Virat Kohli Covid-19: ಮಾಲ್ಡೀವ್ಸ್​ಗೆ ತೆರಳಿದ್ದ ವಿರಾಟ್ ಕೊಹ್ಲಿಗೆ ಕೊರೊನಾ ಪಾಸಿಟಿವ್..!

IND vs ENG 5th Test: ಮಾಲ್ಡೀವ್ಸ್‌ನಲ್ಲಿ ರಜೆ ಮುಗಿಸಿ ವಾಪಸಾದ ನಂತರ ವಿರಾಟ್ ಕೂಡ ಆಘಾತಕ್ಕೆ ಒಳಗಾಗಿದ್ದರು. ಆದರೆ ಈಗ ಅವರು ಚೇತರಿಸಿಕೊಂಡಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ತಿಳಿಸಿದೆ.

Virat Kohli Covid-19: ಮಾಲ್ಡೀವ್ಸ್​ಗೆ ತೆರಳಿದ್ದ ವಿರಾಟ್ ಕೊಹ್ಲಿಗೆ ಕೊರೊನಾ ಪಾಸಿಟಿವ್..!
ಕೊಹ್ಲಿ
Follow us
| Updated By: ಪೃಥ್ವಿಶಂಕರ

Updated on:Jun 22, 2022 | 11:29 AM

ಜುಲೈ 1 ರಂದು ಬರ್ಮಿಂಗ್‌ಹ್ಯಾಮ್‌ನಲ್ಲಿ ಆರಂಭವಾಗುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ಗೆ ಭಾರತದ ಸಿದ್ಧತೆಗೆ ಅಡ್ಡಿಯಾಗಿದೆ. ಟೀಂ ಇಂಡಿಯಾದ ಕೆಲವು ಆಟಗಾರರಿಗೆ ಕೋವಿಡ್ ಸೋಂಕು ತಗುಲಿದೆ. ತಂಡದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ (Ravichandran Ashwin) ವೈರಸ್ ಸೋಂಕಿಗೆ ಒಳಗಾದ ನಂತರ ಅವರು ಇತರೆ ಸಹ ಆಟಗಾರರೊಂದಿಗೆ ಯುನೈಟೆಡ್ ಕಿಂಗ್‌ಡಮ್‌ಗೆ ಹೋಗಿಲ್ಲ. ಮತ್ತೊಂದೆಡೆ ಅಚ್ಚರಿಯ ಸಂಗತಿಯೊಂದು ಬಯಲಿಗೆ ಬಂದಿದೆ. ವಾಸ್ತವವಾಗಿ, ಕಳೆದ ವಾರ ತಂಡವು ಲಂಡನ್‌ಗೆ ಬಂದಿಳಿದ ನಂತರ, ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಕೂಡ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ‘ಹೌದು, ಮಾಲ್ಡೀವ್ಸ್‌ನಲ್ಲಿ ರಜೆ ಮುಗಿಸಿ ವಾಪಸಾದ ನಂತರ ವಿರಾಟ್ ಕೂಡ ಆಘಾತಕ್ಕೆ ಒಳಗಾಗಿದ್ದರು. ಆದರೆ ಈಗ ಅವರು ಚೇತರಿಸಿಕೊಂಡಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ತಿಳಿಸಿದೆ.

ಸೋಂಕಿನ ಭೀತಿ ಇರುವುದರಿಂದ ಜೂನ್ 24 ರಿಂದ ಲೀಸೆಸ್ಟರ್‌ಶೈರ್ ವಿರುದ್ಧ ಟೀಂ ಇಂಡಿಯಾದ ಅಭ್ಯಾಸ ಪಂದ್ಯವು ಯೋಜಿಸಿದಂತೆ ನಡೆಯದಿರಬಹುದು ಎಂದು ತೋರುತ್ತಿದೆ. ಕೋವಿಡ್ -19 ನಂತರ ಆಟಗಾರರಿಗೆ ಓವರ್‌ಲೋಡ್ ಕೆಲಸ ಮಾಡದಂತೆ ವೈದ್ಯರು ಸಲಹೆ ನೀಡಿದ್ದಾರೆ. ಆದ್ದರಿಂದ ಅಭ್ಯಾಸದಲ್ಲಿ ಹೆಚ್ಚಿನ ಉತ್ಸಾಹ ಇರುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ. ಜುಲೈ 1 ರಿಂದ ಟೆಸ್ಟ್ ಪಂದ್ಯ ಆರಂಭವಾಗುವ ಮೊದಲು ಅವರು ಚೇತರಿಸಿಕೊಳ್ಳುತ್ತಾರೆ ಎಂಬ ಭರವಸೆ ಇದೆ ಎಂದು ಅಶ್ವಿನ್ ಬಗ್ಗೆ ಬಿಸಿಸಿಐ ಅಧಿಕಾರಿ ಹೇಳಿದರು. ಆದರೆ, ಲೀಸೆಸ್ಟರ್‌ಶೈರ್ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಆಡುವುದು ಅನುಮಾನ ಎಂದಿದ್ದಾರೆ.

ಇದನ್ನೂ ಓದಿ:Virat Test Debut: ವಿರಾಟ್ ಟೆಸ್ಟ್ ಬದುಕಿಗೆ ಭರ್ತಿ 11 ವರ್ಷ! ಟೆಸ್ಟ್ ಕ್ರಿಕೆಟ್​ನಲ್ಲಿ ಕೊಹ್ಲಿಯ ಅವಿಸ್ಮರಣೀಯ ಇನ್ನಿಂಗ್ಸ್​ಗಳಿವು

ಇದನ್ನೂ ಓದಿ
Image
Team India: ಇಂಗ್ಲೆಂಡ್ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಔಟ್..!
Image
T20 Blast: ಬ್ಯಾಟ್ಸ್​ಮನ್​ಗೆ ಚೆಂಡೆಸೆದು 5 ರನ್​ಗಳ ಶಿಕ್ಷೆಗೊಳಗಾದ ಬ್ರಾಥ್​ವೇಟ್

ಕೋವಿಡ್ -19 ಸೋಂಕಿನಿಂದ ಕಳೆದ ವರ್ಷ ಸ್ಥಗಿತಗೊಂಡಿದ್ದ ಐದು ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಬರ್ಮಿಂಗ್ಹ್ಯಾಮ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. ಸದ್ಯ ಭಾರತ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಎಡ್ಜ್‌ಬಾಸ್ಟನ್ ಟೆಸ್ಟ್ ನಂತರ ಭಾರತ ಮತ್ತು ಇಂಗ್ಲೆಂಡ್ ಮೂರು ODI ಮತ್ತು T20I ಪಂದ್ಯಗಳನ್ನು ಆಡಲಿವೆ.

ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳಾಪಟ್ಟಿ ಹೀಗಿದೆ:

ಜುಲೈ 1 – 5: ಏಕೈಕ ಟೆಸ್ಟ್ ಪಂದ್ಯ (ಎಡ್ಜ್‌ಬಾಸ್ಟನ್)

ಜುಲೈ 7: ಮೊದಲ ಟಿ20 ಪಂದ್ಯ (ಏಜಿಯಾಸ್ ಬೌಲ್)

ಜುಲೈ 9: 2ನೇ ಟಿ20 ಪಂದ್ಯ (ಎಡ್ಜ್‌ಬಾಸ್ಟನ್)

ಜುಲೈ 10: 3ನೇ ಟಿ20 ಪಂದ್ಯ (ಟ್ರೆಂಟ್ ಬ್ರಿಡ್ಜ್)

ಏಕದಿನ ಸರಣಿ ವೇಳಾಪಟ್ಟಿ:

ಜುಲೈ 12- ಮೊದಲ ಏಕದಿನ ಪಂದ್ಯ (ಕಿಯಾ ಓವಲ್)

ಜುಲೈ 14- 2ನೇ ಏಕದಿನ ಪಂದ್ಯ (ಲಾರ್ಡ್ಸ್)

ಜುಲೈ 17- 3ನೇ ಏಕದಿನ ಪಂದ್ಯ (ಮ್ಯಾಂಚೆಸ್ಟರ್)

ಭಾರತೀಯ ಟೆಸ್ಟ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ , ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಪ್ರಸಿಧ್ದ್ ಕೃಷ್ಣ.

Published On - 11:27 am, Wed, 22 June 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ