಣ್ಣುಗಳು ಟೀಂ ಇಂಡಿಯಾದ ಇಂಗ್ಲೆಂಡ್ ಪ್ರವಾಸದ (India’s England Tour 2025) ಮೇಲೆ ಇವೆ. ಜೂನ್ 5 ಅಥವಾ 6 ರಂದು ಮಧ್ಯರಾತ್ರಿ ಭಾರತ ತಂಡ ಇಂಗ್ಲೆಂಡ್‌ಗೆ ತೆರಳಲಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ 5 ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಬೇಕಾಗಿದೆ. ಆದರೆ ಜೂನ್ 20 ರಂದು ಪ್ರಾರಂಭವಾಗುವ ಈ ಸರಣಿಗೆ ಮೊದಲು, ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ (Gautam Gambhir) ಹಾಗೂ ನೂತನ ನಾಯಕ ಶುಭ್​ಮನ್ ಗಿಲ್, ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿ ಮಾತನಾಡಿದರು. ಈ ವೇಳೆ ಗಂಭೀರ್, ಇಂಗ್ಲೆಂಡ್‌ನಲ್ಲಿ 1000 ರನ್ ಗಳಿಸಿದರೂ ಗೆಲುವು ಖಚಿತವಾಗುವುದಿಲ್ಲ ಎಂದು ಹೇಳಿ, ತಂಡಕ್ಕೆ ಪ್ರವಾಸಕ್ಕೂ ಮುಂಚೆಯೇ ಎಚ್ಚರಿಕೆ ನೀಡಿದ್ದಾರೆ.

ವಾಸ್ತವವಾಗಿ ಇಂಗ್ಲೆಂಡ್‌ ಪ್ರವಾಸಕ್ಕೆ ಭಾರತ ಟೆಸ್ಟ್ ತಂಡ ತೆರಳುವ ಮೊದಲು, ಜೂನ್ 5 ರ ಗುರುವಾರ ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಹೊಸ ಟೆಸ್ಟ್ ನಾಯಕ ಶುಭಮನ್ ಗಿಲ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ, ಗಿಲ್ ತಮ್ಮ ನಾಯಕತ್ವ ಶೈಲಿಯಿಂದ ಹಿಡಿದು ಟೀಂ ಇಂಡಿಯಾದ ಸಿದ್ಧತೆಗಳವರೆಗೆ ಎಲ್ಲದರ ಬಗ್ಗೆ ಮಾತನಾಡಿದರು.

ಗೆಲ್ಲಲು 20 ವಿಕೆಟ್‌ಗಳು ಬೇಕು

ಮತ್ತೊಂದೆಡೆ, ಕೋಚ್ ಗೌತಮ್ ಗಂಭೀರ್ ಇಂಗ್ಲೆಂಡ್‌ನಲ್ಲಿ ಗೆಲುವು ಸಾಧಿಸುವುದು ಎಷ್ಟು ಕಷ್ಟವಾಗುತ್ತದೆ ಎಂಬುದರ ಕುರಿತು ತಮ್ಮದೇ ಆದ ಶೈಲಿಯಲ್ಲಿ ಸ್ಪಷ್ಟವಾಗಿ ಮಾತನಾಡಿದರು. ಟೀಂ ಇಂಡಿಯಾದೊಂದಿಗೆ ಆಟಗಾರನಾಗಿ 2-3 ಬಾರಿ ಇಂಗ್ಲೆಂಡ್ ಪ್ರವಾಸ ಮಾಡಿರುವ ಗೌತಮ್ ಗಂಭೀರ್, ‘ಇಂಗ್ಲೆಂಡ್‌ನಲ್ಲಿನ ಪರಿಸ್ಥಿತಿಗಳು ತುಂಬಾ ಕಷ್ಟಕರವಾಗಿರುತ್ತದೆ. ಅಲ್ಲಿ ಕೇವಲ ರನ್ ಗಳಿಸುವುದರಿಂದ ಗೆಲುವು ಖಚಿತವಾಗುವುದಿಲ್ಲ . ಇಂಗ್ಲೆಂಡ್‌ನಲ್ಲಿ, ನೆಲ ಮಾತ್ರವಲ್ಲ, ಆಕಾಶವೂ ದೊಡ್ಡ ಪಾತ್ರವನ್ನು ವಹಿಸುತ್ತದೆ. ಅಲ್ಲಿ 1000 ರನ್ ಗಳಿಸಿದರೂ ಗೆಲುವು ಖಚಿತವಾಗುವುದಿಲ್ಲ. ನೀವು 20 ವಿಕೆಟ್‌ಗಳನ್ನು ಪಡೆದರೆ ಮಾತ್ರ ಗೆಲ್ಲಬಹುದು’ ಎಂದು ಹೇಳಿದರು.

ಒತ್ತಡ ಯಾವಾಗಲೂ ಇರುತ್ತದೆ

ಗಂಭೀರ್ ಕೋಚ್ ಆದ ನಂತರ, ಟೀಂ ಇಂಡಿಯಾ ಇತ್ತೀಚೆಗೆ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದಿತು. ಆದರೆ ಟೆಸ್ಟ್ ಕ್ರಿಕೆಟ್‌ನಲ್ಲಿ ತಂಡದ ಪ್ರದರ್ಶನ ನಿರಂತರವಾಗಿ ಕಳಪೆಯಾಗಿದೆ. ಹೀಗಾಗಿ ಇಂದಿನ ಪತ್ರಿಕಾಗೋಷ್ಠಿಯಲ್ಲಿ, ಹಿಂದಿನ ಫಲಿತಾಂಶಗಳು ನಿಮ್ಮ ಮೇಲೆ ಹೆಚ್ಚಿನ ಒತ್ತಡ ಹೇರುತ್ತವೆಯೇ ಎಂದು ಗಂಭೀರ್ ಅವರನ್ನು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಗಂಭೀರ್, ‘ನಾನು ಟೀಂ ಇಂಡಿಯಾವನ್ನು ಪ್ರತಿನಿಧಿಸುವಾಗಲೆಲ್ಲಾ ಯಾವಾಗಲೂ ಒತ್ತಡ ಇರುತ್ತದೆ. ಪ್ರತಿ ಸರಣಿಯಲ್ಲೂ ಒತ್ತಡ ಇರುತ್ತದೆ. ನ್ಯೂಜಿಲೆಂಡ್ ಸರಣಿಗೆ ಮೊದಲು ಈ ಪ್ರಶ್ನೆಯನ್ನು ಕೇಳಿದ್ದರೆ, ನಾನು ಇನ್ನೂ ಒತ್ತಡವಿದೆ ಎಂದು ಹೇಳುತ್ತಿದ್ದೆ’ ಎಂದರು.

IND vs ENG: ಇಂಗ್ಲೆಂಡ್‌ ಪ್ರವಾಸಕ್ಕೂ ಮುನ್ನ ಗಿಲ್, ಗಂಭೀರ್ ಪತ್ರಿಕಾಗೋಷ್ಠಿಯ ಹೈಲೈಟ್ಸ್ ಇಲ್ಲಿದೆ

ಬುಮ್ರಾ ಬಗ್ಗೆ ಗಂಭೀರ್ ಹೇಳಿದ್ದೇನು?

ಇನ್ನು ಇಂಗ್ಲೆಂಡ್‌ ಪ್ರವಾಸದಲ್ಲಿ ಜಸ್ಪ್ರೀತ್ ಬುಮ್ರಾ ಕೇವಲ 3 ಪಂದ್ಯಗಳನ್ನು ಮಾತ್ರ ಆಡುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಗೌತಮ್ ಗಂಭೀರ್, ಬುಮ್ರಾ ಯಾವ ಮೂರು ಟೆಸ್ಟ್‌ಗಳನ್ನು ಆಡುತ್ತಾರೆ ಎಂಬುದನ್ನು ನಿರ್ಧರಿಸಲಾಗಿಲ್ಲ. ಸರಣಿಯ ಸ್ಥಿತಿಯನ್ನು ನೋಡಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ನಮ್ಮಲ್ಲಿ ಗುಣಮಟ್ಟದ ಬೌಲರ್‌ಗಳಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿಯೂ ಸಹ, ಟೀಂ ಇಂಡಿಯಾ ಅವರಿಲ್ಲದೆ ಉತ್ತಮ ಪ್ರದರ್ಶನ ನೀಡುವ ಸಾಮರ್ಥ್ಯವನ್ನು ತೋರಿಸಿತ್ತು, ಈ ಬಾರಿಯೂ ಅವರು ಅದೇ ರೀತಿ ಮಾಡಬೇಕಾಗುತ್ತದೆ ಎಂದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:11 pm, Thu, 5 June 25

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?