AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ತಂಡವನ್ನು ಮಣಿಸಿದ ಭಾರತಕ್ಕೆ ಎರಡೆರಡು ಲಾಭ; ಅಣತಿ ದೂರದಲ್ಲಿ ಡಬ್ಲ್ಯುಟಿಸಿ ಫೈನಲ್ ಟಿಕೆಟ್ ..!

IND vs BAN: ಚಟ್ಟೋಗ್ರಾಮ್ ಟೆಸ್ಟ್‌ನಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದ ಭಾರತ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್‌ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

ಬಾಂಗ್ಲಾ ತಂಡವನ್ನು ಮಣಿಸಿದ ಭಾರತಕ್ಕೆ ಎರಡೆರಡು ಲಾಭ; ಅಣತಿ ದೂರದಲ್ಲಿ ಡಬ್ಲ್ಯುಟಿಸಿ ಫೈನಲ್ ಟಿಕೆಟ್ ..!
ಟೀಂ ಇಂಡಿಯಾ
TV9 Web
| Edited By: |

Updated on:Dec 18, 2022 | 11:31 AM

Share

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ (India vs Bangladesh) ಗೆದ್ದು ಬೀಗಿದೆ. ಇದರೊಂದಿಗೆ 2 ಟೆಸ್ಟ್‌ಗಳ ಸರಣಿಯಲ್ಲಿ ಅಜೇಯ 1-0 ಮುನ್ನಡೆ ಸಾಧಿಸಿದೆ. ಚಟ್ಟೋಗ್ರಾಮ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ 4ನೇ ದಿನದಾಟದ ಅಂತ್ಯಕ್ಕೆ ಬಾಂಗ್ಲಾದೇಶ 6 ವಿಕೆಟ್‌ ಕಳೆದುಕೊಂಡು 272 ರನ್ ಗಳಿಸಿತ್ತು. ಇಲ್ಲಿಂದ 5ನೇ ದಿನದಾಟವನ್ನು ಆರಂಭಿಸಿದ ಬಾಂಗ್ಲಾ ಉಳಿದ ತನ್ನ 4 ವಿಕೆಟ್​ಗಳನ್ನು ಕೇವಲ 52 ರನ್​ಗಳಿಗೆ ಕಳೆದುಕೊಳ್ಳುವ ಮೂಲಕ ಆಲೌಟ್ ಆಯಿತು. ಈ ಮೂಲಕ ಭಾರತಕ್ಕೆ ಮೊದಲ ಟೆಸ್ಟ್‌ನಲ್ಲಿ 188 ರನ್‌ಗಳ ಭರ್ಜರಿ ಜಯ ತೋರಿತಿದೆ. ಈ ಗೆಲುವಿನ ಮೂಲಕ ಟೀಂ ಇಂಡಿಯಾ (Team India) ಎರಡೆರಡು ಲಾಭ ಗಳಿಸಿದೆ. ಮೊದಲನೆಯದು ಏಕದಿನ ಸರಣಿಗೆ ಟೀಂ ಇಂಡಿಯಾ ಸೇಡು ತೀರಿಸಿಕೊಳ್ಳುವ ಮೊದಲ ಹೆಜ್ಜೆ ಇಟ್ಟಿದ್ದರೆ, ಎರಡನೆಯದ್ದು, ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ (World Test Championship) ಪಾಯಿಂಟ್‌ ಪಟ್ಟಿಯಲ್ಲಿ ಭಾರತ, ಶ್ರೀಲಂಕಾವನ್ನು ಹಿಂದಿಕ್ಕಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯವನ್ನು ಆಡುವ ಉದ್ದೇಶದ ದೃಷ್ಟಿಯಿಂದ, ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯು ಭಾರತಕ್ಕೆ ಬಹಳ ಮುಖ್ಯವಾಗಿದೆ.

ಚಟ್ಟೋಗ್ರಾಮ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ 188 ರನ್‌ಗಳಿಂದ ಬಾಂಗ್ಲಾದೇಶವನ್ನು ಸೋಲಿಸಿತು. ಈ ದೊಡ್ಡ ಗೆಲುವಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್‌ ಪಟ್ಟಿಯಲ್ಲಿ 12 ಅಂಕಗಳನ್ನು ಪಡೆಯುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ಇದರೊಂದಿಗೆ ಒಂದು ಸ್ಥಾನ ಜಿಗಿತವನ್ನೂ ಸಹ ಸಾಧಿಸಲಾಗಿದೆ.

2. ಭಾರತಕ್ಕೆ ಒಂದು ಸ್ಥಾನದ ಲಾಭ

ಚಟ್ಟೋಗ್ರಾಮ್ ಟೆಸ್ಟ್‌ನಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದ ಭಾರತ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್‌ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಈ ಹಿಂದೆ ಭಾರತ ನಾಲ್ಕನೇ ಸ್ಥಾನದಲ್ಲಿತ್ತು. ಆದರೆ ಬಾಂಗ್ಲಾದೇಶವನ್ನು ಸೋಲಿಸಿದ ನಂತರ, ಈಗ ಮೂರನೇ ಸ್ಥಾನಕ್ಕೆ ಬಂದಿದೆ. ಅಂದರೆ, ಈಗ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಮಾತ್ರ ಟೀಂ ಇಂಡಿಯಾಕ್ಕಿಂತ ಮುಂದಿವೆ.

IND vs BAN 1st Test: ಕುಲ್ದೀಪ್-ಅಕ್ಷರ್ ಸ್ಪಿನ್ ಮೋಡಿಗೆ ಬಾಂಗ್ಲಾ ತತ್ತರ: ಮೊದಲ ಟೆಸ್ಟ್​ನಲ್ಲಿ ಭಾರತಕ್ಕೆ 188 ರನ್​ಗಳ ಭರ್ಜರಿ ಜಯ

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್‌ ಪಟ್ಟಿಯಲ್ಲಿ ಭಾರತ ಶೇಕಡ 55.33 ಗೆಲುವಿನ ಸರಾಸರಿಯೊಂದಿಗೆ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಇದರಲ್ಲಿ ಶ್ರೀಲಂಕಾದ ಗೆಲುವಿನ ಸರಾಸರಿ ಶೇಕಡಾ 53.33 ರಷ್ಟಿದ್ದು. 75% ನೊಂದಿಗೆ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ. ಹಾಗೆಯೇ ಗೆಲುವಿನ ಸರಾಸರಿ ಶೇಕಡಾ 60 ರಷ್ಟಿರುವ ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿದೆ.

3. ಪಾಕಿಸ್ತಾನ ಈಗಾಗಲೇ ರೇಸ್‌ನಿಂದ ಹೊರಬಿದ್ದಿದೆ

ಪಾಕಿಸ್ತಾನ ತಂಡ ಈಗಾಗಲೇ WTC ಫೈನಲ್ ರೇಸ್‌ನಿಂದ ಹೊರಗುಳಿದಿದೆ. ಅದೇ ಸಮಯದಲ್ಲಿ, ಇಂಗ್ಲೆಂಡ್ ಹಾದಿ ಕೂಡ ಕಠಿಣವಾಗಿದೆ. ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿ ಇಂಗ್ಲೆಂಡ್ ಇದ್ದರೆ, ಪಾಕಿಸ್ತಾನ ಆರನೇ ಸ್ಥಾನದಲ್ಲಿದೆ. ಹೀಗಾಗಿ ಡಬ್ಲ್ಯುಟಿಸಿ ಫೈನಲ್‌ಗೆ ಪಾಯಿಂಟ್ ಪಟ್ಟಿಯ ಅಗ್ರ ಮೂರು ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

ಡಿಸೆಂಬರ್ 22 ರಿಂದ ಎರಡನೇ ಟೆಸ್ಟ್ ಪಂದ್ಯ

ಭಾರತ ಈಗ ಡಿಸೆಂಬರ್ 22 ರಿಂದ ಬಾಂಗ್ಲಾದೇಶದಿಂದ ಎರಡನೇ ಟೆಸ್ಟ್ ಪಂದ್ಯವನ್ನು ಆಡಬೇಕಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ತನ್ನ ಸ್ಥಾನವನ್ನು ಇನ್ನಷ್ಟು ಬಲಪಡಿಸಲು, ಭಾರತ ಈ ಟೆಸ್ಟ್‌ನಲ್ಲೂ ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿದೆ. ಬಾಂಗ್ಲಾದೇಶದ ಸರಣಿಯ ನಂತರ ಭಾರತ ತವರಿನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಬೇಕಾಗಿದೆ. ಆ ಟೆಸ್ಟ್ ಸರಣಿಯೂ ಭಾರತಕ್ಕೆ ಬಹಳ ಪ್ರಮುಖವಾಗಿರಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:28 am, Sun, 18 December 22

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ