AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ ಮತ್ತೆ ಕಣಕ್ಕಿಳಿಯುವುದು ಯಾವಾಗ?

India's Cricket Schedule After T20 World Cup Win: ಟಿ20 ವಿಶ್ವಕಪ್ ಗೆದ್ದ ಭಾರತ ತಂಡ 96 ದಿನಗಳ ವಿಶ್ರಾಂತಿಯ ನಂತರ ಅಫ್ಘಾನಿಸ್ತಾನ ಸರಣಿಯೊಂದಿಗೆ ಮತ್ತೆ ಅಖಾಡಕ್ಕಿಳಿಯಲಿದೆ. 2026ರ ಸಂಪೂರ್ಣ ಕ್ರಿಕೆಟ್ ವೇಳಾಪಟ್ಟಿ ಬಹಿರಂಗಗೊಂಡಿದ್ದು, ಇಂಗ್ಲೆಂಡ್, ಶ್ರೀಲಂಕಾ, ವೆಸ್ಟ್ ಇಂಡೀಸ್ ಮತ್ತು ನ್ಯೂಜಿಲೆಂಡ್ ಪ್ರವಾಸಗಳು ಸೇರಿವೆ. ಆಟಗಾರರು ಐಪಿಎಲ್‌ನಲ್ಲಿ ತಮ್ಮ ತಂಡಗಳನ್ನು ಪ್ರತಿನಿಧಿಸಲಿದ್ದಾರೆ. ಕ್ರಿಕೆಟ್ ಪ್ರೇಮಿಗಳಿಗೆ ಮುಂದಿನ ಪಂದ್ಯಾವಳಿಗಳ ರೋಚಕತೆ ಕಾದಿದೆ.

ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ ಮತ್ತೆ ಕಣಕ್ಕಿಳಿಯುವುದು ಯಾವಾಗ?
Team India
ಪೃಥ್ವಿಶಂಕರ
|

Updated on: Mar 09, 2026 | 8:37 PM

Share

ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ (T20 World Cup) ಗೆದ್ದಿರುವ ಟೀಂ ಇಂಡಿಯಾ (Team India) ಹಲವು ದಾಖಲೆಗಳೊಂದಿಗೆ ಚುಟುಕು ಸಮರಕ್ಕೆ ವಿದಾಯ ಹೇಳಿದೆ. ಕಳೆದೊಂದು ತಿಂಗಳಿಂದ ಟಿ20 ವಿಶ್ವಕಪ್​ನಲ್ಲಿ ಭಾಗವಹಿಸಿದ್ದ ಟೀಂ ಇಂಡಿಯಾ ಇದೀಗ ವಿಶ್ರಾಂತಿ ಜಾರಿದೆ. ಅಹಮದಾಬಾದ್‌ನಲ್ಲಿ ಫೈನಲ್ ಪಂದ್ಯವನ್ನು ಮುಗಿಸಿ ತಂಡದೊಂದಿಗೆ ಸಂಭ್ರಮಾಚರಣೆಯಲ್ಲಿ ತೊಡಗಿದ ಆಟಗಾರರು ಇದೀಗ ತಮ್ಮ ತಮ್ಮ ಮನೆಗಳತ್ತ ಮುಖಮಾಡಿದ್ದಾರೆ. ಟಿ20 ವಿಶ್ವಕಪ್​ ಗೆದ್ದ ಖುಷಿಯನ್ನು ಇನ್ನು ಕೆಲವು ದಿನ ಆಚರಿಸಲಿದ್ದಾರೆ. ಇದು ಟೀಂ ಇಂಡಿಯಾ ಆಟಗಾರರ ಕಥೆಯಾದರೆ, ಕ್ರಿಕೆಟ್ ಪ್ರೇಮಿಗಳಲ್ಲಿ ಹೊಸದೊಂದು ಪ್ರಶ್ನೆ ಮೂಡಿದೆ. ಅದೆನೇಂದರೆ ಟೀಂ ಇಂಡಿಯಾ ಮತ್ತೆ ಅಖಾಡಕ್ಕಿಳಿಯುವುದು ಯಾವಾಗ ಎಂಬುದು?

ಟೀಂ ಇಂಡಿಯಾಗೆ 96 ದಿನಗಳ ವಿಶ್ರಾಂತಿ

ಟಿ20 ವಿಶ್ವಕಪ್ ಗೆದ್ದುಕೊಂಡಿರುವ ಟೀಂ ಇಂಡಿಯಾ 96 ದಿನಗಳ ಕಾಲ ಕ್ರಿಕೆಟ್‌ನಿಂದ ದೂರವಿರಲಿದೆ. ಆ ಬಳಿಕ ಭಾರತ ತಂಡ ಅಫ್ಘಾನಿಸ್ತಾನ ವಿರುದ್ಧ ಸರಣಿ ಆಡಲಿದೆ. ಜೂನ್ 6 ರಂದು ನ್ಯೂ ಚಂಡೀಗಢದಲ್ಲಿ ಏಕೈಕ ಟೆಸ್ಟ್ ಪಂದ್ಯ ನಡೆಯಲಿದೆ. ಇದರ ನಂತರ ಟೀಂ ಇಂಡಿಯಾ, ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದ್ದು, ಇದರಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಕೂಡ ಆಡಲಿದ್ದಾರೆ. ಈ ಸರಣಿಗೂ ಮೊದಲು ಭಾರತೀಯ ತಂಡವನ್ನು ನೋಡಲಾಗುವುದಿಲ್ಲವಾದರೂ, ಟೀಂ ಇಂಡಿಯಾ ಆಟಗಾರರು ಖಂಡಿತವಾಗಿಯೂ ಮೈದಾನದಲ್ಲಿ ಕಾಣಿಸಿಕೊಳ್ಳುತ್ತಾರೆ. ಮಾರ್ಚ್ 28 ರಿಂದ ಪ್ರಾರಂಭವಾಗುವ ಐಪಿಎಲ್‌ನಲ್ಲಿ ಭಾರತೀಯ ಆಟಗಾರರು ತಮ್ಮ ತಮ್ಮ ತಂಡಗಳನ್ನು ಪ್ರತಿನಿಧಿಸಲಿದ್ದಾರೆ. ಈ ಪಂದ್ಯಾವಳಿಯ ಫೈನಲ್ ಪಂದ್ಯವು ಮೇ 31 ರಂದು ನಡೆಯಲಿದೆ.

ಟಿ20 ವಿಶ್ವಕಪ್ ಗೆದ್ದು ನಿವೃತ್ತಿಯ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

2026 ರಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ

  • ಅಫ್ಘಾನಿಸ್ತಾನ ವಿರುದ್ಧದ ಸರಣಿಯ ನಂತರ ಭಾರತ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ.
  • ಜುಲೈನಲ್ಲಿ ನಡೆಯಲಿರುವ ಈ ಪ್ರವಾಸದಲ್ಲಿ 5 ಟಿ20 ಮತ್ತು 3 ಏಕದಿನ ಪಂದ್ಯಗಳು ನಡೆಯಲಿವೆ.
  • ಆಗಸ್ಟ್‌ನಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ.
  • ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನು ಆಡಲಿದೆ.
  • ಅಕ್ಟೋಬರ್-ನವೆಂಬರ್‌ನಲ್ಲಿ ಭಾರತ ತಂಡ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ 2 ಟೆಸ್ಟ್, 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನು ಆಡಲಿದೆ.
  • ಶ್ರೀಲಂಕಾ ತಂಡ ಡಿಸೆಂಬರ್‌ನಲ್ಲಿ ಭಾರತಕ್ಕೆ ಬರಲಿದ್ದು, ಇದರಲ್ಲಿ 3 ಏಕದಿನ ಪಂದ್ಯಗಳು ಮತ್ತು 3 ಟಿ20 ಪಂದ್ಯಗಳನ್ನು ಆಡಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!