AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಕನಸನ್ನು ನುಚ್ಚುನೂರು ಮಾಡಿದ ಟೀಮ್ ಇಂಡಿಯಾ

Champions Trophy 2025: ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡ ಫೈನಲ್​ಗೇರಿದೆ. ಅದರಂತೆ ಮಾರ್ಚ್ 9 ರಂದು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ. ಇತ್ತ ಭಾರತ ತಂಡ ಫೈನಲ್​ಗೇರುತ್ತಿದ್ದಂತೆ ಪಾಕಿಸ್ತಾನದ ಕನಸು ನುಚ್ಚುನೂರಾಗಿದೆ.

ಪಾಕಿಸ್ತಾನದ ಕನಸನ್ನು ನುಚ್ಚುನೂರು ಮಾಡಿದ ಟೀಮ್ ಇಂಡಿಯಾ
Virat Kohli - Pakistan
ಝಾಹಿರ್ ಯೂಸುಫ್
|

Updated on: Mar 05, 2025 | 6:55 AM

Share

ಗೆದ್ದಿದ್ದು ಟೀಮ್ ಇಂಡಿಯಾ. ಸೋತಿದ್ದು ಆಸ್ಟ್ರೇಲಿಯಾ. ಕನಸು ನುಚ್ಚುನೂರಾಗಿದ್ದ ಪಾಕಿಸ್ತಾನದ್ದು. ಹೌದು, 29 ವರ್ಷಗಳ ಬಳಿಕ ಐಸಿಸಿ ಟೂರ್ನಿ ಆಯೋಜಿಸಿರುವ ಪಾಕಿಸ್ತಾನದ ಕನಸಿಗೆ ಭಾರತ ತಂಡ ಕೊಳ್ಳಿ ಇಟ್ಟಿದೆ. ಅದು ಸಹ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿಯುವ ಮೂಲಕ.

ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಸ್ಟೀವ್ ಸ್ಮಿತ್ (73) ಅವರ ಅರ್ಧಶತಕ ಹಾಗೂ ಅಲೆಕ್ಸ್ ಕ್ಯಾರಿ (61) ಹಾಫ್ ಸೆಂಚುರಿಯೊಂದಿಗೆ ಆಸ್ಟ್ರೇಲಿಯಾ ತಂಡ 49.3 ಓವರ್​ಗಳಲ್ಲಿ 264 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಶುಭ್​ಮನ್ ಗಿಲ್ (8) ಹಾಗೂ ರೋಹಿತ್ ಶರ್ಮಾ (28) ಬೇಗನೆ ಔಟಾಗಿದ್ದರಿಂದ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಇನಿಂಗ್ಸ್ ಕಟ್ಟಿದರು.

ಮೂರನೇ ವಿಕೆಟ್​ಗೆ 91 ರನ್​ಗಳ ಜೊತೆಯಾಟವಾಡಿದ ಬಳಿಕ ಶ್ರೇಯಸ್ ಅಯ್ಯರ್ (45) ಔಟಾದರು. ಇದಾಗ್ಯೂ ಏಕಾಂಗಿ ಹೋರಾಟ ಮುಂದುವರೆಸಿದ ಕೊಹ್ಲಿ 98 ಎಸೆತಗಳಲ್ಲಿ 84 ರನ್ ಬಾರಿಸಿ ಟೀಮ್ ಇಂಡಿಯಾದ ಗೆಲುವನ್ನು ಖಚಿತಪಡಿಸಿದರು. ಅಂತಿಮವಾಗಿ ಭಾರತ ತಂಡ 48.1 ಓವರ್​ಗಳಲ್ಲಿ 6 ವಿಕೆಟ್​ ಕಳೆದುಕೊಂಡು 267 ರನ್ ಬಾರಿಸಿ 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡ ಫೈನಲ್​ಗೇರಿದೆ.

ಪಾಕಿಸ್ತಾನದ ಕನಸು ನುಚ್ಚುನೂರು:

ಇತ್ತ ಟೀಮ್ ಇಂಡಿಯಾ ಫೈನಲ್​ಗೇರುತ್ತಿದ್ದಂತೆ ಅತ್ತ ಪಾಕಿಸ್ತಾನದ ಕನಸು ನುಚ್ಚುನೂರಾಗಿದೆ. ಅಂದರೆ 29 ವರ್ಷಗಳ ಬಳಿಕ ಐಸಿಸಿ ಟೂರ್ನಿಗೆ ಆತಿಥ್ಯವಹಿಸಿರುವ ಪಾಕಿಸ್ತಾನಕ್ಕೆ ಫೈನಲ್ ಮ್ಯಾಚ್ ಆಯೋಜಿಸುವ ಅವಕಾಶ ಕೈತಪ್ಪಿದೆ.

ಏಕೆಂದರೆ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿರುವ ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ಫೈನಲ್​ಗೇರಿದರೆ ಅಂತಿಮ ಪಂದ್ಯವನ್ನು ದುಬೈನಲ್ಲೇ ಆಯೋಜಿಸಲು ಈ ಮೊದಲೇ ನಿರ್ಧರಿಸಲಾಗಿತ್ತು. ಅದರಂತೆ ಇದೀಗ ಭಾರತ ತಂಡ ಫೈನಲ್​ಗೆ ಎಂಟ್ರಿ ಕೊಟ್ಟಿದೆ.

ಇದನ್ನೂ ಓದಿ: Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ದುಬೈನ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ಆಯೋಜನೆಗೊಳ್ಳುವುದು ಖಚಿತವಾಗಿದೆ. ಫೈನಲ್​ ಮ್ಯಾಚ್ ಎಲ್ಲಿ ಎಂಬುದು ಖಚಿತವಾಗುತ್ತಿದ್ದಂತೆ 29 ವರ್ಷಗಳ ಬಳಿಕ ಐಸಿಸಿ ಟೂರ್ನಿಯ ಮಹತ್ವದ ಪಂದ್ಯವನ್ನು ಆಯೋಜಿಸುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​​ನ ಕನಸು ನುಚ್ಚುನೂರಾಗಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ