AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದ ಪಾಕಿಸ್ತಾನದ ಜತೆ ಟೀಂ ಇಂಡಿಯಾ ಮೆಂಟರ್​ ಧೋನಿ ಚರ್ಚೆ; ಫೋಟೋ ವೈರಲ್​

ಪಂದ್ಯ ಮುಗಿದ ಬಳಿಕ ಟೀಂ ಇಂಡಿಯಾ ಮೆಂಟರ್​ ಎಂ.ಎಸ್​. ಧೋನಿ ಪಾಕಿಸ್ತಾನದ ಆಟಗಾರರ ಜತೆ ಮಾತುಕತೆ ನಡೆಸಿದ್ದಾರೆ. ಈ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿವೆ

ಗೆದ್ದ ಪಾಕಿಸ್ತಾನದ ಜತೆ ಟೀಂ ಇಂಡಿಯಾ ಮೆಂಟರ್​ ಧೋನಿ ಚರ್ಚೆ; ಫೋಟೋ ವೈರಲ್​
ಧೋನಿ
TV9 Web
| Edited By: |

Updated on:Oct 25, 2021 | 10:00 AM

Share

ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ಭಾರತದ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದೆ. ಟೀಂ ಇಂಡಿಯಾ ವಿರುದ್ಧ ಗೆದ್ದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಸಂಭ್ರಮ ಮುಗಿಲುಮುಟ್ಟಿದೆ. ಪಟಾಕಿ ಸಿಡಿಸಿ ಈ ಗೆಲುವನ್ನು ಸಂಭ್ರಿಮಿಸಲಾಗುತ್ತಿದೆ. ಮತ್ತೊಂದು ಕಡೆಗಳಲ್ಲಿ ಟೀಂ ಇಂಡಿಯಾವನ್ನು ಹೀಯಾಳಿಸುವ ಕೆಲಸವೂ ನಡೆದಿದೆ. ಆದರೆ, ಟೀಂ ಇಂಡಿಯಾ ಆಟಗಾರರು ಮಾತ್ರ ನಿಜವಾದ ಕ್ರೀಡಾಸ್ಫೂರ್ತಿ ಮೆರೆಯುತ್ತಿದ್ದಾರೆ. ಈ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗುತ್ತಿವೆ.

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಮೊದಲ ಓವರ್​ನಲ್ಲೇ ಸೋಲು ಉಂಟಾಗಿತ್ತು. ರೋಹಿತ್ ಶರ್ಮಾ ತಾನು ಎದುರಿಸಿದ ಮೊದಲ ಎಸೆತದಲ್ಲೇ ಶಾಹೀನ್ ಅಫ್ರಿದಿ ಬೌಲಿಂಗ್​ನಲ್ಲಿ ಎಲ್​ಬಿಗೆ ಔಟ್​ ಆದರು. ನಂತರ ಒಂದಾದಮೇಲೆ ಒಂದು ವಿಕೆಟ್​ಗಳು ಪತನವಾಗಲು ಶುರುವಾದವು. ಆದರೆ, ಕೊಹ್ಲಿ ಒಂದು ಕಡೆ ನಿಂತು ರನ್​ ಪೇರಿಸುತ್ತಿದ್ದರು. ಅಂತಿಮವಾಗಿ ಭಾರತ 151 ರನ್​ ಪೇರಿಸಲಷ್ಟೇ ಶಕ್ತವಾಯಿತು. ಗೆಲ್ಲಲು 152 ರನ್ ಗುರಿ ಪಡೆದ ಪಾಕಿಸ್ತಾನವು 17.5 ಓವರ್​​ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿತು. ಬಾಬರ್ ಅಜಾಮ್ ಹಾಗೂ ರಿಝ್ವಾನ್ ಭಾರತ ವಿರುದ್ಧದ ಟ್ವೆಂಟಿ-20ಯಲ್ಲಿ ಗರಿಷ್ಠ ಜೊತೆಯಾಟ ನಡೆಸಿದರು. ಅಜಾಮ್ 40 ಎಸೆತಗಳಲ್ಲಿ (4 ಬೌಂಡರಿ, 2 ಸಿಕ್ಸರ್) ಹಾಗೂ ರಿಝ್ವಾನ್ 41 ಎಸೆತಗಳಲ್ಲಿ(3 ಬೌಂ., 2 ಸಿ.) ಅರ್ಧಶತಕಗಳನ್ನು ಪೂರೈಸಿದರು.

ಪಂದ್ಯ ಮುಗಿದ ಬಳಿಕ ಟೀಂ ಇಂಡಿಯಾ ಮೆಂಟರ್​ ಎಂ.ಎಸ್​. ಧೋನಿ ಪಾಕಿಸ್ತಾನದ ಆಟಗಾರರ ಜತೆ ಮಾತುಕತೆ ನಡೆಸಿದ್ದಾರೆ. ಈ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿವೆ. ಇನ್ನು, ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಅವರು ಬಾಬರ್​ ಹಾಗೂ ರಿಝ್ವಾನ್​ ಅವರ ಆಟವನ್ನು ಶ್ಲಾಘಿಸಿದ್ದಾರೆ. ಈ ವಿಡಿಯೋಗಳು ಈಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.

ಇದನ್ನೂ ಓದಿ: ಪಂದ್ಯ ಸೋತರೂ ಪಾಕಿಸ್ತಾನ ಆಟಗಾರರ ಬೆನ್ನು ತಟ್ಟಿದ ವಿರಾಟ್ ಕೊಹ್ಲಿ; ವಿಡಿಯೋ ವೈರಲ್​

KL Rahul: ನೋಬಾಲ್​ಗೆ ಔಟಾದ ಕೆ.ಎಲ್. ರಾಹುಲ್; ಅಂಪೈರ್ ತಪ್ಪಿನಿಂದ ಭಾರತಕ್ಕೆ ದೊಡ್ಡ ಮೋಸ

Published On - 9:59 am, Mon, 25 October 21

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ