Mohammed Siraj: ಮೊಹಮ್ಮದ್ ಸಿರಾಜ್​ಗೆ ಕೂಡಿಬಂತು ಕಂಕಣ ಭಾಗ್ಯ?: ವಧು ಯಾರು ಗೊತ್ತೇ?

Mohammed Siraj Marriage: 29 ವರ್ಷದ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಮೊಹಮ್ಮದ್ ಸಿರಾಜ್ ಮದುವೆಗೆ ಸಂಬಂಧಿಸಿದ ಸುದ್ದಿಯೊಂದು ವೈರಲ್ ಆಗುತ್ತಿದೆ. ಸಿರಾಜ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಸದ್ಯದಲ್ಲೇ ಮದುವೆ ಆಗಲಿದ್ದಾರಂತೆ. ವಧು ಕೂಡ ಹೈದರಾಬಾದ್‌ನವರೇ ಆಗಿದ್ದಾರೆ.

Mohammed Siraj: ಮೊಹಮ್ಮದ್ ಸಿರಾಜ್​ಗೆ ಕೂಡಿಬಂತು ಕಂಕಣ ಭಾಗ್ಯ?: ವಧು ಯಾರು ಗೊತ್ತೇ?
Mohammed Siraj Marriage
Follow us
|

Updated on: Nov 21, 2023 | 3:06 PM

ಭಾರತ ಕ್ರಿಕೆಟ್ ತಂಡದ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ (Mohammed Siraj) ಅವರಿಗೆ ಈ ಬಾರಿಯ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಷ್ಟೇನು ಅದೃಷ್ಟ ಕೈಹಿಡಿಯಲಿಲ್ಲ. ಆಡಿದ 11 ಪಂದ್ಯಗಳಲ್ಲಿ 33.50 ಸರಾಸರಿಯಲ್ಲಿ 14 ವಿಕೆಟ್ ಪಡೆದರು. ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೋಡಿ ಮಾಡುವಲ್ಲಿ ವಿಫಲರಾಗಿ ದುಬಾರಿಯಾದರು. ಪಂದ್ಯ ಮುಗಿದ ಬಳಿಕ ವಿಶ್ವಕಪ್ ಎತ್ತಿ ಹಿಡಿಯಲು ಸಾಧ್ಯವಾಗಲಿಲ್ಲ ಎಂಬ ದುಃಖದಲ್ಲಿ ಕಣ್ಣೀರು ಕೂಡ ಇಟ್ಟಿದ್ದರು. ವಿಶ್ವಕಪ್ ಮುಗಿದು ಎರಡು ದಿನವಾಗಿದೆ. ಇದೀಗ ಹೊಸ ಸುದ್ದಿ ಏನೆಂದರೆ, ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಹೈದರಾಬಾದ್ ವೇಗಿ ಮೊಹಮ್ಮದ್ ಸಿರಾಜ್ ಮದುವೆಯಾಗಲು ಹೊರಟಿದ್ದಾರಂತೆ.

29 ವರ್ಷದ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಸಿರಾಜ್ ಮದುವೆಗೆ ಸಂಬಂಧಿಸಿದ ಸುದ್ದಿಯೊಂದು ವೈರಲ್ ಆಗುತ್ತಿದೆ. ಸಿರಾಜ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಸದ್ಯದಲ್ಲೇ ಮದುವೆ ಆಗಲಿದ್ದಾರಂತೆ. ವಧು ಕೂಡ ಹೈದರಾಬಾದ್‌ನವರೇ ಆಗಿದ್ದಾರೆ. ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಮಧ್ಯದಲ್ಲಿ ಸಿರಾಜ್ ಮದುವೆ ನಡೆಯಲಿದೆ ಎಂದು ವರದಿಯಾಗಿದೆ. ಸಿರಾಜ್ ಮದುವೆಗೆ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಆಗಮಿಸಲಿದ್ದಾರಂತೆ. ಆದರೆ, ಈ ಸುದ್ದಿ ಎಷ್ಟು ಸತ್ಯ ಎಂಬುದು ತಿಳಿದಿಲ್ಲ. ಸಿರಾಜ್ ಕಡೆಯಿಂದಲೇ ಅಧಿಕೃತ ಘೋಷಣೆ ಆಗಬೇಕು.

IND vs AUS, WC Final: ಮುಂಬೈ ತಲುಪಿದ ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ: ಕ್ಯಾಮೆರಾ ಕಂಡು ಗರಂ ಅನುಷ್ಕಾ

ಇದನ್ನೂ ಓದಿ
Image
Crime News: ನೀನು ಮಟನ್ ತಿಂದಿದ್ದರಿಂದ ಭಾರತ ಸೋತಿತು ಎಂದ ತಮ್ಮನನ್ನೇ ಕೊಂದ ಅಣ್ಣ
Image
Team India Dressing Room: ಕೊನೆಗೂ ಸಿಕ್ತು ಮೋದಿ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ಗೆ ಬಂದ ವಿಡಿಯೋ: ಇಲ್ಲಿದೆ ನೋಡಿ
Image
Virat Kohli: ವಿಶ್ವಕಪ್ ಸೋಲಿನ ನಂತರ ರೋಹಿತ್ ಪತ್ನಿಯ ಸಹೋದರನ ಜೊತೆ ಸಂಬಂಧ ಕೈಬಿಟ್ಟ ಕೊಹ್ಲಿ
Image
ICC ODI World Cup 2027: ಮುಂದಿನ ಐಸಿಸಿ ಏಕದಿನ ವಿಶ್ವಕಪ್ ಯಾವಾಗ, ಎಲ್ಲಿ ನಡೆಯಲಿದೆ ಗೊತ್ತೇ?: ಎಷ್ಟು ತಂಡಗಳಿರುತ್ತವೆ?

ಹಾಗಂತ ಸಿರಾಜ್ ಮದುವೆ ಬಗ್ಗೆ ಸುದ್ದಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಸಿರಾಜ್ ಸದ್ಯದಲ್ಲೇ ವಿವಾಹವಾಗಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿತ್ತು. ಅವರು ತಮ್ಮ ಬಾಲ್ಯದ ಗೆಳತಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಹರಿದಾಡಿದ್ದವು. ಈ ಬಗ್ಗೆ ಅವರ ಬಳಿ ಕೇಳಿದಾಗ ಪ್ರತಿಕ್ರಿಯಿಸಲು ಸಿರಾಜ್ ನಿರಾಕರಿಸಿದ್ದರು. ಇದೀಗ ಪುನಃ ಸಿರಾಜ್ ಮದುವೆ ಬಗ್ಗೆ ಸುದ್ದಿ ಹಬ್ಬಿದೆ.

ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿ ಬೆಳಕಿಗೆ ಬಂದ ಮೊಹಮ್ಮದ್ ಸಿರಾಜ್, ತಮ್ಮ ಮಾರಕ ವೇಗದಿಂದ ಬೇಗನೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದುಕೊಂಡರು. ಭಾರತ ತಂಡದ ಹಲವು ವಿಜಯಗಳಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದಾರೆ. ಒಂದೇ ಓವರ್​ನಲ್ಲಿ ನಾಲ್ಕು ವಿಕೆಟ್ ಪಡೆದ ಭಾರತದ ಏಕೈಕ ಬೌಲರ್ ಎಂಬ ಅಪರೂಪದ ಹೆಗ್ಗಳಿಕೆಗೂ ಸಿರಾಜ್ ಪಾತ್ರರಾಗಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ
‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್
‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್
ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ
ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ