AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಶತಕವಿಲ್ಲ, ಇತ್ತ ರನ್​ಗಳು ಬರುತಿಲ್ಲ; ಮುಗಿಯಿತಾ ಕೊಹ್ಲಿ ಕೆರಿಯರ್? 3 ವರ್ಷದ ಲೆಕ್ಕಾಚಾರ ಹೀಗಿದೆ

Virat Kohli: ವಿರಾಟ್ ಕೊನೆಯ ಬಾರಿಗೆ ಶತಕ ಸಿಡಿಸಿದ ನಂತರ 18 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ 31 ಬಾರಿ ಬ್ಯಾಟ್ ಮಾಡಿದ ಅವರು ಕೇವಲ 6 ಬಾರಿ ಮಾತ್ರ 50ರ ಗಡಿ ದಾಟಲು ಸಾಧ್ಯವಾಗಿದೆ.

Virat Kohli: ಶತಕವಿಲ್ಲ, ಇತ್ತ ರನ್​ಗಳು ಬರುತಿಲ್ಲ; ಮುಗಿಯಿತಾ ಕೊಹ್ಲಿ ಕೆರಿಯರ್? 3 ವರ್ಷದ ಲೆಕ್ಕಾಚಾರ ಹೀಗಿದೆ
Virat Kohli
TV9 Web
| Edited By: |

Updated on: Jul 02, 2022 | 6:05 PM

Share

ವಿರಾಟ್ ಕೊಹ್ಲಿ (Virat Kohli) ಅವರ ಕಳಪೆ ಫಾರ್ಮ್ ಮುಂದುವರೆದಿದೆ. ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ (Team India)ದ ಮಾಜಿ ನಾಯಕ 19 ಎಸೆತಗಳಲ್ಲಿ 11 ರನ್ ಗಳಿಸಿ ಔಟಾದರು. ಮ್ಯಾಥ್ಯೂ ಪಾಟ್ಸ್ ಬೌಲಿಂಗ್ ನಲ್ಲಿ ಪೆವಿಲಿಯನ್ ಸೇರಿದರು. ಕುತೂಹಲಕಾರಿಯಾಗಿ, ಪ್ಯಾಟ್ಸ್ ತನ್ನ ವೃತ್ತಿಜೀವನದ ಎರಡನೇ ಸರಣಿಯನ್ನು ಮಾತ್ರ ಆಡುತ್ತಿದ್ದಾರೆ. ಸುಮಾರು ಮೂರು ವರ್ಷಗಳಿಂದ ವಿರಾಟ್ ಈ ವೈಫಲ್ಯದಿಂದ ಬಳಲುತ್ತಿದ್ದಾರೆ. ವಿರಾಟ್ ಕೊಹ್ಲಿ ಕೊನೆಯ ಬಾರಿಗೆ 23 ನವೆಂಬರ್ 2019 ರಂದು ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ನಲ್ಲಿ ಶತಕ ಬಾರಿಸಿದ್ದರು. ಅಂದಿನಿಂದ ಅವರು ಯಾವುದೇ ಮಾದರಿಯ ಕ್ರಿಕೆಟ್‌ನಲ್ಲಿ ಒಂದೇ ಒಂದು ಶತಕವನ್ನು ದಾಖಲಿಸಲು ಸಾಧ್ಯವಾಗಲಿಲ್ಲ. ಅಂದರೆ ಒಟ್ಟು 954 ದಿನಗಳು ಕಳೆದಿವೆ. ಹೀಗಿರುವಾಗ ವಿರಾಟ್ ಕೊಹ್ಲಿಯ ಕ್ರಿಕೆಟಿಗನ ಕೆರಿಯರ್ ಮುಗಿಯಿತೇ ಎಂಬ ಪ್ರಶ್ನೆಯೂ ಶುರುವಾಗಿದೆ. ಅವರ ವೃತ್ತಿಜೀವನ ಮುಗಿದಿದೆಯೇ? ಈ ಬಗ್ಗೆ ಅಂಕಿಅಂಶಗಳು ಏನು ಹೇಳುತ್ತವೆ ಎಂದು ನೋಡೋಣ.

18 ಟೆಸ್ಟ್‌ಗಳಲ್ಲಿ 852 ರನ್

ವಿರಾಟ್ ಕೊನೆಯ ಬಾರಿಗೆ ಶತಕ ಸಿಡಿಸಿದ ನಂತರ 18 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ 31 ಬಾರಿ ಬ್ಯಾಟ್ ಮಾಡಿದ ಅವರು ಕೇವಲ 6 ಬಾರಿ ಮಾತ್ರ 50ರ ಗಡಿ ದಾಟಲು ಸಾಧ್ಯವಾಯಿತು. ಈ ವೇಳೆ ಕೊಹ್ಲಿ ಕೇವಲ 27.48 ಸರಾಸರಿ ಬ್ಯಾಟ್ ಬೀಸಿದ್ದಾರೆ. ಹಿರಿಯ ಬ್ಯಾಟ್ಸ್‌ಮನ್‌ಗಳ ಪೈಕಿ ಅಜಿಂಕ್ಯ ರಹಾನೆ (24.08) ಮತ್ತು ಚೇತೇಶ್ವರ ಪೂಜಾರ (25.94) ಮಾತ್ರ ಅವರಿಗಿಂತ ಕೆಟ್ಟ ಸರಾಸರಿ ಹೊಂದಿದ್ದಾರೆ. ಹೀಗಾಗಿ ಪೂಜಾರ ಹಾಗೂ ರಹಾನೆ ತಂಡದಿಂದ ಸ್ವಲ್ಪ ದಿನಗಳವರೆಗೆ ಕೋಕ್ ಪಡೆದಿದ್ದರು. ಕೌಂಟಿ ಋತುವಿನಲ್ಲಿ ರಹಾನೆ ವಿಫಲವಾದರೆ, ಪೂಜಾರ ಪುನರಾಗಮನ ಮಾಡಿದರು.

ಇದನ್ನೂ ಓದಿ
Image
IND vs ENG: ಇಂಗ್ಲೆಂಡ್​ನಲ್ಲಿ ರಿಷಬ್ ಪಂತ್-ರವೀಂದ್ರ ಜಡೇಜಾ ಜೊತೆಯಾಟಕ್ಕೆ ದಾಖಲೆಗಳೆಲ್ಲ ಪುಡಿ ಪುಡಿ!
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

ಮತ್ತೊಂದೆಡೆ, ಈ ಅವಧಿಯಲ್ಲಿ ವಿರಾಟ್‌ಗಿಂತ ಉತ್ತಮ ಪ್ರದರ್ಶನ ನೀಡಿದ ಅನೇಕ ಆಟಗಾರರಿದ್ದಾರೆ. ತಂಡದಲ್ಲಿ ರಿಷಭ್ ಪಂತ್ ಸ್ಥಾನವನ್ನು ಆಗಾಗ್ಗೆ ಪ್ರಶ್ನಿಸಲಾಗುತ್ತದೆ. ಆದರೆ ವಿರಾಟ್ ಅವರ ಕಳೆದ ಶತಕದಿಂದ, ಪಂತ್ ಭಾರತದ ಪರ ಹೆಚ್ಚಿನ ರನ್ ಗಳಿಸಿದ ಆಟಗಾರರಾಗಿದ್ದಾರೆ. ಈ ಅವಧಿಯಲ್ಲಿ ಅವರು 20 ಟೆಸ್ಟ್‌ಗಳಲ್ಲಿ 42.32 ಸರಾಸರಿಯಲ್ಲಿ 1,312 ರನ್ ಗಳಿಸಿದರು. ಇದರಲ್ಲಿ ಮೂರು ಶತಕ ಮತ್ತು 7 ಅರ್ಧಶತಕಗಳು ಸೇರಿದ್ದವು. ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ಶುಭಮನ್ ಗಿಲ್ ಕೂಡ ವಿರಾಟ್‌ಗಿಂತ ಉತ್ತಮ ಸರಾಸರಿ ಹೊಂದಿದ್ದಾರೆ.

ಭಾರತ ತಂಡದಲ್ಲಿ ಸ್ಥಾನ ಪಡೆಯಲು ದೇಶದೆಲ್ಲೆಡೆಯ ಬ್ಯಾಟ್ಸ್​ಮನ್​ಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ವಿರಾಟ್ ಎಷ್ಟು ದಿನ ತನ್ನ ಸ್ಥಾನವನ್ನು ಉಳಿಸಿಕೊಳ್ಳಬಹುದು? ಹಾಗೆಯೇ ಪೂಜಾರ ಮತ್ತು ರಹಾನೆಯನ್ನು ಕಳಪೆ ಫಾರ್ಮ್​ನಿಂದ ತಂಡದಿಂದ ಹೊರಗಿಟ್ಟಿರುವಾಗ ವಿರಾಟ್​ಗೆ ಮಾತ್ರ ಏಕೆ ಅವಕಾಶ ಎಂಬ ಪ್ರಶ್ನೆಗಳೂ ಕೇಳಿಬರುತ್ತಿವೆ.

ಏಕದಿನ ಪಂದ್ಯದಲ್ಲೂ ಅದೇ ಕಥೆ

23 ನವೆಂಬರ್ 2019 ರಿಂದ, ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅವರ ಬ್ಯಾಟ್ ಅಲುಗಾಡುತ್ತಿದೆ. ಈ ಸಮಯದಲ್ಲಿ ಅವರು 21 ODI ಪಂದ್ಯಗಳನ್ನು ಆಡಿದ್ದು, 37.66 ಸರಾಸರಿಯಲ್ಲಿ 791 ರನ್ ಗಳಿಸಿದರು. ಇದರಲ್ಲಿ 10 ಅರ್ಧ ಶತಕಗಳಿವೆ. ಆದರೆ, ಒಂದು ಶತಕವೂ ಇಲ್ಲ ಎಂಬುದು ಗಮನಾರ್ಹ.

ಆಫ್-ಸ್ಟಂಪ್‌ನ ಹೊರಗೆ ಎಸೆದ ಚೆಂಡುಗಳೊಂದಿಗೆ ಹೋರಾಡುವ ವಿರಾಟ್, 2018 ರ ಇಂಗ್ಲೆಂಡ್ ಪ್ರವಾಸದೊಂದಿಗೆ ಈ ಕೊರತೆಯನ್ನು ಬಹುತೇಕ ಮುಚ್ಚಿದರು. ಆದರೆ, ಈಗ ಅದೇ ದೌರ್ಬಲ್ಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ಬಾರಿ ಪರಿಸ್ಥಿತಿ ಬದಲಾಯಿಸಲಾಗದಂತಿದೆ. ಕಳೆದ ಮೂರು ವರ್ಷಗಳಲ್ಲಿ, ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಸುಮಾರು 60 ಪ್ರತಿಶತದಷ್ಟು ಸಮಯವನ್ನು ಆಫ್ ಸ್ಟಂಪ್‌ನ ಹೊರಗೆ ಬೌಲ್ ಮಾಡಿದ ಎಸೆತಗಳಿಗೆ ವಜಾಗೊಂಡಿದ್ದಾರೆ. ಬರ್ಮಿಂಗ್‌ಹ್ಯಾಮ್‌ ಟೆಸ್ಟ್‌ನಲ್ಲೂ ಅದೇ ಆಯಿತು. ಇದರೊಂದಿಗೆ ಈ ಟೆಸ್ಟ್​ನಲ್ಲಾದರೂ ಕೊಹ್ಲಿ ತಮ್ಮ ಕೆಟ್ಟ ಫಾರ್ಮ್​ಗೆ ವಿದಾಯ ಹೇಳಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು