AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಸೂರ್ಯಕುಮಾರ್ ಯಾದವ್​ ಕಾಲಿಗೆ ಗಂಭೀರ ಗಾಯ: ವಿಡಿಯೋ ವೈರಲ್

Suryakumar Yadav: ಟಿ20 ವಿಶ್ವಕಪ್​ನಲ್ಲಿ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯ. ಏಕೆಂದರೆ ಮಧ್ಯಮ ಕ್ರಮಾಂಕದಲ್ಲಿ ಹೊಡಿಬಡಿ ಬ್ಯಾಟಿಂಗ್ ಮೂಲಕ ಸೂರ್ಯ ಅಬ್ಬರಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಅವರು ಟಿ20 ಕ್ರಿಕೆಟ್​ನಲ್ಲಿ ಕೇವಲ 56 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್ ಪೂರೈಸಿದರು. ಅಷ್ಟೇ ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ ಶತಕ ಸಿಡಿಸುವ ಮೂಲಕ ಟೀಮ್ ಇಂಡಿಯಾ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 4 ಸೆಂಚುರಿ ಸಿಡಿಸಿದ ದಾಖಲೆಯನ್ನೂ ಕೂಡ ಬರೆದಿದ್ದಾರೆ.

VIDEO: ಸೂರ್ಯಕುಮಾರ್ ಯಾದವ್​ ಕಾಲಿಗೆ ಗಂಭೀರ ಗಾಯ: ವಿಡಿಯೋ ವೈರಲ್
Suryakumar Yadav
TV9 Web
| Edited By: |

Updated on: Dec 24, 2023 | 8:32 AM

Share

ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ (Suryakumar Yadav) ಗಂಭೀರವಾಗಿ ಗಾಯಗೊಂಡಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದ ವೇಳೆ ಸೂರ್ಯ ಗಾಯಕ್ಕೆ ತುತ್ತಾಗಿದ್ದರು. ಇದಾಗ್ಯೂ ಈ ಗಾಯ ಗಂಭೀರವಲ್ಲ ಎನ್ನಲಾಗಿತ್ತು. ಆದರೀಗ ಸೂರ್ಯಕುಮಾರ್ ನಡೆದಾಡಲು ಊರುಗೋಲಿನ ನೆರವು ಪಡೆಯುತ್ತಿರುವುದು ವಿಡಿಯೋದಿಂದ ಬಹಿರಂಗವಾಗಿದೆ.

ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಸೂರ್ಯಕುಮಾರ್ ಯಾದವ್ ಅವರ ಪಾದವು ಟ್ವಿಸ್ಟ್ ಆಗಿತ್ತು. ಹೀಗಾಗಿ ಅವರು ಅರ್ಧದಲ್ಲೇ ಮೈದಾನ ತೊರೆದಿದ್ದರು. ಆ ಬಳಿಕ ಗಾಯದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬಿದ್ದಿರಲಿಲ್ಲ.

ಇದೀಗ ಗಾಯವು ಗಂಭೀರವಾಗಿರುವ ಕಾರಣ ಸೂರ್ಯಕುಮಾರ್ ಯಾದವ್ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲದೆ ಐಪಿಎಲ್​ಗೂ ಮುನ್ನ ಅವರು ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡುವುದಿಲ್ಲ ಎಂದು ತಿಳಿದು ಬಂದಿದೆ.

ಒಂದು ವೇಳೆ ಅವರು ಐಪಿಎಲ್​ ಚೇತರಿಸಿಕೊಳ್ಳದಿದ್ದರೆ ಟಿ20 ವಿಶ್ವಕಪ್​ನಿಂದಲೂ ಹೊರಬೀಳಲಿದ್ದಾರೆ. ಏಕೆಂದರೆ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಜೂನ್ 4 ರಿಂದ ಟಿ20 ವಿಶ್ವಕಪ್ ಶುರುವಾಗಲಿದೆ. ಹೀಗಾಗಿ ಮುಂದಿನ 2 ತಿಂಗಳಲ್ಲಿ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಬೇಕಿದೆ.

ಇತ್ತ ಎಡಗಾಲಿಗೆ ವಾಕಿಂಗ್ ಬೂಟ್ ಧರಿಸಿ, ಊರುಗೋಲಿನ ನೆರವಿನೊಂದಿಗೆ ನಡೆದಾಡುತ್ತಿರುವ ವಿಡಿಯೋವನ್ನು ಸೂರ್ಯಕುಮಾರ್ ಯಾದವ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿ ಇದೀಗ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದು, ಇದಾಗ್ಯೂ ಐಪಿಎಲ್ ವೇಳೆ ಸಂಪೂರ್ಣವಾಗಿ ಚೇತರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ ಟೀಮ್ ಇಂಡಿಯಾದ 360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್.

ಇದನ್ನೂ ಓದಿ: Suryakumar Yadav: ದಾಖಲೆಯ ಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್

ಟೀಮ್ ಇಂಡಿಯಾಗೆ ಸ್ಕೈ ಅನಿವಾರ್ಯ:

ಟಿ20 ವಿಶ್ವಕಪ್​ನಲ್ಲಿ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯ. ಏಕೆಂದರೆ ಮಧ್ಯಮ ಕ್ರಮಾಂಕದಲ್ಲಿ ಹೊಡಿಬಡಿ ಬ್ಯಾಟಿಂಗ್ ಮೂಲಕ ಸೂರ್ಯ ಅಬ್ಬರಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಅವರು ಟಿ20 ಕ್ರಿಕೆಟ್​ನಲ್ಲಿ ಕೇವಲ 56 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್ ಪೂರೈಸಿದರು. ಅಷ್ಟೇ ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ ಶತಕ ಸಿಡಿಸುವ ಮೂಲಕ ಟೀಮ್ ಇಂಡಿಯಾ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 4 ಸೆಂಚುರಿ ಸಿಡಿಸಿದ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಭಾರತದ ಗೆಲುವಿನಲ್ಲಿ ಸೂರ್ಯಕುಮಾರ್ ಯಾದವ್ ಪಾತ್ರ ಬಹಳ ಮುಖ್ಯವಾಗಿರಲಿದೆ.

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು