AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದ ಪಾಕಿಸ್ತಾನದ ಜತೆ ಟೀಂ ಇಂಡಿಯಾ ಮೆಂಟರ್​ ಧೋನಿ ಚರ್ಚೆ; ಫೋಟೋ ವೈರಲ್​

ಪಂದ್ಯ ಮುಗಿದ ಬಳಿಕ ಟೀಂ ಇಂಡಿಯಾ ಮೆಂಟರ್​ ಎಂ.ಎಸ್​. ಧೋನಿ ಪಾಕಿಸ್ತಾನದ ಆಟಗಾರರ ಜತೆ ಮಾತುಕತೆ ನಡೆಸಿದ್ದಾರೆ. ಈ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿವೆ

ಗೆದ್ದ ಪಾಕಿಸ್ತಾನದ ಜತೆ ಟೀಂ ಇಂಡಿಯಾ ಮೆಂಟರ್​ ಧೋನಿ ಚರ್ಚೆ; ಫೋಟೋ ವೈರಲ್​
ಧೋನಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Oct 25, 2021 | 10:00 AM

Share

ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ಭಾರತದ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದೆ. ಟೀಂ ಇಂಡಿಯಾ ವಿರುದ್ಧ ಗೆದ್ದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಸಂಭ್ರಮ ಮುಗಿಲುಮುಟ್ಟಿದೆ. ಪಟಾಕಿ ಸಿಡಿಸಿ ಈ ಗೆಲುವನ್ನು ಸಂಭ್ರಿಮಿಸಲಾಗುತ್ತಿದೆ. ಮತ್ತೊಂದು ಕಡೆಗಳಲ್ಲಿ ಟೀಂ ಇಂಡಿಯಾವನ್ನು ಹೀಯಾಳಿಸುವ ಕೆಲಸವೂ ನಡೆದಿದೆ. ಆದರೆ, ಟೀಂ ಇಂಡಿಯಾ ಆಟಗಾರರು ಮಾತ್ರ ನಿಜವಾದ ಕ್ರೀಡಾಸ್ಫೂರ್ತಿ ಮೆರೆಯುತ್ತಿದ್ದಾರೆ. ಈ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗುತ್ತಿವೆ.

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಮೊದಲ ಓವರ್​ನಲ್ಲೇ ಸೋಲು ಉಂಟಾಗಿತ್ತು. ರೋಹಿತ್ ಶರ್ಮಾ ತಾನು ಎದುರಿಸಿದ ಮೊದಲ ಎಸೆತದಲ್ಲೇ ಶಾಹೀನ್ ಅಫ್ರಿದಿ ಬೌಲಿಂಗ್​ನಲ್ಲಿ ಎಲ್​ಬಿಗೆ ಔಟ್​ ಆದರು. ನಂತರ ಒಂದಾದಮೇಲೆ ಒಂದು ವಿಕೆಟ್​ಗಳು ಪತನವಾಗಲು ಶುರುವಾದವು. ಆದರೆ, ಕೊಹ್ಲಿ ಒಂದು ಕಡೆ ನಿಂತು ರನ್​ ಪೇರಿಸುತ್ತಿದ್ದರು. ಅಂತಿಮವಾಗಿ ಭಾರತ 151 ರನ್​ ಪೇರಿಸಲಷ್ಟೇ ಶಕ್ತವಾಯಿತು. ಗೆಲ್ಲಲು 152 ರನ್ ಗುರಿ ಪಡೆದ ಪಾಕಿಸ್ತಾನವು 17.5 ಓವರ್​​ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿತು. ಬಾಬರ್ ಅಜಾಮ್ ಹಾಗೂ ರಿಝ್ವಾನ್ ಭಾರತ ವಿರುದ್ಧದ ಟ್ವೆಂಟಿ-20ಯಲ್ಲಿ ಗರಿಷ್ಠ ಜೊತೆಯಾಟ ನಡೆಸಿದರು. ಅಜಾಮ್ 40 ಎಸೆತಗಳಲ್ಲಿ (4 ಬೌಂಡರಿ, 2 ಸಿಕ್ಸರ್) ಹಾಗೂ ರಿಝ್ವಾನ್ 41 ಎಸೆತಗಳಲ್ಲಿ(3 ಬೌಂ., 2 ಸಿ.) ಅರ್ಧಶತಕಗಳನ್ನು ಪೂರೈಸಿದರು.

ಪಂದ್ಯ ಮುಗಿದ ಬಳಿಕ ಟೀಂ ಇಂಡಿಯಾ ಮೆಂಟರ್​ ಎಂ.ಎಸ್​. ಧೋನಿ ಪಾಕಿಸ್ತಾನದ ಆಟಗಾರರ ಜತೆ ಮಾತುಕತೆ ನಡೆಸಿದ್ದಾರೆ. ಈ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿವೆ. ಇನ್ನು, ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಅವರು ಬಾಬರ್​ ಹಾಗೂ ರಿಝ್ವಾನ್​ ಅವರ ಆಟವನ್ನು ಶ್ಲಾಘಿಸಿದ್ದಾರೆ. ಈ ವಿಡಿಯೋಗಳು ಈಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.

ಇದನ್ನೂ ಓದಿ: ಪಂದ್ಯ ಸೋತರೂ ಪಾಕಿಸ್ತಾನ ಆಟಗಾರರ ಬೆನ್ನು ತಟ್ಟಿದ ವಿರಾಟ್ ಕೊಹ್ಲಿ; ವಿಡಿಯೋ ವೈರಲ್​

KL Rahul: ನೋಬಾಲ್​ಗೆ ಔಟಾದ ಕೆ.ಎಲ್. ರಾಹುಲ್; ಅಂಪೈರ್ ತಪ್ಪಿನಿಂದ ಭಾರತಕ್ಕೆ ದೊಡ್ಡ ಮೋಸ

Published On - 9:59 am, Mon, 25 October 21

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!