AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶೀಯ ಅಂಗಳದಲ್ಲಿ ಮುಗ್ಗರಿಸಿದ ಟೀಮ್ ಇಂಡಿಯಾ ಆಟಗಾರರು

Team India: ಟೀಮ್ ಇಂಡಿಯಾ ಆಟಗಾರರು ರಣಜಿ ಟೂರ್ನಿ ಆಡುವುದು ಕಡ್ಡಾಯಗೊಳಿಸಲಾಗಿದೆ. ಅದರಂತೆ ಇದೀಗ 10 ವರ್ಷಗಳ ಬಳಿಕ ಮುಂಬೈ ಪರ ಕಣಕ್ಕಿಳಿದಿರುವ ರೋಹಿತ್ ಶರ್ಮಾ ಕೇವಲ 3 ರನ್​​ಗಳಿಸಿ ನಿರಾಸೆ ಮೂಡಿಸಿದ್ದಾರೆ. ಮತ್ತೊಂದೆಡೆ 7 ವರ್ಷಗಳ ಬಳಿಕ ದೆಹಲಿ ಪರ ಬ್ಯಾಟ್ ಬೀಸಿರುವ ರಿಷಭ್ ಪಂತ್​ಗೆ ಒಂದಂಕಿಗಿಂತ ಹೆಚ್ಚು ರನ್​ ಗಳಿಸಲು ಸಾಧ್ಯವಾಗಲಿಲ್ಲ.

ದೇಶೀಯ ಅಂಗಳದಲ್ಲಿ ಮುಗ್ಗರಿಸಿದ ಟೀಮ್ ಇಂಡಿಯಾ ಆಟಗಾರರು
Team India
ಝಾಹಿರ್ ಯೂಸುಫ್
|

Updated on: Jan 23, 2025 | 12:08 PM

Share

ರಣಜಿ ಟೂರ್ನಿಯ ದ್ವಿತೀಯ ಸುತ್ತಿನ ಮೊದಲ ಪಂದ್ಯಗಳಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ಆಟಗಾರರು ಮೊದಲ ಇನಿಂಗ್ಸ್​ಗಳಲ್ಲಿ ಅಟ್ಟರ್ ಫ್ಲಾಪ್ ಆಗಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಜಮ್ಮು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಅಜಿಂಕ್ಯ ರಹಾನೆ ಕಾಣಿಸಿಕೊಂಡಿದ್ದರು.

  • ಮುಂಬೈ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 3 ರನ್​ಗಳಿಸಿ ವಿಕೆಟ್ ಒಪ್ಪಿಸಿದರೆ, ಯಶಸ್ವಿ ಜೈಸ್ವಾಲ್ ಕೇವಲ 4 ರನ್​ಗಳಿಸಿ ಔಟಾದರು.
  • ಆ ಬಳಿಕ ಬಂದ ಅಜಿಂಕ್ಯ ರಹಾನೆ 12 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿದರು. ಇದರ ಬೆನ್ನಲ್ಲೇ ಶ್ರೇಯಸ್ ಅಯ್ಯರ್ (11) ಕೂಡ ಔಟಾದರು.

ಗಿಲ್, ಪಂತ್, ರುತುರಾಜ್ ವಿಫಲ:

  • ಕರ್ನಾಟಕ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಪರ ಆರಂಭಿಕನಾಗಿ ಕಣಕ್ಕಿಳಿದ ಶುಭ್​ಮನ್ ಗಿಲ್ ಕೇವಲ 4 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.
  • ಕೇರಳ ವಿರುದ್ಧ ಪಂದ್ಯದಲ್ಲಿ ಮಧ್ಯ ಪ್ರದೇಶ್ ಪರ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ರಜತ್ ಪಾಟಿದಾರ್ (0) ಸೊನ್ನೆ ಸುತ್ತಿ ಹಿಂತಿರುಗಿದ್ದಾರೆ.
  • ಸೌರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ದೆಹಲಿ ಪರ ಬ್ಯಾಟ್ ಬೀಸಿರುವ ರಿಷಭ್ ಪಂತ್ ಕಲೆಹಾಕಿರುವುದು ಕೇವಲ 1 ರನ್ ಮಾತ್ರ.
  • ಬರೋಡಾ ವಿರುದ್ಧದ ಪಂದ್ಯದಲ್ಲಿ ಮಹಾರಾಷ್ಟ್ರ ತಂಡದ ನಾಯಕನಾಗಿ ಕಾಣಿಸಿಕೊಂಡಿರುವ ರುತುರಾಜ್ ಗಾಯಕ್ವಾಡ್ ಕೇವಲ 10 ರನ್​ಗಳಿಸಿ ಔಟಾಗಿದ್ದಾರೆ.

ಸ್ಟಾರ್ ಆಟಗಾರರ ಕಳಪೆ ಪ್ರದರ್ಶನ:

ಭಾರತ ತಂಡವು ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೀನಾಯವಾಗಿ ಸೋತಿದ್ದರಿಂದ, ಟೀಮ್ ಇಂಡಿಯಾ ಆಟಗಾರರು ರಣಜಿ ಟೂರ್ನಿ ಆಡುವುದನ್ನು ಬಿಸಿಸಿಐ ಕಡ್ಡಾಯಗೊಳಿಸಿದೆ.

ಈ ಕಟ್ಟಪ್ಪಣೆಯ ಬೆನ್ನಲ್ಲೇ ರಣಜಿ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಟೀಮ್ ಇಂಡಿಯಾ ಆಟಗಾರರೆಲ್ಲರೂ ಮೊದಲ ಇನಿಂಗ್ಸ್​ನಲ್ಲಿ ವಿಫಲರಾಗಿದ್ದಾರೆ.

ಇದನ್ನೂ ಓದಿ: ಟೀಮ್ ಇಂಡಿಯಾ ಆರ್ಭಟಕ್ಕೆ ಪಾಕಿಸ್ತಾನ್ ತಂಡದ ದಾಖಲೆ ಉಡೀಸ್

ಹೀಗಾಗಿ ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ದೇಶೀಯ ಅಂಗಳದ ಪ್ರದರ್ಶನವನ್ನು ಪರಿಗಣಿಸಿ ಭಾರತ ತಂಡವನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿಬಹುದು. ಈ ಮೂಲಕ ಉತ್ತಮ ಫಾರ್ಮ್​ನಲ್ಲಿರುವ ಆಟಗಾರರಿಗೆ ಮಣೆ ಹಾಕಲು ಬಿಸಿಸಿಐ ಆಯ್ಕೆ ಸಮಿತಿ ಮುಂದಾಗುವ ಸಾಧ್ಯತೆಯಿದೆ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!