AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Siraj: ಮೊಹಮ್ಮದ್ ಸಿರಾಜ್​ಗೆ ಕೂಡಿಬಂತು ಕಂಕಣ ಭಾಗ್ಯ?: ವಧು ಯಾರು ಗೊತ್ತೇ?

Mohammed Siraj Marriage: 29 ವರ್ಷದ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಮೊಹಮ್ಮದ್ ಸಿರಾಜ್ ಮದುವೆಗೆ ಸಂಬಂಧಿಸಿದ ಸುದ್ದಿಯೊಂದು ವೈರಲ್ ಆಗುತ್ತಿದೆ. ಸಿರಾಜ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಸದ್ಯದಲ್ಲೇ ಮದುವೆ ಆಗಲಿದ್ದಾರಂತೆ. ವಧು ಕೂಡ ಹೈದರಾಬಾದ್‌ನವರೇ ಆಗಿದ್ದಾರೆ.

Mohammed Siraj: ಮೊಹಮ್ಮದ್ ಸಿರಾಜ್​ಗೆ ಕೂಡಿಬಂತು ಕಂಕಣ ಭಾಗ್ಯ?: ವಧು ಯಾರು ಗೊತ್ತೇ?
Mohammed Siraj Marriage
Vinay Bhat
|

Updated on: Nov 21, 2023 | 3:06 PM

Share

ಭಾರತ ಕ್ರಿಕೆಟ್ ತಂಡದ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ (Mohammed Siraj) ಅವರಿಗೆ ಈ ಬಾರಿಯ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಷ್ಟೇನು ಅದೃಷ್ಟ ಕೈಹಿಡಿಯಲಿಲ್ಲ. ಆಡಿದ 11 ಪಂದ್ಯಗಳಲ್ಲಿ 33.50 ಸರಾಸರಿಯಲ್ಲಿ 14 ವಿಕೆಟ್ ಪಡೆದರು. ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೋಡಿ ಮಾಡುವಲ್ಲಿ ವಿಫಲರಾಗಿ ದುಬಾರಿಯಾದರು. ಪಂದ್ಯ ಮುಗಿದ ಬಳಿಕ ವಿಶ್ವಕಪ್ ಎತ್ತಿ ಹಿಡಿಯಲು ಸಾಧ್ಯವಾಗಲಿಲ್ಲ ಎಂಬ ದುಃಖದಲ್ಲಿ ಕಣ್ಣೀರು ಕೂಡ ಇಟ್ಟಿದ್ದರು. ವಿಶ್ವಕಪ್ ಮುಗಿದು ಎರಡು ದಿನವಾಗಿದೆ. ಇದೀಗ ಹೊಸ ಸುದ್ದಿ ಏನೆಂದರೆ, ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಹೈದರಾಬಾದ್ ವೇಗಿ ಮೊಹಮ್ಮದ್ ಸಿರಾಜ್ ಮದುವೆಯಾಗಲು ಹೊರಟಿದ್ದಾರಂತೆ.

29 ವರ್ಷದ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಸಿರಾಜ್ ಮದುವೆಗೆ ಸಂಬಂಧಿಸಿದ ಸುದ್ದಿಯೊಂದು ವೈರಲ್ ಆಗುತ್ತಿದೆ. ಸಿರಾಜ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಸದ್ಯದಲ್ಲೇ ಮದುವೆ ಆಗಲಿದ್ದಾರಂತೆ. ವಧು ಕೂಡ ಹೈದರಾಬಾದ್‌ನವರೇ ಆಗಿದ್ದಾರೆ. ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಮಧ್ಯದಲ್ಲಿ ಸಿರಾಜ್ ಮದುವೆ ನಡೆಯಲಿದೆ ಎಂದು ವರದಿಯಾಗಿದೆ. ಸಿರಾಜ್ ಮದುವೆಗೆ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಆಗಮಿಸಲಿದ್ದಾರಂತೆ. ಆದರೆ, ಈ ಸುದ್ದಿ ಎಷ್ಟು ಸತ್ಯ ಎಂಬುದು ತಿಳಿದಿಲ್ಲ. ಸಿರಾಜ್ ಕಡೆಯಿಂದಲೇ ಅಧಿಕೃತ ಘೋಷಣೆ ಆಗಬೇಕು.

IND vs AUS, WC Final: ಮುಂಬೈ ತಲುಪಿದ ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ: ಕ್ಯಾಮೆರಾ ಕಂಡು ಗರಂ ಅನುಷ್ಕಾ

ಇದನ್ನೂ ಓದಿ
Image
ನೀನು ಮಟನ್ ತಿಂದಿದ್ದರಿಂದ ಭಾರತ ಸೋತಿತು ಎಂದ ತಮ್ಮನನ್ನೇ ಕೊಂದ ಅಣ್ಣ
Image
ಕೊನೆಗೂ ಸಿಕ್ತು ಮೋದಿ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ಗೆ ಬಂದ ವಿಡಿಯೋ
Image
ಸೋಲಿನ ನಂತರ ರೋಹಿತ್ ಪತ್ನಿಯ ಸಹೋದರನ ಜೊತೆ ಸಂಬಂಧ ಕೈಬಿಟ್ಟ ಕೊಹ್ಲಿ
Image
ಮುಂದಿನ ಐಸಿಸಿ ಏಕದಿನ ವಿಶ್ವಕಪ್ ಯಾವಾಗ, ಎಲ್ಲಿ ನಡೆಯಲಿದೆ ಗೊತ್ತೇ?

ಹಾಗಂತ ಸಿರಾಜ್ ಮದುವೆ ಬಗ್ಗೆ ಸುದ್ದಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಸಿರಾಜ್ ಸದ್ಯದಲ್ಲೇ ವಿವಾಹವಾಗಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿತ್ತು. ಅವರು ತಮ್ಮ ಬಾಲ್ಯದ ಗೆಳತಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಹರಿದಾಡಿದ್ದವು. ಈ ಬಗ್ಗೆ ಅವರ ಬಳಿ ಕೇಳಿದಾಗ ಪ್ರತಿಕ್ರಿಯಿಸಲು ಸಿರಾಜ್ ನಿರಾಕರಿಸಿದ್ದರು. ಇದೀಗ ಪುನಃ ಸಿರಾಜ್ ಮದುವೆ ಬಗ್ಗೆ ಸುದ್ದಿ ಹಬ್ಬಿದೆ.

ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿ ಬೆಳಕಿಗೆ ಬಂದ ಮೊಹಮ್ಮದ್ ಸಿರಾಜ್, ತಮ್ಮ ಮಾರಕ ವೇಗದಿಂದ ಬೇಗನೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದುಕೊಂಡರು. ಭಾರತ ತಂಡದ ಹಲವು ವಿಜಯಗಳಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದಾರೆ. ಒಂದೇ ಓವರ್​ನಲ್ಲಿ ನಾಲ್ಕು ವಿಕೆಟ್ ಪಡೆದ ಭಾರತದ ಏಕೈಕ ಬೌಲರ್ ಎಂಬ ಅಪರೂಪದ ಹೆಗ್ಗಳಿಕೆಗೂ ಸಿರಾಜ್ ಪಾತ್ರರಾಗಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ