AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಸೂರ್ಯಕುಮಾರ್ ಯಾದವ್​ ಕಾಲಿಗೆ ಗಂಭೀರ ಗಾಯ: ವಿಡಿಯೋ ವೈರಲ್

Suryakumar Yadav: ಟಿ20 ವಿಶ್ವಕಪ್​ನಲ್ಲಿ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯ. ಏಕೆಂದರೆ ಮಧ್ಯಮ ಕ್ರಮಾಂಕದಲ್ಲಿ ಹೊಡಿಬಡಿ ಬ್ಯಾಟಿಂಗ್ ಮೂಲಕ ಸೂರ್ಯ ಅಬ್ಬರಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಅವರು ಟಿ20 ಕ್ರಿಕೆಟ್​ನಲ್ಲಿ ಕೇವಲ 56 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್ ಪೂರೈಸಿದರು. ಅಷ್ಟೇ ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ ಶತಕ ಸಿಡಿಸುವ ಮೂಲಕ ಟೀಮ್ ಇಂಡಿಯಾ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 4 ಸೆಂಚುರಿ ಸಿಡಿಸಿದ ದಾಖಲೆಯನ್ನೂ ಕೂಡ ಬರೆದಿದ್ದಾರೆ.

VIDEO: ಸೂರ್ಯಕುಮಾರ್ ಯಾದವ್​ ಕಾಲಿಗೆ ಗಂಭೀರ ಗಾಯ: ವಿಡಿಯೋ ವೈರಲ್
Suryakumar Yadav
TV9 Web
| Edited By: |

Updated on: Dec 24, 2023 | 8:32 AM

Share

ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ (Suryakumar Yadav) ಗಂಭೀರವಾಗಿ ಗಾಯಗೊಂಡಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದ ವೇಳೆ ಸೂರ್ಯ ಗಾಯಕ್ಕೆ ತುತ್ತಾಗಿದ್ದರು. ಇದಾಗ್ಯೂ ಈ ಗಾಯ ಗಂಭೀರವಲ್ಲ ಎನ್ನಲಾಗಿತ್ತು. ಆದರೀಗ ಸೂರ್ಯಕುಮಾರ್ ನಡೆದಾಡಲು ಊರುಗೋಲಿನ ನೆರವು ಪಡೆಯುತ್ತಿರುವುದು ವಿಡಿಯೋದಿಂದ ಬಹಿರಂಗವಾಗಿದೆ.

ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಸೂರ್ಯಕುಮಾರ್ ಯಾದವ್ ಅವರ ಪಾದವು ಟ್ವಿಸ್ಟ್ ಆಗಿತ್ತು. ಹೀಗಾಗಿ ಅವರು ಅರ್ಧದಲ್ಲೇ ಮೈದಾನ ತೊರೆದಿದ್ದರು. ಆ ಬಳಿಕ ಗಾಯದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬಿದ್ದಿರಲಿಲ್ಲ.

ಇದೀಗ ಗಾಯವು ಗಂಭೀರವಾಗಿರುವ ಕಾರಣ ಸೂರ್ಯಕುಮಾರ್ ಯಾದವ್ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲದೆ ಐಪಿಎಲ್​ಗೂ ಮುನ್ನ ಅವರು ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡುವುದಿಲ್ಲ ಎಂದು ತಿಳಿದು ಬಂದಿದೆ.

ಒಂದು ವೇಳೆ ಅವರು ಐಪಿಎಲ್​ ಚೇತರಿಸಿಕೊಳ್ಳದಿದ್ದರೆ ಟಿ20 ವಿಶ್ವಕಪ್​ನಿಂದಲೂ ಹೊರಬೀಳಲಿದ್ದಾರೆ. ಏಕೆಂದರೆ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಜೂನ್ 4 ರಿಂದ ಟಿ20 ವಿಶ್ವಕಪ್ ಶುರುವಾಗಲಿದೆ. ಹೀಗಾಗಿ ಮುಂದಿನ 2 ತಿಂಗಳಲ್ಲಿ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಬೇಕಿದೆ.

ಇತ್ತ ಎಡಗಾಲಿಗೆ ವಾಕಿಂಗ್ ಬೂಟ್ ಧರಿಸಿ, ಊರುಗೋಲಿನ ನೆರವಿನೊಂದಿಗೆ ನಡೆದಾಡುತ್ತಿರುವ ವಿಡಿಯೋವನ್ನು ಸೂರ್ಯಕುಮಾರ್ ಯಾದವ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿ ಇದೀಗ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದು, ಇದಾಗ್ಯೂ ಐಪಿಎಲ್ ವೇಳೆ ಸಂಪೂರ್ಣವಾಗಿ ಚೇತರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ ಟೀಮ್ ಇಂಡಿಯಾದ 360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್.

ಇದನ್ನೂ ಓದಿ: Suryakumar Yadav: ದಾಖಲೆಯ ಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್

ಟೀಮ್ ಇಂಡಿಯಾಗೆ ಸ್ಕೈ ಅನಿವಾರ್ಯ:

ಟಿ20 ವಿಶ್ವಕಪ್​ನಲ್ಲಿ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯ. ಏಕೆಂದರೆ ಮಧ್ಯಮ ಕ್ರಮಾಂಕದಲ್ಲಿ ಹೊಡಿಬಡಿ ಬ್ಯಾಟಿಂಗ್ ಮೂಲಕ ಸೂರ್ಯ ಅಬ್ಬರಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಅವರು ಟಿ20 ಕ್ರಿಕೆಟ್​ನಲ್ಲಿ ಕೇವಲ 56 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್ ಪೂರೈಸಿದರು. ಅಷ್ಟೇ ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ ಶತಕ ಸಿಡಿಸುವ ಮೂಲಕ ಟೀಮ್ ಇಂಡಿಯಾ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 4 ಸೆಂಚುರಿ ಸಿಡಿಸಿದ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಭಾರತದ ಗೆಲುವಿನಲ್ಲಿ ಸೂರ್ಯಕುಮಾರ್ ಯಾದವ್ ಪಾತ್ರ ಬಹಳ ಮುಖ್ಯವಾಗಿರಲಿದೆ.

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ