AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಜೆರ್ಸಿಯಲ್ಲಿ ಪಾಕಿಸ್ತಾನದ ಹೆಸರು; ಬಿಸಿಸಿಐ ಮಹತ್ವದ ನಿರ್ಧಾರ

Team India Jersey Controversy Resolved: ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡದ ಜೆರ್ಸಿಯಲ್ಲಿ ಪಾಕಿಸ್ತಾನದ ಹೆಸರನ್ನು ಮುದ್ರಿಸುವ ಬಗ್ಗೆ ಉಂಟಾಗಿದ್ದ ಗೊಂದಲಕ್ಕೆ ಬಿಸಿಸಿಐ ತೆರೆ ಎಳೆದಿದೆ. ಐಸಿಸಿ ನಿಯಮಗಳ ಪ್ರಕಾರ, ಆತಿಥೇಯ ರಾಷ್ಟ್ರದ ಹೆಸರು ಜೆರ್ಸಿಯಲ್ಲಿ ಇರಲೇಬೇಕು ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಪಾಕಿಸ್ತಾನದ ಮಾಧ್ಯಮಗಳ ವರದಿಗಳನ್ನು ಬಿಸಿಸಿಐ ತಳ್ಳಿಹಾಕಿದೆ. ಭಾರತ ತಂಡ ಫೆಬ್ರವರಿ 20 ರಿಂದ ಬಾಂಗ್ಲಾದೇಶದ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ.

ಟೀಂ ಇಂಡಿಯಾ ಜೆರ್ಸಿಯಲ್ಲಿ ಪಾಕಿಸ್ತಾನದ ಹೆಸರು; ಬಿಸಿಸಿಐ ಮಹತ್ವದ ನಿರ್ಧಾರ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Jan 22, 2025 | 5:54 PM

Share

ಫೆಬ್ರವರಿ 19 ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿರುವುದು ಹಳೆಯ ವಿಚಾರ. ಆ ಪ್ರಕಾರ ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಿದರೆ ಉಳಿದ ಎಲ್ಲಾ ತಂಡಗಳು ಪಾಕಿಸ್ತಾನದಲ್ಲಿ ಆಡಲಿವೆ. ಏತನ್ಮಧ್ಯೆ, ಈ ಐಸಿಸಿ ಟೂರ್ನಿಯಲ್ಲಿ ಆತಿಥೇಯ ರಾಷ್ಟ್ರ ಪಾಕಿಸ್ತಾನದ ಹೆಸರನ್ನು ತಮ್ಮ ಜೆರ್ಸಿಯಲ್ಲಿ ನಮೂದಿಸಲು ಭಾರತ ತಂಡ ನಿರಾಕರಿಸಿದೆ ಎಂದು ವರದಿಯಾಗಿತ್ತು. ನಿನ್ನೆಯಿಂದ ಈ ವಿಚಾರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಸಾಮಾನ್ಯವಾಗಿ, ಐಸಿಸಿ ಪಂದ್ಯಾವಳಿಯನ್ನು ಆಯೋಜಿಸುವ ದೇಶದ ಹೆಸರು ಎಲ್ಲಾ ತಂಡಗಳ ಜೆರ್ಸಿಯ ಮೇಲೆ ನಮೂದಿಸಲೇಬೇಕು. ಆದರೀಗ ಬಿಸಿಸಿಐ, ಪಾಕಿಸ್ತಾನದ ಹೆಸರನ್ನು ತಂಡದ ಜೆರ್ಸಿಯ ಮೇಲೆ ನಮೂದಿಸಲು ತಗಾದೆ ತೆಗೆದಿದೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿದ ಬಳಿಕ ಹೊಸ ವಿವಾದವೊಂದು ಹುಟ್ಟಿಕೊಂಡಿತ್ತು. ಆದರೆ, ಇದೀಗ ಈ ವಿಚಾರವಾಗಿ ಬಿಸಿಸಿಐ ಸ್ಪಷ್ಟನೆ ನೀಡಿ, ವದಂತಿಗಳಿಗೆ ತೆರೆ ಎಳೆದಿದೆ.

ಜೆರ್ಸಿಯಲ್ಲಿ ಪಾಕಿಸ್ತಾನದ ಹೆಸರು

ಐಸಿಸಿ ನಿಯಮಗಳ ಪ್ರಕಾರ, ಐಸಿಸಿ ಬ್ಯಾನರ್ ಅಡಿಯಲ್ಲಿ ನಡೆಯುವ ಎಲ್ಲಾ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಎಲ್ಲಾ ತಂಡಗಳು ತಮ್ಮ ಜೆರ್ಸಿಯಲ್ಲಿ ಆತಿಥೇಯ ದೇಶದ ಹೆಸರು ಮತ್ತು ಪಂದ್ಯಾವಳಿಯ ವರ್ಷವನ್ನು ಪಂದ್ಯಾವಳಿಯ ಹೆಸರಿನೊಂದಿಗೆ ನಮೂದಿಸುವುದು ಕಡ್ಡಾಯವಾಗಿದೆ. ಆ ಪ್ರಕಾರ, ಇದೀಗ ಎದ್ದಿರುವ ವದಂತಿಗೆ ತೆರೆ ಎಳೆದಿರುವ ಬಿಸಿಸಿಐನ ಹೊಸ ಕಾರ್ಯದರ್ಶಿ ದೇವ್‌ಜಿತ್ ಸೈಕಿಯಾ ಅವರು ಐಸಿಸಿಯ ಪ್ರತಿಯೊಂದು ನಿಯಮವನ್ನು ಬಿಸಿಸಿಐ ಅನುಸರಿಸಲಿದೆ ಎಂದು ಖಚಿತಪಡಿಸಿದ್ದಾರೆ. ಅಂದರೆ ಈ ಟೂರ್ನಿಯ ಆತಿಥೇಯ ಪಾಕಿಸ್ತಾನದ ಹೆಸರು ಟೀಂ ಇಂಡಿಯಾದ ಜೆರ್ಸಿ ಮೇಲೆ ಕಾಣಿಸಿಕೊಳ್ಳಲಿದೆ.

ಇತ್ತೀಚೆಗಷ್ಟೇ ಪಾಕಿಸ್ತಾನದ ಮಾಧ್ಯಮಗಳು ಈ ವಿಷಯವನ್ನು ಪ್ರಸ್ತಾಪಿಸಿ ಟೀಂ ಇಂಡಿಯಾದ ಜೆರ್ಸಿಯಲ್ಲಿ ಪಾಕಿಸ್ತಾನದ ಹೆಸರನ್ನು ಮುದ್ರಿಸಲು ಬಿಸಿಸಿಐ ನಿರಾಕರಿಸಿದೆ ಎಂದು ಆರೋಪಿಸಿದ್ದವು. ಪಿಸಿಬಿ ಕೂಡ ಈ ಸಮಸ್ಯೆಯನ್ನು ಐಸಿಸಿ ಮುಂದಿಡಲು ಬಯಸಿತ್ತು. ಆದರೆ ಬಿಸಿಸಿಐ ಈಗ ಈ ಎಲ್ಲಾ ವರದಿಗಳನ್ನು ತಿರಸ್ಕರಿಸಿದ್ದು, ಜೆರ್ಸಿಗೆ ಸಂಬಂಧಿಸಿದ ಪ್ರತಿಯೊಂದು ಐಸಿಸಿ ನಿಯಮವನ್ನು ಅನುಸರಿಸುವುದಾಗಿ ಘೋಷಿಸಿದೆ.

ಟೀಂ ಇಂಡಿಯಾ ವೇಳಾಪಟ್ಟಿ

ಫೆಬ್ರವರಿ 20 ರಿಂದ ಈ ಟೂರ್ನಿಯಲ್ಲಿ ಟೀಂ ಇಂಡಿಯಾದ ಅಭಿಯಾನ ಆರಂಭವಾಗಲಿದ್ದು, ಚೊಚ್ಚಲ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ನಂತರ ಟೀಂ ಇಂಡಿಯಾ ತನ್ನ ಎರಡನೇ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಆಡಲಿದೆ. ಈ ಪಂದ್ಯ ಫೆಬ್ರವರಿ 23 ರಂದು ನಡೆಯಲಿದೆ. ಇದರ ನಂತರ, ಗುಂಪಿನ ಕೊನೆಯ ಪಂದ್ಯದಲ್ಲಿ, ಮಾರ್ಚ್ 2 ರಂದು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಇದಾದ ಬಳಿಕ ಸೆಮಿಫೈನಲ್ ಮತ್ತು ಫೈನಲ್ ಪಂದ್ಯ ನಡೆಯಲಿದೆ. ಒಂದು ವೇಳೆ ಟೀಂ ಇಂಡಿಯಾ ಸೆಮಿಫೈನಲ್ ಮತ್ತು ಫೈನಲ್‌ಗೆ ಅರ್ಹತೆ ಪಡೆದರೆ, ಈ ಪಂದ್ಯಗಳು ಕೂಡ ದುಬೈನಲ್ಲಿ ಮಾತ್ರ ನಡೆಯಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ