AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ರಿಂದ 6 ಪಂದ್ಯ… ಏಕದಿನ ವಿಶ್ವಕಪ್​ಗಾಗಿ ಬಿಸಿಸಿಐ ರಣತಂತ್ರ!

2023ರ ಏಕದಿನ ವಿಶ್ವಕಪ್‌ನಲ್ಲಿ ಕೂದಲೆಳೆ ಅಂತರದಲ್ಲಿ ಕೈತಪ್ಪಿದ ಪ್ರಶಸ್ತಿಯನ್ನು 2027ರಲ್ಲಿ ಹೇಗಾದರೂ ಮಾಡಿ ಮುಡಿಗೇರಿಸಿಕೊಳ್ಳಲೇಬೇಕು ಎಂದು ಬಿಸಿಸಿಐ ಈಗಿನಿಂದಲೇ ವಿಶೇಷ ತಂತ್ರಗಳನ್ನು ರೂಪಿಸುತ್ತಿದೆ. ಅದರ ಭಾಗವಾಗಿಯೇ, ಐಪಿಎಲ್ ಮುಕ್ತಾಯದ ಬೆನ್ನಲ್ಲೇ ದ್ವಿಪಕ್ಷೀಯ ಏಕದಿನ ಸರಣಿಯನ್ನು ಆಯೋಜಿಸುವಂತೆ ಸೌತ್ ಆಫ್ರಿಕಾ ಕ್ರಿಕೆಟ್ ಮಂಡಳಿಗೆ ಬಿಸಿಸಿಐ ಅಧಿಕೃತ ಮನವಿ ಮಾಡಿದೆ.

4 ರಿಂದ 6 ಪಂದ್ಯ... ಏಕದಿನ ವಿಶ್ವಕಪ್​ಗಾಗಿ ಬಿಸಿಸಿಐ ರಣತಂತ್ರ!
Team India Image Credit source: BCCI
ಝಾಹಿರ್ ಯೂಸುಫ್
|

Updated on: Sep 03, 2026 | 7:26 AM

Share

2027ರ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಭರ್ಜರಿ ತಯಾರಿ ನಡೆಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಈಗಿನಿಂದಲೇ ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ. ಇದರ ಭಾಗವಾಗಿ, ಮೆಗಾ ಟೂರ್ನಿ ಆರಂಭಕ್ಕೂ ಮುನ್ನ ಸೌತ್ ಆಫ್ರಿಕಾ ವಿರುದ್ಧ ಅವರದ್ದೇ ನೆಲದಲ್ಲಿ 4 ರಿಂದ 6 ಪಂದ್ಯಗಳ ಏಕದಿನ  ಸರಣಿಯನ್ನು ಆಯೋಜಿಸಲು ಬಿಸಿಸಿಐ ಮತ್ತು ಕ್ರಿಕೆಟ್ ಸೌತ್ ಆಫ್ರಿಕಾ ಮಾತುಕತೆ ನಡೆಸುತ್ತಿವೆ.

2027ರ ಅಕ್ಟೋಬರ್ ಮತ್ತು ನವೆಂಬರ್ ಅವಧಿಯಲ್ಲಿ ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ವಿಶ್ವಕಪ್‌ಗೆ ಆತಿಥ್ಯ ವಹಿಸುತ್ತಿರುವುದರಿಂದ, ಈ ಪ್ರವಾಸವು ಭಾರತ ತಂಡಕ್ಕೆ ಅತ್ಯಂತ ನಿರ್ಣಾಯಕ ಎನಿಸಿಕೊಳ್ಳಲಿದೆ.

ದೀರ್ಘಾವಧಿಯ ಸರಣಿ:

ಸಾಮಾನ್ಯವಾಗಿ ದ್ವಿಪಕ್ಷೀಯ ಸರಣಿಗಳಲ್ಲಿ 3 ಏಕದಿನ ಪಂದ್ಯಗಳನ್ನು ಆಡಲಾಗುತ್ತದೆ. ಆದರೆ, ವಿಶ್ವಕಪ್ ಸಿದ್ಧತೆಗಾಗಿ ಈ ಬಾರಿ 4 ರಿಂದ 6 ಪಂದ್ಯಗಳನ್ನು ಆಯೋಜಿಸಲು ಉಭಯ ಮಂಡಳಿಗಳು ಒಲವು ತೋರಿವೆ.

ಈ ಸರಣಿಯು 2027ರ ದ್ವಿತೀಯಾರ್ಧದಲ್ಲಿ, ಅಂದರೆ ಐಪಿಎಲ್ 2027 ಮುಗಿದ ನಂತರ ಮತ್ತು ವಿಶ್ವಕಪ್ ಆರಂಭಕ್ಕೂ ಮುನ್ನ ನಡೆಯುವ ಸಾಧ್ಯತೆಯಿದೆ.

ಇನ್ನು ಈ ಸರಣಿ ಆಯೋಜನೆಯ ಮುಖ್ಯ ಉದ್ದೇಶ, ಸೌತ್ ಆಫ್ರಿಕಾದ ವೇಗ ಹಾಗೂ ಬೌನ್ಸ್ ಪ್ರಧಾನ ಪಿಚ್‌ಗಳಿಗೆ ಭಾರತೀಯ ಆಟಗಾರರು ಬೇಗನೆ ಹೊಂದಿಕೊಳ್ಳುವಂತೆ ಮಾಡುವುದಾಗಿದೆ. ಆ ಮೂಲಕ ಟೀಮ್ ಇಂಡಿಯಾವನ್ನು ಮುಂಬರುವ ಏಕದಿನ ವಿಶ್ವಕಪ್‌ಗೆ ಸಂಪೂರ್ಣವಾಗಿ ಸಜ್ಜುಗೊಳಿಸುವುದು ಬಿಸಿಸಿಐನ ತಂತ್ರವಾಗಿದೆ.

ಏಕದಿನ ವಿಶ್ವಕಪ್ ಯಾವಾಗ ಶುರು?

2027ರ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯು 2027ರ ಅಕ್ಟೋಬರ್ 4 ರಿಂದ ನವೆಂಬರ್ 21 ರವರೆಗೆ ನಡೆಯಲಿದೆ. ಮುಂಬರುವ ಟೂರ್ನಿಗೆ ಆಫ್ರಿಕಾ ಖಂಡದ ಪ್ರಮುಖ ಮೂರು ದೇಶಗಳಾದ ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆತಿಥ್ಯವಹಿಸಲಿದೆ.

ಇದನ್ನೂ ಓದಿ: 11+3 ತಂಡಗಳು, ಸೂಪರ್-7: ಏಕದಿನ ವಿಶ್ವಕಪ್ ಸ್ವರೂಪ ಬದಲು

ಒಟ್ಟಾರೆಯಾಗಿ ಹೇಳುವುದಾದರೆ, 2027ರ ಏಕದಿನ ವಿಶ್ವಕಪ್‌ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲು ಟೀಮ್ ಇಂಡಿಯಾ ಈಗಿನಿಂದಲೇ ರಣತಂತ್ರಗಳನ್ನು ಹೆಣೆಯಲಾರಂಭಿಸಿದೆ. ಸೌತ್ ಆಫ್ರಿಕಾದ ಕಠಿಣ ಹಾಗೂ ಸವಾಲಿನ ಪಿಚ್‌ಗಳಲ್ಲಿ ಆಯೋಜನೆಯಾಗಲಿರುವ ಈ ಮೆಗಾ ಏಕದಿನ ಸರಣಿಯು, ಭಾರತೀಯ ಆಟಗಾರರ ಸಾಮರ್ಥ್ಯಕ್ಕೆ ಅಗ್ನಿಪರೀಕ್ಷೆಯಾಗುವುದರಲ್ಲಿ ಸಂದೇಹವಿಲ್ಲ. 2023ರ ವಿಶ್ವಕಪ್‌ನಲ್ಲಿ ಕೈತಪ್ಪಿದ ಪ್ರಶಸ್ತಿಯನ್ನು ಈ ಬಾರಿ ಆಫ್ರಿಕಾ ಮಣ್ಣಿನಲ್ಲಿ ಎತ್ತಿಹಿಡಿಯಲು ಬಿಸಿಸಿಐ ರೂಪಿಸಿರುವ ಈ ‘ಮಾಸ್ಟರ್ ಪ್ಲಾನ್’ ಎಷ್ಟು ಯಶಸ್ವಿಯಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

Follow Us
ಇಂದು ಕೃಷ್ಣಪಕ್ಷ ಸಪ್ತಮಿ: : ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಇಂದು ಕೃಷ್ಣಪಕ್ಷ ಸಪ್ತಮಿ: : ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಜಾಗಿಂಗ್ ಮಾಡುತ್ತಿದ್ದ ಮಹಿಳೆಯರ ವಿಡಿಯೋ ರೆಕಾರ್ಡ್ ಮಾಡಿ ಸಿಕ್ಕಿಬಿದ್ದ ಯುವ
ಜಾಗಿಂಗ್ ಮಾಡುತ್ತಿದ್ದ ಮಹಿಳೆಯರ ವಿಡಿಯೋ ರೆಕಾರ್ಡ್ ಮಾಡಿ ಸಿಕ್ಕಿಬಿದ್ದ ಯುವ
ನೇಪಾಳದಲ್ಲಿ ಮಣ್ಣಿನಡಿ ಸಿಲುಕಿದ್ದ 2 ವರ್ಷದ ಮಗುವಿನ ಅಚ್ಚರಿಯ ರಕ್ಷಣೆ
ನೇಪಾಳದಲ್ಲಿ ಮಣ್ಣಿನಡಿ ಸಿಲುಕಿದ್ದ 2 ವರ್ಷದ ಮಗುವಿನ ಅಚ್ಚರಿಯ ರಕ್ಷಣೆ
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ