AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber ​​Crime: ಸೈಬರ್ ವಂಚಕರಿಂದ 1 ಲಕ್ಷ ರೂ. ಕಳೆದುಕೊಂಡ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ! ದೂರು ದಾಖಲು

Cyber ​​Crime: ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರನ್ನು ವಂಚಿಸಿ ಸೈಬರ್ ದರೋಡೆಕೋರರು ಹಣ ಲೂಟಿ ಮಾಡಿದ್ದಾರೆ. ಕೆವೈಸಿ ಡೇಟಾ ಅಪ್‌ಡೇಟ್ ಮಾಡುವ ಹೆಸರಿನಲ್ಲಿ ಅವರ ಖಾತೆಯಿಂದ 1.1 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ.

Cyber ​​Crime: ಸೈಬರ್ ವಂಚಕರಿಂದ 1 ಲಕ್ಷ ರೂ. ಕಳೆದುಕೊಂಡ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ! ದೂರು ದಾಖಲು
ವಿನೋದ್ ಕಾಂಬ್ಳಿ
TV9 Web
| Edited By: |

Updated on:Dec 10, 2021 | 3:56 PM

Share

ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರನ್ನು ವಂಚಿಸಿ ಸೈಬರ್ ದರೋಡೆಕೋರರು ಹಣ ಲೂಟಿ ಮಾಡಿದ್ದಾರೆ. ಕೆವೈಸಿ ಡೇಟಾ ಅಪ್‌ಡೇಟ್ ಮಾಡುವ ಹೆಸರಿನಲ್ಲಿ ಅವರ ಖಾತೆಯಿಂದ 1.1 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಕಾಂಬ್ಳಿ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ಅಧಿಕಾರಿಯ ಪ್ರಕಾರ, ಒಬ್ಬ ವ್ಯಕ್ತಿ ತಾನು ಬ್ಯಾಂಕ್ ಅಧಿಕಾರಿ ಎಂದು ಹೇಳಿ ಕಾಂಬ್ಳಿಗೆ ಕರೆ ಮಾಡಿದ್ದಾನೆ. ಅವರ KYC ಡೇಟಾವನ್ನು ನವೀಕರಿಸುವ ಅಗತ್ಯತೆಯ ಬಗ್ಗೆಯೂ ಆತ ಮಾತನಾಡಿದ್ದಾನೆ. ನಂತರ ಆತ ಆ್ಯಪ್ ಡೌನ್​ಲೌಡ್ ಮಾಡಿಕೊಳ್ಳುವಂತೆ ಕಾಂಬ್ಳಿಯನ್ನು ಕೇಳಿಕೊಂಡಿದ್ದಾನೆ. ನಂತರ ಆ್ಯಪ್‌ನಲ್ಲಿ ಡೇಟಾ ಅಪ್‌ಲೋಡ್ ಮಾಡಿದ ತಕ್ಷಣ ಕಾಂಬ್ಳಿ ಅವರ ಮೊಬೈಲ್‌ಗೆ ರಿಮೋಟ್ ಆಕ್ಸೆಸ್ ಪಡೆದುಕೊಂಡು ಬ್ಯಾಂಕ್‌ನಿಂದ ಒನ್‌ಟೈಮ್ ಪಾಸ್‌ವರ್ಡ್ ಪಡೆದು 1.1 ಲಕ್ಷ ರೂ. ದೋಚಿದ್ದಾರೆ.

ಹಣ ಹಿಂಪಡೆದ ತಕ್ಷಣ ಕಾಂಬ್ಳಿಗೆ ಎಚ್ಚರಿಕೆ ಸಂದೇಶ ಬಂದಿದೆ. ಮೋಸ ಹೋದ ಕಾಂಬ್ಳಿ ಕೂಡಲೇ ಕಸ್ಟಮರ್ ಕೇರ್​ಗೆ ಮಾಹಿತಿ ನೀಡಿ ಬ್ಯಾಂಕ್ ಖಾತೆಯನ್ನು ಕ್ಲೋಸ್ ಮಾಡಿದ್ದಾರೆ. ಈ ವೇಳೆ ಕಾಂಬ್ಳಿ ಖಾತೆಯಿಂದ ಯಾರ ಖಾತೆಗೆ ಹಣ ವರ್ಗಾವಣೆಯಾಗಿದೆ ಎಂಬುದನ್ನು ಪತ್ತೆ ಹಚ್ಚುವ ಕಾರ್ಯವನ್ನು ಪೊಲೀಸರು ನಡೆಸುತ್ತಿದ್ದಾರೆ.

ಕ್ರಿಕೆಟ್​ನಲ್ಲಿ ಕಾಂಬ್ಳಿ ಸಾಧನೆ ODIಗಳಲ್ಲಿ 32.59 ಸರಾಸರಿ ಹೊಂದಿರುವ ವಿನೋದ್ ಕಾಂಬ್ಳಿ, ಭಾರತಕ್ಕಾಗಿ 17 ಟೆಸ್ಟ್‌ಗಳಲ್ಲಿ 54.2 ರ ಸರಾಸರಿಯಲ್ಲಿ 1,084 ರನ್ ಗಳಿಸಿದ್ದಾರೆ. ಅವರು 104 ODIಗಳಲ್ಲಿ 32.59 ಸರಾಸರಿಯಲ್ಲಿ 2,477 ರನ್ ಗಳಿಸಿದರು. ಮಾಜಿ ಕ್ರಿಕೆಟ್ ಆಟಗಾರರಾಗಿರುವ ವಿನೋದ್ ಕಾಂಬ್ಳಿ ಸಚಿನ್ ತೆಂಡೊಲ್ಕರ್ ಜೊತೆಗೆ ಶಾಲಾ ಕ್ರಿಕೆಟ್​ನಲ್ಲಿ 664 ರನ್​ಗಳ ಜೊತೆಯಾಟ ಆಡಿ ಪ್ರಸಿದ್ಧಿ ಹೊಂದಿದ್ದರು, ಆದರೆ ಅವರು ತಮ್ಮ ನಿರೀಕ್ಷಿತ ಸಾಧನೆಯ ಮಟ್ಟವನ್ನು ತಲುಪಲಿಲ್ಲ.

Published On - 3:54 pm, Fri, 10 December 21

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್