AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ 2ನೇ ಸ್ಥಾನಕ್ಕೇರಿದ ಶತಕ ವಂಚಿತ ಸ್ಮೃತಿ ಮಂಧಾನ; ನಾಯಕಿಗೂ ಮುಂಬಡ್ತಿ..!

ICC Rankings: ಇಂಗ್ಲೆಂಡ್‌ನಲ್ಲಿ ನಡೆದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 111 ರನ್ ಗಳಿಸಿದ್ದ ಮಂಧಾನ ಏಕದಿನ ಸರಣಿಯಲ್ಲೂ ಇದೇ ಫಾರ್ಮ್ ಮುಂದುವರಿಸಿದ್ದಾರೆ. ಮೊದಲ ಪಂದ್ಯದಲ್ಲಿ ಅದ್ಭುತ ಇನ್ನಿಂಗ್ಸ್ ಆಡಿದ ಮಂಧಾನ ಕೇವಲ 9 ರನ್​ಗಳಿಂದ ಶತಕದಿಂದ ವಂಚಿತರಾದರು.

ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ 2ನೇ ಸ್ಥಾನಕ್ಕೇರಿದ ಶತಕ ವಂಚಿತ ಸ್ಮೃತಿ ಮಂಧಾನ; ನಾಯಕಿಗೂ ಮುಂಬಡ್ತಿ..!
ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಮಂಧಾನ ಅವರ ಬ್ಯಾಟ್​ನಿಂದ ನಿರಂತರವಾಗಿ ರನ್ ಗಳಿಸುತ್ತಿದ್ದಾರೆ. ಇಂಗ್ಲೆಂಡಿನಲ್ಲಿ ನಡೆಯುತ್ತಿರುವ ಏಕದಿನ ಸರಣಿಯಲ್ಲೂ ತಮ್ಮ ಅಬ್ಬರ ಮುಂದುವರೆಸಿರುವ ಮಂಧಾನ ತಮ್ಮ ಹೆಸರಿನಲ್ಲಿ ಅನೇಕ ದಾಖಲೆಗಳನ್ನು ಸಹ ಮಾಡುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅಮೋಘ ಇನ್ನಿಂಗ್ಸ್ ಆಡಿದ ಸ್ಮೃತಿ ಎರಡನೇ ಏಕದಿನ ಪಂದ್ಯದಲ್ಲೂ ತಂಡಕ್ಕೆ ಉತ್ತಮ ಆರಂಭ ನೀಡಿ ತಮ್ಮ ಹೆಸರಿನಲ್ಲಿ ವಿಶೇಷ ದಾಖಲೆಯನ್ನೂ ಬರೆದುಕೊಂಡಿದ್ದಾರೆ.
TV9 Web
| Edited By: |

Updated on: Sep 21, 2022 | 3:29 PM

Share

ಭಾರತದ ಸ್ಟಾರ್ ಮಹಿಳಾ ಬ್ಯಾಟರ್ ಸ್ಮೃತಿ ಮಂಧಾನ (Smriti Mandhana) ಸದ್ಯಕ್ಕೆ ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಇಂಗ್ಲೆಂಡ್‌ನಲ್ಲಿ ತಮ್ಮ ಬ್ಯಾಟಿಂಗ್ ಪರಾಕ್ರಮವನ್ನು ಮುಂದುವರೆಸಿದ್ದಾರೆ. ಇದು ಅವರಿಗೆ ಐಸಿಸಿ ಬಿಡುಗಡೆ ಮಾಡಿರುವ ಇತ್ತಿಚ್ಚಿನ ಶ್ರೇಯಾಂಕದಲ್ಲಿ (ICC Rankings) ಲಾಭ ತಂದುಕೊಟ್ಟಿದೆ. ತನ್ನ ಅದ್ಭುತ ಪ್ರದರ್ಶನದ ಬಲದ ಮೇಲೆ, ಮಂಧಾನ ಆಸೀಸ್​ ತಂಡದ ನಾಯಕಿಯನ್ನು ಹಿಂದಿಕ್ಕಿದ್ದಾರೆ. ಮಂಗಳವಾರ ಬಿಡುಗಡೆಯಾದ ಇತ್ತೀಚಿನ ಐಸಿಸಿ ಶ್ರೇಯಾಂಕದಲ್ಲಿ ಮಂಧಾನ ಎರಡು ಸ್ಥಾನ ಮೇಲೇರಿ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ. ಈ ಮೂಲಕ ಆಸ್ಟ್ರೇಲಿಯ ನಾಯಕಿ ಮೆಗ್ ಲ್ಯಾನಿಂಗ್ ಅವರನ್ನು ಈ ಸ್ಥಾನದಿಂದ ಕೆಳಗಿಳಿಸಿದ್ದಾರೆ.

ಇಂಗ್ಲೆಂಡ್‌ನಲ್ಲಿ ನಡೆದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 111 ರನ್ ಗಳಿಸಿದ್ದ ಮಂಧಾನ ಏಕದಿನ ಸರಣಿಯಲ್ಲೂ ಇದೇ ಫಾರ್ಮ್ ಮುಂದುವರಿಸಿದ್ದಾರೆ. ಮೊದಲ ಪಂದ್ಯದಲ್ಲಿ ಅದ್ಭುತ ಇನ್ನಿಂಗ್ಸ್ ಆಡಿದ ಮಂಧಾನ ಕೇವಲ 9 ರನ್​ಗಳಿಂದ ಶತಕದಿಂದ ವಂಚಿತರಾದರು. ಈ ಅದ್ಭುತ ಇನ್ನಿಂಗ್ಸ್​ನಿಂದಾಗಿ ಏಕದಿನ ರ‍್ಯಾಂಕಿಂಗ್‌ನಲ್ಲಿಯೂ ಮುಂಬಡ್ತಿ ಪಡೆದಿರುವ ಮಂಧಾನ ಮೂರು ಸ್ಥಾನ ಮೇಲೇರಿ ಏಳನೇ ಸ್ಥಾನಕ್ಕೆ ತಲುಪಿದ್ದಾರೆ.

ಹರ್ಮನ್‌ಪ್ರೀತ್ ಕೌರ್​ಗೂ ಲಾಭ

ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೂಡ ಈ ಶ್ರೇಯಾಂಕದಲ್ಲಿ ಲಾಭ ಪಡೆದಿದ್ದಾರೆ. ಏಕದಿನ ರ್ಯಾಂಕಿಂಗ್‌ನಲ್ಲಿ ನಾಲ್ಕು ಸ್ಥಾನ ಜಿಗಿದು ಒಂಬತ್ತನೇ ಸ್ಥಾನ ಪಡೆದಿರುವ ಹರ್ಮನ್ ಟಾಪ್-10 ರಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆಲ್ ರೌಂಡರ್ ದೀಪ್ತಿ ಶರ್ಮಾ ಕೂಡ ಅದ್ಭುತ ಆಟದ ಲಾಭ ಪಡೆದು 32ನೇ ಸ್ಥಾನಕ್ಕೆ ಏರಿದ್ದಾರೆ. ವಿಕೆಟ್ ಕೀಪರ್ ಯಾಸ್ತಿಕಾ ಭಾಟಿಯಾ ಎಂಟು ಸ್ಥಾನ ಮೇಲೇರಿ 37ನೇ ಸ್ಥಾನಕ್ಕೆ ತಲುಪಿದ್ದಾರೆ.

ಟಿ20 ಶ್ರೇಯಾಂಕದಲ್ಲೂ ಲಾಭ ಪಡೆದಿರುವ ನಾಯಕಿ ಹರ್ಮನ್‌ಪ್ರೀತ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ 14ನೇ ಸ್ಥಾನಕ್ಕೆ ಏರಿದ್ದಾರೆ. ಜೊತೆಗೆ 6ನೇ ಸ್ಥಾನದಲ್ಲಿರುವ ಶೆಫಾಲಿ ವರ್ಮಾ ಟಿ20ಯಲ್ಲಿ ಟಾಪ್-10ರಲ್ಲಿ ಕಾಣಿಸಿಕೊಂಡ ಟೀಂ ಇಂಡಿಯಾದ ಮತ್ತೊಬ್ಬ ಮಹಿಳಾ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇವರಲ್ಲದೆ ಬೌಲಿಂಗ್​ನಲ್ಲಿ ವೇಗಿ ರೇಣುಕಾ ಸಿಂಗ್ ಕೂಡ ಟಾಪ್-10ರೊಳಗೆ ಪ್ರವೇಶಿಸಿದ್ದು, 10ನೇ ಸ್ಥಾನಕ್ಕೆ ತಲುಪಿದ್ದಾರೆ. ಹಾಗೆಯೇ ಸ್ಪಿನ್ನರ್ ರಾಧಾ ಯಾದವ್ 14ನೇ ಸ್ಥಾನಕ್ಕೆ ಎಂಟ್ರಿಕೊಟ್ಟಿದ್ದಾರೆ.

ಇಂಗ್ಲೆಂಡ್ ಆಟಗಾರ್ತಿಯರಿಗೂ ಲಾಭ

ಇಂಗ್ಲೆಂಡ್‌ನ ಎಮ್ಮಾ ಲಾಂಬಾ ಮತ್ತು ಸೋಫಿ ಎಕ್ಲೆಸ್ಟನ್ ಇಬ್ಬರೂ ತಲಾ ಮೂರು ಸ್ಥಾನ ಮೇಲಕ್ಕೇರಿ ಇದೀಗ ಕ್ರಮವಾಗಿ 64 ಮತ್ತು 72ನೇ ಸ್ಥಾನಕ್ಕೆ ತಲುಪಿದ್ದಾರೆ. ಚಾರ್ಲಿ ಡೀನ್ 86ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರೆ ಬೌಲರ್‌ಗಳ ಶ್ರೇಯಾಂಕದಲ್ಲಿ ಡೀನ್, ನಾಲ್ಕು ಸ್ಥಾನ ಮೇಲಕ್ಕೆತ್ತಿ 20 ನೇ ಸ್ಥಾನಕ್ಕೆ ಬಂದಿದ್ದಾರೆ. ಕೇಟ್ ಕ್ರಾಸ್ ಟಾಪ್-10ರಲ್ಲಿ ಸ್ಥಾನ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ