AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England 2nd Test: ಇಂಗ್ಲೆಂಡ್​ಗೆ ಭಯ ಶುರು: 7 ವರ್ಷಗಳ ಹಿಂದಿನಂತಿದೆ ಈಗಿನ ಪಂದ್ಯ..!

Team India: ಭಾರತ 364 ರನ್​ ಕಲೆಹಾಕಿದರೆ, ಇಂಗ್ಲೆಂಡ್ ತಂಡವು 391 ರನ್ ಪೇರಿಸಿದೆ. ಮೊದಲ ಇನಿಂಗ್ಸ್​ನಲ್ಲಿ ಭಾರತದ ಪರ ಕೆಎಲ್ ರಾಹುಲ್ ಶತಕ ಸಿಡಿಸಿ ನೆರವಾಗಿದ್ದರು.

India vs England 2nd Test: ಇಂಗ್ಲೆಂಡ್​ಗೆ ಭಯ ಶುರು: 7 ವರ್ಷಗಳ ಹಿಂದಿನಂತಿದೆ ಈಗಿನ ಪಂದ್ಯ..!
Virat kohli
TV9 Web
| Edited By: |

Updated on: Aug 15, 2021 | 3:54 PM

Share

ಕ್ರಿಕೆಟ್ ಕಾಶಿ ಎಂದು ಕರೆಯಲ್ಪಡುವ ಲಾರ್ಡ್ಸ್​ ಮೈದಾನದಲ್ಲಿ ಇಂಗ್ಲೆಂಡ್ (England) ತಂಡದ್ದೇ ಪಾರುಪತ್ಯ. ಶತಮಾನಗಳಿಂದ ಈ ಮೈದಾನದಲ್ಲಿ ಇಂಗ್ಲೆಂಡ್ ತಂಡವು ಮೇಲುಗೈ ಸಾಧಿಸುತ್ತಾ ಬಂದಿದೆ. ಇದಕ್ಕೆ ಸಾಕ್ಷಿಯೇ ಇಲ್ಲಿ ಆಡಿದ 140 ಟೆಸ್ಟ್ ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡ 55 ಗೆಲುವು ದಾಖಲಿಸಿರುವುದು. ಹಾಗೆಯೇ 51 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಪ್ರವಾಸಿ ತಂಡ ಲಾರ್ಡ್ಸ್​ನಲ್ಲಿ ಗೆದ್ದಿರುವುದು ಕೇವಲ 32 ಪಂದ್ಯಗಳಲ್ಲಿ ಮಾತ್ರ. ಅಂದರೆ ಈ ಮೈದಾನದಲ್ಲಿ ಇಂಗ್ಲೆಂಡ್ ತಂಡವು 140 ಪಂದ್ಯಗಳಲ್ಲಿ 106 ಮ್ಯಾಚ್​ಗಳಲ್ಲಿ ಮೇಲುಗೈ ಸಾಧಿಸಿದೆ. ಇದಾಗ್ಯೂ ಇದೀಗ ಇಂಗ್ಲೆಂಡ್ ತಂಡಕ್ಕೆ ಸಣ್ಣ ಭಯವೊಂದು ಶುರುವಾಗಿದೆ. ಏಕೆಂದರೆ ಪ್ರಸ್ತುತ ನಡೆಯುತ್ತಿರುವ ಪಂದ್ಯವು 7 ವರ್ಷಗಳ ಹಿಂದಿನ ಟೀಮ್ ಇಂಡಿಯಾ (India vs England 2nd Test) ಪ್ರದರ್ಶನಕ್ಕೆ ಸಾಮ್ಯತೆ ಹೊಂದಿರುವುದು.

ಈಗ ನಡೆಯುತ್ತಿರುವ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಭಾರತ 364 ರನ್​ ಕಲೆಹಾಕಿದರೆ, ಇಂಗ್ಲೆಂಡ್ ತಂಡವು 391 ರನ್ ಪೇರಿಸಿದೆ. ಮೊದಲ ಇನಿಂಗ್ಸ್​ನಲ್ಲಿ ಭಾರತದ ಪರ ಕೆಎಲ್ ರಾಹುಲ್ ಶತಕ ಸಿಡಿಸಿ ನೆರವಾಗಿದ್ದರು. ಇತ್ತ ನಾಯಕ ಜೋ ರೂಟ್ ಅಜೇಯ 180 ರನ್​ ಬಾರಿಸಿ ಇಂಗ್ಲೆಂಡ್​ 27 ರನ್​ಗಳ ಮುನ್ನಡೆ ತಂದುಕೊಟ್ಟಿದ್ದಾರೆ. ಇದೀಗ ದ್ವಿತೀಯ ಇನಿಂಗ್ಸ್​ ಆರಂಭವಾಗಿದೆ. ಇನ್ನು 2 ದಿನದಾಟ ಬಾಕಿ ಉಳಿದಿವೆ. ಇದರ ಬೆನ್ನಲ್ಲೇ 2014ರ ಟೀಮ್ ಇಂಡಿಯಾ ಪ್ರದರ್ಶನದ ಅಂಕಿ ಅಂಶಗಳು ಮುನ್ನಲೆಗೆ ಬಂದಿದೆ.

ಹೌದು, 2014 ರಲ್ಲಿ ಭಾರತ ಹಾಗೂ ಇಂಗ್ಲೆಂಡ್ ಲಾರ್ಡ್ಸ್​ ಮೈದಾನದಲ್ಲಿ ಟೆಸ್ಟ್ ಪಂದ್ಯವನ್ನಾಡಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 295 ರನ್ ಕಲೆಹಾಕಿತ್ತು. ಈ ವೇಳೆ ಭಾರತ ತಂಡಕ್ಕೆ ಅಜಿಂಕ್ಯ ರಹಾನೆ 103 ರನ್ ಬಾರಿಸಿ ನೆರವಾಗಿದ್ದರು. ಇನ್ನು ಭಾರತ ನೀಡಿದ ಗುರಿಗೆ ಪ್ರತಿಯಾಗಿ ಇಂಗ್ಲೆಂಡ್ ತಂಡವು ಮೊದಲ ಇನ್ನಿಂಗ್ಸ್ ನಲ್ಲಿ 319 ರನ್ ಗಳಿಸಿತು. ಅಂದರೆ, ಅಂದು 24 ರನ್​ಗಳ ಮುನ್ನಡೆ ಪಡೆದುಕೊಂಡಿದ್ದರು.

ಆದರೆ ಎರಡನೇ ಇನ್ನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಕಂಬ್ಯಾಕ್ ಮಾಡಿತು. ಮುರಳಿ ವಿಜಯ್, ಭುವನೇಶ್ವರ್ ಕುಮಾರ್ ಮತ್ತು ರವೀಂದ್ರ ಜಡೇಜಾ ಅವರ ಅರ್ಧಶತಕಗಳ ನೆರವಿನಿಂದ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ  342 ರನ್ ಕಲೆಹಾಕಿತು. ಈ ಮೂಲಕ ಇಂಗ್ಲೆಂಡ್​ಗೆ 319 ರನ್ ಗಳ ಗುರಿ ನೀಡಿತು. ಆದರೆ ಆತಿಥೇಯರು ಎರಡನೇ ಇನ್ನಿಂಗ್ಸ್ ನಲ್ಲಿ ಕೇವಲ 223 ರನ್ ಗಳಿಗೆ ಆಲೌಟಾದರು. ಈ ಪಂದ್ಯವನ್ನು ಟೀಮ್ ಇಂಡಿಯಾ 95 ರನ್​ಗಳಿಂದ ಗೆದ್ದುಕೊಂಡಿತು.

ಎರಡನೇ ಇನ್ನಿಂಗ್ಸ್‌ನಲ್ಲಿ ವೇಗದ ಬೌಲರ್ ಇಶಾಂತ್ ಶರ್ಮಾ 7 ವಿಕೆಟ್ ಪಡೆದು ಮಿಂಚಿದ್ದರು. ಅಲ್ಲದೆ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಕಬಳಿಸಿದ್ದರು. ಇದೀಗ ಕಾಕತಾಳೀಯ ಎಂಬಂತೆ ಪ್ರಸ್ತುತ ಟೆಸ್ಟ್​ನಲ್ಲಿ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾದ ಒಬ್ಬ ಆಟಗಾರನಿಂದ (ಕೆಎಲ್ ರಾಹುಲ್) ಶತಕ ಮೂಡಿಬಂದಿದೆ. ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ ಕಡಿಮೆ ಮೊತ್ತದ ಮುನ್ನಡೆ ಪಡೆದಿದೆ. ಇತ್ತ ಇಶಾಂತ್ ಶರ್ಮಾ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಕಬಳಿಸಿದ್ದಾರೆ.

ಈ ಅಂಕಿ ಅಂಶಗಳು ಮುನ್ನೆಲೆಗೆ ಬರುತ್ತಿದ್ದಂತೆ 7 ವರ್ಷಗಳ ಹಿಂದಿನಂತೆ ಈ ಬಾರಿ ಕೂಡ ಟೀಮ್ ಇಂಡಿಯಾ ಅಂತಿಮ ಎರಡು ದಿನಗಳ ದಿನದಾಟದಲ್ಲಿ ಕಂಬ್ಯಾಕ್ ಮಾಡಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಹಾಗೆಯೇ ಇಂಗ್ಲೆಂಡ್​ನ ಅದೃಷ್ಟದ ಮೈದಾನ ಲಾರ್ಡ್ಸ್​ನಲ್ಲೇ ಆತಿಥೇಯರಿಗೆ ಕೊಹ್ಲಿ ಪಡೆ ಮಣ್ಣು ಮುಕ್ಕಿಸಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಒಟ್ಟಿನಲ್ಲಿ 2ನೇ ಟೆಸ್ಟ್ ಪಂದ್ಯವು ರೋಚಕಘಟ್ಟದತ್ತ ಸಾಗುತ್ತಿದ್ದು, ನಾಲ್ಕನೇ ದಿನದಾಟದ ಮುಕ್ತಾಯದ ವೇಳೆ ಈ ಪಂದ್ಯದ ಫಲಿತಾಂಶ ಏನಾಗಲಿದೆ ಎಂಬುದಕ್ಕೆ ಸ್ಪಷ್ಟತೆ ಸಿಗಲಿದೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್: ಟೀಮ್ ಇಂಡಿಯಾ- ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್

ಇಂಗ್ಲೆಂಡ್ – ರೋರಿ ಬರ್ನ್ಸ್, ಡೊಮ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್, ಜಾನಿ ಬೈರ್‌ಸ್ಟೊ, ಜೋಸ್ ಬಟ್ಲರ್, ಮೊಯೀನ್ ಅಲಿ, ಸ್ಯಾಮ್ ಕರನ್, ಓಲಿ ರಾಬಿನ್ಸನ್, ಮಾರ್ಕ್ ವುಡ್, ಜೇಮ್ಸ್ ಅಂಡರ್ಸನ್

ಇದನ್ನೂ ಓದಿ: India vs England 2nd Test: ಅಂದು ದಾದಾ, ಇಂದು ಕೊಹ್ಲಿ: ಲಾರ್ಡ್ಸ್​ ಬಾಲ್ಕನಿಯಲ್ಲಿ ಕ್ಯಾಪ್ಟನ್ ಡ್ಯಾನ್ಸ್​

ಇದನ್ನೂ ಓದಿ: Health Tips: ಹಲವು ಅನಾರೋಗ್ಯ ಸಮಸ್ಯೆಗಳಿಗೆ ಪಪ್ಪಾಯಿ ಎಲೆಗಳೇ ಔಷಧಿ

ಇದನ್ನೂ ಓದಿ: ಇವರ ಬ್ಯಾಟಿಂಗ್ ಮುಂದೆ, ಗೇಲ್-ಎಬಿಡಿ-ಸೆಹ್ವಾಗ್ ಏನೂ ಅಲ್ಲ: ವಿಶ್ವದ ಅತೀ ವೇಗದ ಶತಕದ ಸರದಾರ

ಇದನ್ನೂ ಓದಿ: Kl Rahul: ಪೂಜಾರ, ರಹಾನೆ ಕಳಪೆ ಫಾರ್ಮ್​ ಬಗ್ಗೆ ಕೆಎಲ್ ರಾಹುಲ್ ಹೇಳಿದ್ದೇನು?

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ