AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023: 2ನೇ ಅಭ್ಯಾಸ ಪಂದ್ಯಕ್ಕಾಗಿ ತಿರುವನಂತಪುರಕ್ಕೆ ಹಾರಿದ ಟೀಂ ಇಂಡಿಯಾ

World Cup 2023: ಗುವಾಹಟಿಯಲ್ಲಿ ನಡೆಯಬೇಕಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಭ್ಯಾಸ ಪಂದ್ಯ ಮಳೆಯಿಂದಾಗಿ ರದ್ದಾಯಿತು. ಟೀಂ ಇಂಡಿಯಾದ ಮೊದಲ ಅಭ್ಯಾಸ ಪಂದ್ಯ ಇದಾಗಿದ್ದು, ಇದೀಗ ನೆದರ್ಲೆಂಡ್ಸ್ ವಿರುದ್ಧದ ಎರಡನೇ ಅಭ್ಯಾಸ ಪಂದ್ಯಕ್ಕಾಗಿ ರೋಹಿತ್ ಪಡೆ ಇಂದು ಗುವಾಹಟಿಯಿಂದ ತಿರುವನಂತಪುರಕ್ಕೆ ಹಾರಿದೆ.

World Cup 2023: 2ನೇ ಅಭ್ಯಾಸ ಪಂದ್ಯಕ್ಕಾಗಿ ತಿರುವನಂತಪುರಕ್ಕೆ ಹಾರಿದ ಟೀಂ ಇಂಡಿಯಾ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Oct 01, 2023 | 1:10 PM

Share

ಗುವಾಹಟಿಯಲ್ಲಿ ನಡೆಯಬೇಕಿದ್ದ ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ವಿಶ್ವಕಪ್ ಅಭ್ಯಾಸ ಪಂದ್ಯ ಮಳೆಯಿಂದಾಗಿ ರದ್ದಾಯಿತು. ಟೀಂ ಇಂಡಿಯಾದ (Team India) ಮೊದಲ ಅಭ್ಯಾಸ ಪಂದ್ಯ ಇದಾಗಿದ್ದು, ಇದೀಗ ನೆದರ್ಲೆಂಡ್ಸ್ ವಿರುದ್ಧದ ಎರಡನೇ ಅಭ್ಯಾಸ ಪಂದ್ಯಕ್ಕಾಗಿ ರೋಹಿತ್ (Rohit Sharma) ಪಡೆ ಇಂದು ಗುವಾಹಟಿಯಿಂದ ತಿರುವನಂತಪುರಕ್ಕೆ ಹಾರಿದೆ. ಇನ್ನು ಉಭಯ ತಂಡಗಳ ನಡುವೆ ಇದೇ ಮಂಗಳವಾರ ಅಂದರೆ ಅಕ್ಟೋಬರ್ 3 ರಂದು ತಿರುವನಂತಪುರದ ಗ್ರೀನ್‌ಫೀಲ್ಡ್ ಸ್ಟೇಡಿಯಂನಲ್ಲಿ (Greenfield Stadium in Trivandrum) ನಡೆಯಲ್ಲಿವೆ. ದುರದೃಷ್ಟವಶಾತ್, ಇಲ್ಲಿ ನಡೆಯಬೇಕಿದ್ದ ಎರಡೂ ತಂಡಗಳ ಅಭ್ಯಾಸ ಪಂದ್ಯಗಳು ಮಳೆಗಾಹುತಿಯಾಗಿವೆ. ಹೀಗಾಗಿ ಈ ಪಂದ್ಯಕ್ಕೂ ಮಳೆ ಭೀತಿ ಎದುರಾಗಿದೆ.

ಇನ್ನು ಗುವಾಹಟಿಯಲ್ಲಿ ಇಡೀ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಕೇವಲ ಒಂದು ಅಭ್ಯಾಸ ಪಂದ್ಯವನ್ನು ಮಾತ್ರ ಆಡಬೇಕಾಗಿತ್ತು. ಆದರೆ ಮಳೆಯು ಅಭಿಮಾನಿಗಳಿಂದ ಆ ಅವಕಾಶವನ್ನು ಕಸಿದುಕೊಂಡಿತು. ಈ ಪಂದ್ಯಕ್ಕೆ ಒಂದು ದಿನ ಮೊದಲು ಶುಕ್ರವಾರ ಇದೇ ಮೈದಾನದಲ್ಲಿ ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವೆ ಪಂದ್ಯ ನಡೆದಿದ್ದು, ಎಲ್ಲೂ ಮಳೆ ಕಾಣದೆ ಇಡೀ ಪಂದ್ಯ ನಡೆದಿತ್ತು.

World Cup 2023: ಮಾಜಿ ದಂತಕಥೆಗಳ ಪ್ರಕಾರ ವಿಶ್ವಕಪ್ ಫೈನಲ್​ಗೇರುವ ಎರಡು ತಂಡಗಳಿವು

ಟಾಸ್ ನಂತರ ಭಾರೀ ಮಳೆ

ಹೀಗಾಗಿ ಟೀಂ ಇಂಡಿಯಾ ಆಡುವುದನ್ನು ನೋಡುವ ಅವಕಾಶ ಸಿಗುತ್ತದೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು ಆದರೆ ಅದು ಸಾಧ್ಯವಾಗಲಿಲ್ಲ. ಈ ಪಂದ್ಯದ ಟಾಸ್ ಗೆದ್ದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದರು. ಆದರೆ ಪಂದ್ಯ ಆರಂಭಕ್ಕೆ 5 ನಿಮಿಷಗಳ ಮೊದಲು ಮಳೆ ನಿಲ್ಲದೆ ಸುರಿಯಲಾರಂಭಿಸಿತು. ಮಳೆಯು ಎಷ್ಟು ಜೋರಾಗಿತ್ತೆಂದರೆ, ಸುಮಾರು ಒಂದೂವರೆ ಗಂಟೆಗಳ ಕಾಲ ಕಾದ ನಂತರ, ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕ್ರೀಡಾಂಗಣದಿಂದ ತಮ್ಮ ಹೋಟೆಲ್‌ಗೆ ಹಿಂತಿರುಗಿದವು. ಆದರೆ ಅಂಪೈರ್‌ಗಳು ಎರಡು ಗಂಟೆಗಳ ನಂತರ ಪಂದ್ಯವನ್ನು ರದ್ದುಗೊಳಿಸುವುದಾಗಿ ಘೋಷಿಸಿದರು.

ಮುಂದಿನ ಪಂದ್ಯದಲ್ಲೂ ಮಳೆಭೀತಿ?

ಇನ್ನು ಅಕ್ಟೋಬರ್ 3 ರಂದು ತಿರುವನಂತಪುರಂನಲ್ಲಿ ನೆದರ್ಲ್ಯಾಂಡ್ ವಿರುದ್ಧ ನಡೆಯಲ್ಲಿರುವ ಎರಡನೇ ಅಭ್ಯಾಸ ಪಂದ್ಯಕ್ಕೂ ಮಳೆ ಭೀತಿ ಎದುರಾಗಿದೆ. ತಿರುವನಂತಪುರಂನಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿರುವ ಕಾರಣ ಈ ಪಂದ್ಯಕ್ಕೂ ಮಳೆ ಅಡ್ಡಿಪಡಿಸುವ ಸಾಧ್ಯತೆಗಳು ಹೆಚ್ಚಿವೆ. ಈ ಮೈದಾನದಲ್ಲಿ ಶುಕ್ರವಾರದಂದು ನಡೆಯಬೇಕಿದ್ದ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯ ಆರಂಭವಾಗದೆ ರದ್ದಾಗಿದ್ದರೆ, ಆಸ್ಟ್ರೇಲಿಯಾ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯವೂ ಹಾಗೆಯೇ ರದ್ದಾಯಿತು. ಅಭ್ಯಾಸದ ವಿಷಯಕ್ಕೆ ಬಂದರೆ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕೆಲವು ದಿನಗಳ ಹಿಂದೆಯಷ್ಟೇ ಏಕದಿನ ಕ್ರಿಕೆಟ್ ಆಡುತ್ತಿದ್ದವು. ಹೀಗಿರುವಾಗ ಈ ಪಂದ್ಯ ರದ್ದಾದ ಪರಿಣಾಮ ಇಬ್ಬರಿಗೂ ಹೆಚ್ಚು ತೊಂದರೆಯಾಗದು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್