AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ವರ್ಷಗಳ ಬಳಿಕ ವೀರೇಂದ್ರ ಸೆಹ್ವಾಗ್ ದಾಂಪತ್ಯದಲ್ಲಿ ಬಿರುಕು?

Virender Sehwag and Aarti: ಟೀಮ್ ಇಂಡಿಯಾದ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸುದ್ದಿಯಲ್ಲಿರುವುದು ಪತ್ನಿ ಆರತಿ ಅವರಿಂದ ಡೈವೋರ್ಸ್ ಪಡೆಯಲಿದ್ದಾರೆ ಎಂಬ ಕಾರಣಕ್ಕೆ. ಸೆಹ್ವಾಗ್-ಆರತಿ ಕಳೆದ ಕೆಲ ತಿಂಗಳುಗಳಿಂದ ಪತ್ಯೇಕವಾಗಿ ವಾಸಿಸುತ್ತಿದ್ದು, ಶೀಘ್ರದಲ್ಲೇ ಈ ದಂಪತಿಗಳು ವಿಚ್ಛೇದನ ಪಡೆಯಲಿದ್ದಾರೆ ಎಂದು ವರದಿಯಾಗಿದೆ.

21 ವರ್ಷಗಳ ಬಳಿಕ ವೀರೇಂದ್ರ ಸೆಹ್ವಾಗ್ ದಾಂಪತ್ಯದಲ್ಲಿ ಬಿರುಕು?
Virender Sehwag Aarti Sehwag
ಝಾಹಿರ್ ಯೂಸುಫ್
|

Updated on: Jan 25, 2025 | 8:09 AM

Share

ಟೀಮ್ ಇಂಡಿಯಾ ಆಟಗಾರ ಯುಜ್ವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ವಿಚ್ಛೇದನ ವದಂತಿಗಳ ಬೆನ್ನಲ್ಲೇ, ಇದೀಗ ಭಾರತ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ವೈವಾಹಿಕ ಜೀವನಕ್ಕೆ ಇತಿಶ್ರೀ ಹಾಡಲು ಮುಂದಾಗಿದ್ದಾರೆ ಎಂಬ ಸುದ್ದಿಯೊಂದು ಕೇಳಿ ಬಂದಿದೆ. ಸೆಹ್ವಾಗ್ ಹಾಗೂ ಪತ್ನಿ ಆರತಿ 21 ವರ್ಷಗಳ ತಮ್ಮ ದಾಂಪತ್ಯ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದು, ಹೀಗಾಗಿ ಇಬ್ಬರು ಪತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಡ್ಯಾಶಿಂಗ್ ಓಪನರ್ ದೂರ ದೂರು:

ಟೀಮ್ ಇಂಡಿಯಾದ ಡ್ಯಾಶಿಂಗ್ ಓಪನರ್ ಅಗಿದ್ದ ವೀರೇಂದ್ರ ಸೆಹ್ವಾಗ್ 2004 ರಲ್ಲಿ ಆರತಿ ಅವರನ್ನು ವಿವಾಹವಾಗಿದ್ದರು. ಆದರೆ ಈಗ ಸುಮಾರು 21 ವರ್ಷಗಳ ನಂತರ ಅವರ ಸಂಬಂಧವು ಮುರಿದು ಬೀಳುವ ಹಂತಕ್ಕೆ ಬಂದು ನಿಂತಿದೆ. ಇಬ್ಬರು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ್ದಾರೆ.

ಅಷ್ಟೇ ಅಲ್ಲದೆ ಸೆಹ್ವಾಗ್ ಅವರ ಇತ್ತೀಚಿನ ಪೋಸ್ಟ್‌ಗಳು ಮತ್ತು ಅಪ್‌ಡೇಟ್‌ಗಳಲ್ಲಿ ಸಹ ಅವರ ಪತ್ನಿಯೊಂದಿಗೆ ಯಾವುದೇ ಚಿತ್ರವಿಲ್ಲ. ದೀಪಾವಳಿ ವೇಳೆಯೂ ಕೂಡ ಮಕ್ಕಳು ಮತ್ತು ತಾಯಿ ಜೊತೆಗಿರುವ ಫೋಟೋಗಳನ್ನು ಪೋಸ್ಟ್ ಹಂಚಿಕೊಂಡರೂ, ಪತ್ನಿ ಜತೆಗಿನ ಫೋಟೋವನ್ನು ಶೇರ್ ಮಾಡಿರಲಿಲ್ಲ. ಅತ್ತ ಆರತಿ ಕೂಡ ಮಕ್ಕಳೊಂದಿಗಿನ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ ವಿನಃ, ವೀರೇಂದ್ರ ಸೆಹ್ವಾಗ್ ಜೊತೆಗಿನ ಯಾವುದೇ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿಲ್ಲ.

ಅಷ್ಟೇ ಅಲ್ಲದೆ ಇಬ್ಬರು ಕೆಲ ಸಮಯದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಅಲ್ಲದೆ ಈಗಾಗಲೇ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಶೀಘ್ರದಲ್ಲೇ ಸೆಲೆಬ್ರಿಟಿ ದಂಪತಿ ಕಾನೂನು ಪ್ರಕಾರ ದೂರವಾಗಲಿದ್ದಾರೆ ಎಂದು ವರದಿಯಾಗಿದೆ.

ಪ್ರೀತಿ ಪ್ರೇಮ ವಿವಾಹ:

1999ರಲ್ಲಿ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ವೃತ್ತಿ ಜೀವನ ಆರಂಭಿಸಿದ ವೀರೇಂದ್ರ ಸೆಹ್ವಾಗ್, 2004ರ ಏಪ್ರಿಲ್‌ನಲ್ಲಿ ಆರತಿ ಅಹ್ಲಾವತ್‌ರನ್ನು ಪ್ರೀತಿಸಿ ವಿವಾಹವಾದರು. ಅರಂಭದಲ್ಲಿ ಇಬ್ಬರ ಪ್ರೇಮ ವಿವಾಹಕ್ಕೆ ಕುಟುಂಬಸ್ಥರಿಂದ ಒಪ್ಪಿಗೆ ಇರಲಿಲ್ಲ.

ಇದಕ್ಕೆ ಮುಖ್ಯ ಕಾರಣ, ಸೆಹ್ವಾಗ್ ಹಾಗೂ ಆರತಿ ಕುಟುಂಬಗಳು ದೂರದ ಸಂಬಂಧಿಗಳು. ಇದಾಗ್ಯೂ ಕೆಲ ಸಮಯದ ನಂತರ ಕುಟುಂಬಸ್ಥರನ್ನು ಒಪ್ಪಿಸುವಲ್ಲಿ ಇಬ್ಬರೂ ಯಶಸ್ವಿಯಾದರು.

ಇದನ್ನೂ ಓದಿ: ಸಿಕ್ಸ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಕೀರನ್ ಪೊಲಾರ್ಡ್ ವಿಶ್ವ ದಾಖಲೆ

ವಿಶೇಷ ಎಂದರೆ ವಿರೇಂದ್ರ ಸೆಹ್ವಾಗ್ ಮುಲ್ತಾನ್​ನಲ್ಲಿ ಪಾಕಿಸ್ತಾನ್ ವಿರುದ್ಧದ ತ್ರಿಶತಕ ಸಿಡಿಸಿದ ಒಂದೇ ತಿಂಗಳಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅಂದು ಇದು ಭಾರೀ ಸುದ್ದಿಯಾಗಿತ್ತು. ಇದೀಗ ಪ್ರೀತಿಸಿ ವಿವಾಹವಾಗಿದ್ದ ಜೋಡಿಯು ದೂರವಾಗಲು ನಿರ್ಧರಿಸಿದ್ದಾರೆ ಎಂದು ವರಿಯಲ್ಲಿ ತಿಳಿಸಲಾಗಿದೆ.

ದಂಪತಿಗೆ ಇಬ್ಬರು ಪುತ್ರರು:

ವೀರೇಂದ್ರ ಸೆಹ್ವಾಗ್ ಹಾಗೂ ಆರತಿ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಆರ್ಯವೀರ್ ಮತ್ತು ವೇದಾಂತ್ ಹೆಸರಿನ ಇಬ್ಬರು ಪುತ್ರರೂ ಕ್ರಿಕೆಟ್‌ನಲ್ಲಿ ಸಕ್ರಿಯರಾಗಿದ್ದಾರೆ.

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!