AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ವೈಭವ್​ಗೆ 2ನೇ ಪಂದ್ಯದಲ್ಲೂ ಅವಕಾಶ ಸಿಗಲ್ಲ ಎಂದ ದಿನೇಶ್ ಕಾರ್ತಿಕ್

IND vs ENG 2nd T20: ಮಳೆಯಿಂದಾಗಿ ಮೊದಲ ಟಿ20 ರದ್ದಾದ ಬಳಿಕ, ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಟಿ20 ಪಂದ್ಯಕ್ಕೆ ದಿನೇಶ್ ಕಾರ್ತಿಕ್ ಟೀಂ ಇಂಡಿಯಾದ ಪ್ಲೇಯಿಂಗ್ 11 ಭವಿಷ್ಯ ನುಡಿದಿದ್ದಾರೆ. ಸಂಜು ಸ್ಯಾಮ್ಸನ್‌ಗೆ ಮತ್ತೊಂದು ಅವಕಾಶ ಸಿಗಲಿದ್ದು, ವೈಭವ್ ಸೂರ್ಯವಂಶಿ ತಮ್ಮ ಚೊಚ್ಚಲ ಪಂದ್ಯಕ್ಕಾಗಿ ಕಾಯಬೇಕಾಗುತ್ತದೆ ಎಂದು ಡಿಕೆ ಅಭಿಪ್ರಾಯಪಟ್ಟಿದ್ದಾರೆ. ಮ್ಯಾಂಚೆಸ್ಟರ್ ಪಿಚ್ ಹಾಗೂ ಬೌಲಿಂಗ್ ಬದಲಾವಣೆ ಕುರಿತು ಅವರು ವಿವರಿಸಿದ್ದಾರೆ.

IND vs ENG: ವೈಭವ್​ಗೆ 2ನೇ ಪಂದ್ಯದಲ್ಲೂ ಅವಕಾಶ ಸಿಗಲ್ಲ ಎಂದ ದಿನೇಶ್ ಕಾರ್ತಿಕ್
Team India
ಪೃಥ್ವಿಶಂಕರ
|

Updated on: Jul 02, 2026 | 10:37 PM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಭಾರತದ ಇನ್ನಿಂಗ್ಸ್ ಮುಗಿಯುವವರೆಗೂ ಸಾವಧಾನದಿಂದ ಕಾದಿದ್ದ ಮಳೆರಾಯ ಅದಾದ ಬಳಿಕ ಇಂಗ್ಲೆಂಡ್‌ ಆಟಗಾರರು ಅಂಗಳಕ್ಕಿಳಿಯುವುದಕ್ಕೂ ಬಿಡಲಿಲ್ಲ. ಹೀಗಾಗಿ ಪಂದ್ಯವನ್ನು ರದ್ದುಗೊಳಿಸಬೇಕಾಯಿತು. ಇದೀಗ ಉಭಯ ದೇಶಗಳ ನಡುವಿನ ಎರಡನೇ ಪಂದ್ಯ ಜುಲೈ 4 ರಂದು ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದ್ದು, ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳಲು ಎರಡೂ ತಂಡಗಳು ಹೋರಾಡಲಿವೆ. ಆದಾಗ್ಯೂ ಎರಡನೇ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಯಾವೆಲ್ಲ ಬದಲಾವಣೆಗಳಾಗಲಿವೆ. ವೈಭವ್ ಸೂರ್ಯವಂಶಿಗೆ (Vaibhav Sooryavanshi) ಆಡುವ ಅವಕಾಶ ಸಿಗುತ್ತಾ ಎಂಬುದು ಕುತೂಹಲ ಮೂಡಿಸಿದೆ. ಆದರೆ ಟೀಂ ಇಂಡಿಯಾದ ಮಾಜಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಹೇಳುವ ಪ್ರಕಾರ, ಎರಡನೇ ಪಂದ್ಯದಲ್ಲೂ ವೈಭವ್​ಗೆ ಆಡುವ ಅವಕಾಶ ಸಿಗುವುದಿಲ್ಲವಂತೆ.

ವೈಭವ್ ಇನ್ನು ಕಾಯಬೇಕಾಗುತ್ತದೆ

ಎರಡನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದನ್ನು ಕ್ರಿಕ್‌ಬಜ್‌ನಲ್ಲಿ ವಿವರಿಸಿದ ದಿನೇಶ್ ಕಾರ್ತಿಕ್, ‘ವೈಭವ್ ಸೂರ್ಯವಂಶಿ ಚೊಚ್ಚಲ ಪ್ರವೇಶಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ. ಆದರೆ ಎರಡನೇ ಪಂದ್ಯದಲ್ಲೂ ವೈಭವ್​ಗೆ ಆಡುವ ಅವಕಾಶ ಸಿಗುವುದು ಕಷ್ಟಕರ. ಏಕೆಂದರೆ 2026 ರ ಟಿ20 ವಿಶ್ವಕಪ್‌ನಲ್ಲಿ ಅಪಾರ ಒತ್ತಡದ ಸಮಯದಲ್ಲೂ ಸಂಜು ಸ್ಯಾಮ್ಸನ್ ತಂಡಕ್ಕಾಗಿ ಅವರು ಏನು ಮಾಡಿದರು ಎಂದು ಎಲ್ಲರಿಗೂ ತಿಳಿದಿದೆ. ಹೀಗಾಗಿ ಆಯ್ಕೆ ಮಂಡಳಿ ಸಂಜು ಸ್ಯಾಮ್ಸನ್‌ಗೆ ಮತ್ತೊಂದು ಅವಕಾಶ ನೀಡುತ್ತದೆ ಎಂದು ಭಾವಿಸುತ್ತೇನೆ. ಅಲ್ಲದೆ ಇಂತಹ ಸಂದರ್ಭದಲ್ಲಿ ನಾವು ಸಂಜು ಅವರನ್ನು ಬೆಂಬಲಿಸಬೇಕು. ಇದರಿಂದಾಗಿ ವೈಭವ್ ಚೊಚ್ಚಲ ಪಂದ್ಯವನ್ನಾಡಲು ಇನ್ನು ಕಾಯಬೇಕಾಗುತ್ತದೆ. ಅವಕಾಶ ಸಿಕ್ಕಾಗ ವೈಭವ್ ಕಂಡಿತವಾಗಿ ಅದ್ಭುತ ಪ್ರದರ್ಶನ ನೀಡುತ್ತಾರೆ ಏಕೆಂದರೆ ಅವರಲ್ಲಿ ಅಪಾರ ಪ್ರತಿಭೆ ಇದೆ ಎಂದು ಡಿಕೆ ಅಭಿಪ್ರಾಯಪಟ್ಟಿದ್ದಾರೆ.

ತಂಡದಲ್ಲಿ ಯಾವುದೇ ಬದಲಾವಣೆಗಳಿಲ್ಲ

ದಿನೇಶ್ ಕಾರ್ತಿಕ್ ಪ್ರಕಾರ, ಎರಡನೇ ಟಿ20ಪಂದ್ಯಕ್ಕೆ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ. ಆದಾಗ್ಯೂ, ತಿಲಕ್ ವರ್ಮಾ ಅವರ ಪ್ರದರ್ಶನವನ್ನು ಸೂಕ್ಷ್ಮವಾಗಿ ಗಮನಿಸಲಾಗುವುದು. ಚೆಸ್ಟರ್-ಲೆ-ಸ್ಟ್ರೀಟ್ ಮೈದಾನದ ಬೌಂಡರಿಗಳು ದೊಡ್ಡದಾಗಿದ್ದವು. ಆದರೆ ಮ್ಯಾಂಚೆಸ್ಟರ್ ಮೈದಾನದ ಬೌಂಡರಿಗಳು ಚಿಕ್ಕದಾಗಿವೆ ಮತ್ತು ಚಪ್ಪಟೆಯಾಗಿವೆ. ಹೀಗಾಗಿ ಇಲ್ಲಿ ರನ್ ಗಳಿಸುವುದು ಸುಲಭ. ಆದ್ದರಿಂದ ಭಾರತದ ಬ್ಯಾಟಿಂಗ್ ಕ್ರಮಾಂಕದಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ ಎಂದು ನಾನು ನಂಬುತ್ತೇನೆ, ಆದರೆ ಬೌಲಿಂಗ್‌ನಲ್ಲಿ ಬದಲಾವಣೆಯ ಸಾಧ್ಯತೆಯಿದೆ. ಮೊದಲ ಪಂದ್ಯದಲ್ಲಿ ಭಾರತವು ಮೂವರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸಿತ್ತು. ಆದರೆ ಈ ಪಂದ್ಯಕ್ಕೆ ಇಬ್ಬರು ಸ್ಪಿನ್ನರ್‌ಗಳನ್ನು ಆಡಿಸುವ ಸಾಧ್ಯತೆಗಳಿವೆ ಎಂದಿದ್ದಾರೆ.

‘ಅವರೆಲ್ಲರ ಪ್ಯಾಂಟ್ ಬಿಚ್ಚಿಸುತ್ತಿದ್ದ’; ವೈಭವ್​ಗೆ ಅವಕಾಶ ನೀಡದ್ದಕ್ಕೆ ರವಿಶಾಸ್ತ್ರಿ ಗರಂ

ಡಿಕೆ ಪ್ರಕಾರ 2ನೇ ಪಂದ್ಯಕ್ಕೆ ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ರವಿ ಬಿಷ್ಣೋಯ್/ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್